Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಲೆಕ್ಷನ್ ಕಮಿಷನ್ ಈಗ ‘ಎಲೆಕ್ಷನ್...

ಎಲೆಕ್ಷನ್ ಕಮಿಷನ್ ಈಗ ‘ಎಲೆಕ್ಷನ್ ಒಮಿಷನ್’ ಆಗಿದೆ: ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ18 May 2019 9:33 PM IST
share
ಎಲೆಕ್ಷನ್ ಕಮಿಷನ್ ಈಗ ‘ಎಲೆಕ್ಷನ್ ಒಮಿಷನ್’ ಆಗಿದೆ: ಕಾಂಗ್ರೆಸ್

 ಹೊಸದಿಲ್ಲಿ,ಮೇ 18: ಚುನಾವಣಾ ಆಯೋಗದಲ್ಲಿ ಬಿರುಕುಂಟಾಗಿದೆ ಎಂಬ ವರದಿಗಳ ನಡುವೆಯೇ ಆಯೋಗವನ್ನು ಟೀಕಿಸಿರುವ ಕಾಂಗ್ರೆಸ್,ಎಲೆಕ್ಷನ್ ಕಮಿಷನ್ ಈಗ ‘ಎಲೆಕ್ಷನ್ ಒಮಿಷನ್(ಬಿಟ್ಟುಬಿಡುವ)’ ಆಗಿದೆ ಎಂದು ಹೇಳಿದೆ.

ತನ್ನ ಅಲ್ಪಮತದ ನಿರ್ಧಾರಗಳನ್ನು ದಾಖಲಿಸಿಕೊಳ್ಳುತ್ತಿಲ್ಲ ಎಂಬ ಕಾರಣದಿಂದಾಗಿ ಚುನಾವಣಾ ಆಯುಕ್ತ ಅಶೋಕ ಲವಾಸಾ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘನೆಗಳನ್ನು ನಿರ್ಧರಿಸುವ ಆಯೋಗದ ಸಭೆಗಳಿಂದ ದೂರವುಳಿದಿದ್ದಾರೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಈ ಹೇಳಿಕೆ ಹೊರಬಿದ್ದಿದೆ.

ಇದು ಸಾಂವಿಧಾನಿಕ ನಿಯಮಗಳು,ಸ್ಥಾಪಿತ ಸಂಪ್ರದಾಯಗಳು ಮತ್ತು ಔಚಿತ್ಯದ ಹಾಡಹಗಲೇ ನಡೆಯುತ್ತಿರುವ ಕೊಲೆಯಾಗಿದೆ ಎಂದು ಹೇಳಿದ ಕಾಂಗ್ರೆಸ್‌ನ ಮುಖ್ಯವಕ್ತಾರ ರಣದೀಪ ಸಿಂಗ್ ಸುರ್ಜೆವಾಲಾ ಅವರು,ಚುನಾವಣಾ ಆಯೋಗದ ನಿಯಮಗಳು ಸರ್ವಾನುಮತದ ಅಭಿಪ್ರಾಯಕ್ಕೆ ಆದ್ಯತೆಯನ್ನು ನೀಡಿವೆ,ಆದರೆ ಸರ್ವಾನುಮತದ ಅನುಪಸ್ಥಿತಿಯಲ್ಲಿ ಬಹುಮತದ ನಿರ್ಧಾರಕ್ಕೆ ಅವಕಾಶ ನೀಡಿವೆ. ಸಾಂವಿಧಾನಿಕ ಸಂಸ್ಥೆಯಾಗಿರುವ ಆಯೋಗದಲ್ಲಿ ಅಲ್ಪಮತದ ಅಭಿಪ್ರಾಯವನ್ನು ದಾಖಲಿಸಬೇಕು,ಆದರೆ ಪ್ರಧಾನಿ ನರೇಂದ್ರ ಮೋದಿ-ಬಿಜೆಪಿ ಅಧ್ಯಕ್ಷ ಅಮಿತ್ ಶಾ ಜೋಡಿಯ ರಕ್ಷಣೆಗಾಗಿ ಇದನ್ನು ದಮನಿಸಲಾಗುತ್ತಿದೆ ಎಂದರು.

ನೀತಿಸಂಹಿತೆ ಉಲ್ಲಂಘನೆಗಳಲ್ಲಿ ಮೋದಿ ಮತ್ತು ಶಾ ಅವರಿಗೆ ಚುನಾವಣಾ ಆಯೋಗವು ನೀಡಿರುವ ಐದು ಕ್ಲೀನ್ ಚಿಟ್‌ಗಳನ್ನು ಲವಾಸಾ ವಿರೋಧಿಸಿದ್ದರು ಎಂದು ಈ ಹಿಂದೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ಆಯೋಗವು ಒಟ್ಟು ಇಂತಹ ಆರು ಪ್ರಕರಣಗಳಲ್ಲಿ ಮೋದಿಯರಿಗೆ ಕ್ಲೀನ್ ಚಿಟ್ ನೀಡಿದೆ,ಆದರೆ ಆಯೋಗದ ಆದೇಶಗಳಲ್ಲಿ ಲವಾಸಾರ ಭಿನ್ನಾಭಿಪ್ರಾಯಗಳನ್ನು ದಾಖಲಿಸಿರಲಿಲ್ಲ.

ಇದು ಮೋದಿ ಸರಕಾರವು ಆಯೋಗದ ಮೇಲೆ ಹೇರುತ್ತಿರುವ ಒತ್ತಡದ ಪ್ರಮಾಣವನ್ನು ತೋರಿಸುತ್ತದೆ ಮತ್ತು ಇದು ಚುನಾವಣಾ ಆಯೋಗದ ಸಮಗ್ರತೆಗೆ ತೀವ್ರ ಕಳಂಕವನ್ನುಂಟು ಮಾಡಿದೆ ಎಂದ ಸುರ್ಜೆವಾಲಾ,ಸಾಂಸ್ಥಿಕ ಸಮಗ್ರತೆಗೆ ಚ್ಯುತಿ ತರುವುದು ಬಿಜೆಪಿ ಸರಕಾರದ ಪ್ರಮುಖ ಗುರುತು ಆಗಿದೆ ಮತ್ತು ಮೋದಿ ಅವರೇ ಸ್ವತಃ ಭಾರತದಲ್ಲಿಯ ಎಲ್ಲ ಸಂಸ್ಥೆಗಳನ್ನು ನಾಶಗೊಳಿಸುವ ಹೊಣೆಯನ್ನು ವಹಿಸಿಕೊಂಡಿದ್ದಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X