ರಾಹುಲ್ ನಂತರ ಅಖಿಲೇಶ್, ಮಾಯಾವತಿಯನ್ನು ಭೇಟಿಯಾದ ಚಂದ್ರಬಾಬು ನಾಯ್ಡು
ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ವಿಪಕ್ಷಗಳ ಸಿದ್ಧತೆ
ಹೊಸದಿಲ್ಲಿ, ಮೇ 18: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಸಲುವಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ನಂತರ ಆಂಧ್ರ ಸಿಎಂ ಎನ್. ಚಂದ್ರಬಾಬು ನಾಯ್ಡು ಶನಿವಾರ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಮತ್ತು ಬಿಎಸ್ಪಿ ನಾಯಕಿ ಮಾಯಾವತಿಯವರನ್ನು ಭೇಟಿಯಾಗಿದ್ದಾರೆ.
ಇದೇ ಸಂದರ್ಭ ಅವರು ಎನ್ ಸಿಪಿ ನಾಯಕ ಶರದ್ ಪವಾರ್ ರನ್ನು ಭೇಟಿಯಾದರು. ಮೇ 23ರಂದು ವಿಪಕ್ಷ ನಾಯಕರ ಸಭೆಯನ್ನು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಯೋಜಿಸಿದ್ದಾರೆ.
Next Story