Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯಶಸ್ವಿ ಸಕ್ರಿಯ ಭಾರತೀಯ ಚಿತ್ರಕಾರರ...

ಯಶಸ್ವಿ ಸಕ್ರಿಯ ಭಾರತೀಯ ಚಿತ್ರಕಾರರ ಪಟ್ಟಿಯಲ್ಲಿ ಅನೀಶ್ ಕಪೂರ್‌ಗೆ ಅಗ್ರ ಸ್ಥಾನ

ವಾರ್ತಾಭಾರತಿವಾರ್ತಾಭಾರತಿ18 May 2019 12:16 AM IST
share
ಯಶಸ್ವಿ ಸಕ್ರಿಯ ಭಾರತೀಯ ಚಿತ್ರಕಾರರ ಪಟ್ಟಿಯಲ್ಲಿ ಅನೀಶ್ ಕಪೂರ್‌ಗೆ ಅಗ್ರ ಸ್ಥಾನ

ಹೊಸದಿಲ್ಲಿ, ಮೇ 17: ಕಳೆದ (2018-19) ಸಾಲಿನಲ್ಲಿ ತಾನು ಬರೆದ ಚಿತ್ರಕಲೆಗಳ ಹರಾಜಿನಲ್ಲಿ 168.25 ಕೋಟಿ ರೂ. ಗಳಿಸಿರುವ ಅನೀಶ್ ಕಪೂರ್ ಜಾಗತಿಕ ಯಶಸ್ವೀ ಸಕ್ರಿಯ ಭಾರತೀಯ ಚಿತ್ರಕಾರರ ಪಟ್ಟಿಯಲ್ಲಿ ಅಗ್ರಸ್ಥಾನ ಗಳಿಸಿದ್ದಾರೆ ಎಂದು ಇತ್ತೀಚೆಗೆ ನಡೆದ ಸಮೀಕ್ಷೆಯ ವರದಿ ತಿಳಿಸಿದೆ.

ಲಂಡನ್‌ನಲ್ಲಿ ನೆಲೆಸಿರುವ 65 ವರ್ಷದ ಅನೀಶ್ ಕಪೂರ್ ಅವರು ರಚಿಸಿರುವ ಹೆಸರಿಡದ ಸ್ಟೈನ್‌ಲೆಸ್ ಸ್ಟೀಲ್ ಶಿಲ್ಪಕೃತಿ ಕಳೆದ ವರ್ಷದ ಅಕ್ಟೋಬರ್‌ನಲ್ಲಿ ನಡೆದ ಕ್ರಿಸ್ಟೀಸ್ ಹರಾಜು ಪ್ರಕ್ರಿಯೆಯಲ್ಲಿ 9.31 ಕೋಟಿ ರೂ.ಗೆ ಮಾರಾಟವಾಗಿದೆ. ಸಮಕಾಲೀನ ಕಲಾವಿದರಲ್ಲಿ ಅನೀಶ್ ಕಪೂರ್ ಅವರ ರಚನೆಗಳು ವೌಲ್ಯದ ದೃಷ್ಟಿಯಲ್ಲಿ ಅತ್ಯಂತ ಹೆಚ್ಚಿನ ಬೇಡಿಕೆ ಗಳಿಸಿದೆ ಮತ್ತು ಕಳೆದ ಸಾಲಿನಲ್ಲಿ ಹರಾಜು ಪ್ರಕ್ರಿಯೆಯಲ್ಲಿ ಅತೀ ಹೆಚ್ಚು ಮೊತ್ತಕ್ಕೆ ಮಾರಾಟವಾಗಿದೆ . ಕಳೆದ ಸಾಲಿನಲ್ಲಿ ಇವರು ರಚಿಸಿದ 102 ಚಿತ್ರಕಲೆಗಳು ಮಾರಾಟವಾಗಿದೆ ಎಂದು ಸರ್ವೆಯ ವರದಿ ತಿಳಿಸಿದೆ. ಚೀನಾದ ಶಾಂಘೈ ಮೂಲದ ಪ್ರಕಾಶನ ಸಂಸ್ಥೆ ‘ಹ್ಯೂಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್’ 2018ರ ಎಪ್ರಿಲ್‌ನಿಂದ 2019ರ ಮಾರ್ಚ್‌ವರೆಗಿನ ಅವಧಿಯಲ್ಲಿ ಭಾರತೀಯ ಸಕ್ರಿಯ ಚಿತ್ರಕಾರರ ಚಿತ್ರಕೃತಿಗಳು ಹರಾಜು ಪ್ರಕ್ರಿಯೆಯಲ್ಲಿ ಗಳಿಸಿದ ಮೊತ್ತದ ಆಧಾರದಲ್ಲಿ ಅಗ್ರ 50 ಚಿತ್ರಕಾರರ ಪಟ್ಟಿಯನ್ನು ತಯಾರಿಸಿದೆ. ಈ ವರ್ಷ ಅತೀ ಹೆಚ್ಚಿನ ಮೊತ್ತಕ್ಕೆ ಮಾರಾಟವಾದ ಭಾರತೀಯ ಕಲಾವಿದರ ರಚನೆಯೆಂದರೆ ಅಕ್ಬರ್ ಪದಮ್‌ಸಿಯವರ ‘ನೇಕೆಡ್ ನ್ಯೂಡ್’. 2018ರ ಜೂನ್‌ನಲ್ಲಿ ಪುಂದೋಲೆಯಲ್ಲಿ ನಡೆದ ಹರಾಜು ಪ್ರಕ್ರಿಯೆಯಲ್ಲಿ ಈ ಚಿತ್ರ 11.70 ಕೋಟಿ ರೂ.ಗೆ ಮಾರಾಟವಾಗಿದೆ.

ಕೃಷೇನ್ ಖನ್ನಾ, ಜೋಗೆನ್ ಚೌಧುರಿ, ರಾಖಿಬ್ ಶಾ, ಸಕ್ತಿ ಬರ್ಮನ್, ಥೋಟ ವೈಕುಂಟಮ್ ಹಾಗೂ ಹಿಮ್ಮತ್ ಶಾ ಮುಂತಾದ ಚಿತ್ರಕಾರರ ಹೆಸರೂ ಈ ಪಟ್ಟಿಯಲ್ಲಿದೆ. ಈ ಪಟ್ಟಿಯಲ್ಲಿ ಶೇ.24ರಷ್ಟು ಮಹಿಳೆಯರು ಇರುವುದು ಗಮನಾರ್ಹವಾಗಿದೆ. ಸಕ್ರಿಯ ಮಹಿಳಾ ಚಿತ್ರಕಾರರ ಸಾಲಿನಲ್ಲಿ ಅರ್ಪಿತಾ ಸಿಂಗ್ ಪ್ರಥಮ ಸ್ಥಾನದಲ್ಲಿದ್ದು, ಕಳೆದ ವರ್ಷ ಇವರು ರಚಿಸಿದ 12 ಚಿತ್ರಕಲೆಗಳು 5.25 ಕೋಟಿ ರೂ. ಗಳಿಸಿವೆ. ಇವರು ರಚಿಸಿದ ‘ಅಶ್ವಮೇಧ’ ಚಿತ್ರಕಲೆ 1.87 ಕೋಟಿ ರೂ.ಗೆ ಮಾರಾಟವಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X