Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಹಿಳೆಯ ಬರ್ಬರ ಹತ್ಯೆ ಪ್ರಕರಣ:...

ಮಹಿಳೆಯ ಬರ್ಬರ ಹತ್ಯೆ ಪ್ರಕರಣ: ಕೃತ್ಯವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಹಂತಕ ಜೋನಸ್

ವಾರ್ತಾಭಾರತಿವಾರ್ತಾಭಾರತಿ18 May 2019 9:11 PM IST
share
ಮಹಿಳೆಯ ಬರ್ಬರ ಹತ್ಯೆ ಪ್ರಕರಣ: ಕೃತ್ಯವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಹಂತಕ ಜೋನಸ್

ಮಂಗಳೂರು, ಮೇ 18: ನಗರದ ಅಮರ್ ಆಳ್ವ ಲೈನ್ ನಿವಾಸಿ ಶ್ರೀಮತಿ ಶೆಟ್ಟಿ (35) ಕೊಲೆ ಪ್ರಕರಣದ ಪ್ರಮುಖ ಆರೋಪಿ ಜೋನಸ್ ಜೂಲಿನ್ ಸ್ಯಾಮ್ಸನ್ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಬಳಿಕ ಪೊಲೀಸರು ಆರೋಪಿಯನ್ನು ಕೃತ್ಯಕ್ಕೆ ಬಳಸಿದ ನಗರದ ನಾನಾ ಸ್ಥಳಗಳಿಗೆ ಕರೆದೊಯ್ದು ಸ್ಥಳ ಮಹಜರು ನಡೆಸಿದರು.

ಆರೋಪಿ ಶನಿವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡ ಬಳಿಕ ಕದ್ರಿ ಠಾಣೆಗೆ ಕರೆದೊಯ್ಯಲಾಯಿತು. ಅಲ್ಲಿಂದ ಆತನನ್ನು ಕೊಲೆ ಕೃತ್ಯ ನಡೆದ ಆರೋಪಿ ಮನೆಗೆ ಕರೆದೊಯ್ದು ಮನೆಯಲ್ಲಿ ಮಹಜರು ನಡೆಸಲಾಯಿತು. ಈ ಸಂದರ್ಭ ಮನೆಯಲ್ಲಿ ಮಹಿಳೆಯ ನಾಲ್ಕು ಉಂಗುರ ಬೆಡ್ಡ್‌ನ ಅಡಿಯಲ್ಲಿ ಪತ್ತೆಯಾಗಿವೆ. ಇದು ಮಾತ್ರವಲ್ಲದೆ ಕೊಲೆಗೆ ಸಂಬಂಧಿಸಿ ಕೆಲವೊಂದು ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆ ಬಳಿಕ ಮೃತದೇಹ ಪತ್ತೆಯಾದ ನಂದಿಗುಡ್ಡ, ರುಂಡ ಪತ್ತೆಯಾದ ಕದ್ರಿ ಪೆಟ್ರೋಲ್ ಪಂಪ್ ಎದುರಿನ ಜಾಗ ಹಾಗೂ ಕಾಲು ಪತ್ತೆಯಾದ ಕದ್ರಿ ಪಾರ್ಕ್ ಜಾಗ, ಶ್ರೀಮತಿ ಶೆಟ್ಟಿಯ ಸ್ಕೂಟರ್ ಇಡಲಾದ ನಾಗುರಿ ಪ್ರದೇಶಕ್ಕೆ ಕರೆದೊಯ್ದು ಆರೋಪಿಯೊಂದಿಗೆ ಮಹಜರು ನಡೆಸಲಾಯಿತು. ಈ ಸಂದರ್ಭ ಆರೋಪಿ ಕೃತ್ಯದ ಬಗ್ಗೆ ವಿವರವಾಗಿ ಪೊಲೀಸರ ಬಳಿ ಹೇಳಿದ್ದಾನೆ.

ಸ್ಕೂಟರ್ ಕೀ ಪತ್ತೆ: ಶ್ರೀಮತಿ ಶೆಟ್ಟಿಯವರ ಸ್ಕೂಟರ್‌ನ್ನು ನಾಗುರಿ ರಸ್ತೆ ಬದಿ ಮೇ 11ರಂದು ಪಾರ್ಕ್ ಮಾಡಿದ ಆರೋಪಿ, ಸ್ಕೂಟರ್ ಕೀಯನ್ನು ಅಲ್ಲೇ ಹಳೆ ಕಾರುಗಳು ಪಾರ್ಕ್ ಮಾಡಿದ ಸ್ಥಳದಲ್ಲಿ ಬಿಸಾಡಿದ್ದಾನೆ. ಈ ಜಾಗದಲ್ಲಿ ಪೊಲೀಸರು ತುಂಬಾ ಹೊತ್ತು ಹುಡುಕಿದ ಬಳಿಕ ಸ್ಕೂಟರ್ ಕೀ ಪತ್ತೆಯಾಗಿದೆ.

ಪ್ರಕರಣ ವಿವರ

ಶ್ರೀಮತಿ ಶೆಟ್ಟಿ ಮೇ 11ರಂದು ಬೆಳಗ್ಗೆ ವೆಲೆನ್ಸಿಯಾ ಸೂಟರ್‌ಪೇಟೆಯಲ್ಲಿರುವ ಜೋನಸ್ ಮನೆಗೆ ಸಾಲದ ಹಣ ಕೇಳಲು ಹೋದಾಗ ಮಾರಕಾಯುಧದಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದ. ಬಳಿಕ ಜೋನಸ್ ಮತ್ತು ಆತನ ಪತ್ನಿ ವಿಕ್ಟೋರಿಯಾ ಮಥಾಯಿಸ್ ಸೇರಿ ಮೃತದೇಹವನ್ನು ಅಡುಗೆ ಮನೆಯಲ್ಲಿಟ್ಟಿದ್ದರು.

ಘಟನೆ ಬಳಿಕ ವಿಕ್ಟೋರಿಯಾ ತಾಯಿ ಮನೆಗೆ ಹೋಗಿದ್ದರೆ, ಆರೋಪಿ ಜೋನಸ್ ಹೊರಗೆ ಹೋದಾತ ಸಂಜೆ ವೇಳೆ ಮರಳಿ ಮನೆಗೆ ಬಂದು ಮೃತದೇಹವನ್ನು ಮೂರು ಭಾಗವಾಗಿ ತುಂಡರಿಸಿದ್ದಾನೆ. ಬಳಿಕ ಮೃತದೇಹವನ್ನು ಸ್ಕೂಟರ್‌ನಲ್ಲಿ ಕೊಂಡೊಯ್ದು ಕದ್ರಿ, ಕದ್ರಿಪಾರ್ಕ್, ನಂದಿಗುಡ್ಡದಲ್ಲಿ ಬಿಸಾಡಿದ್ದಾನೆ. ಮೇ 12ರಂದು ಪ್ರಕರಣ ಬೆಳಕಿಗೆ ಬಂದಿದ್ದು ಕದ್ರಿ ಪೆಟ್ರೋಲ್ ಪಂಪ್ ಎದುರು ರುಂಡ, ನಂದಿಗುಡ್ಡೆಯಲ್ಲಿ ದೇಹ ಹಾಗೂ ಮೇ 15ರಂದು ಕದ್ರಿ ಪಾರ್ಕ್ ರಸ್ತೆಯಲ್ಲಿ ಕಾಲು ಪತ್ತೆಯಾಗಿತ್ತು.

ಶ್ರೀಮತಿ ಶೆಟ್ಟಿಯ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನಗರ ಪೊಲೀಸರು ಮೂರೇ ದಿನದಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X