Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರಾದೇಶಿಕ್ಷ ಪಕ್ಷಗಳ ಸಹಕಾರವಿಲ್ಲದೆ...

ಪ್ರಾದೇಶಿಕ್ಷ ಪಕ್ಷಗಳ ಸಹಕಾರವಿಲ್ಲದೆ ಸರಕಾರ ರಚನೆ ಅಸಾಧ್ಯ: ಎಚ್.ಡಿ.ದೇವೇಗೌಡ

ವಾರ್ತಾಭಾರತಿವಾರ್ತಾಭಾರತಿ18 May 2019 10:09 PM IST
share
ಪ್ರಾದೇಶಿಕ್ಷ ಪಕ್ಷಗಳ ಸಹಕಾರವಿಲ್ಲದೆ ಸರಕಾರ ರಚನೆ ಅಸಾಧ್ಯ: ಎಚ್.ಡಿ.ದೇವೇಗೌಡ

ಬೆಂಗಳೂರು, ಮೇ 18: ಲೋಕಸಭಾ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿಗೆ ಯಾವುದೇ ಕಾರಣಕ್ಕೂ ಮತ್ತೆ ಬಹುಮತ ಬರುವುದಿಲ್ಲ. ಅದೇ ರೀತಿ, ಕಾಂಗ್ರೆಸ್ ಪಕ್ಷಕ್ಕೂ ಬಹುಮತ ಸಿಗುವುದಿಲ್ಲ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಭವಿಷ್ಯ ನುಡಿದಿದ್ದಾರೆ.

ಶನಿವಾರ ಪದ್ಮನಾಭ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಅಭಿಮಾನಿಗಳು, ಕುಟುಂಬದ ಸದಸ್ಯರ ಜೊತೆ ಕೇಕ್ ಕತ್ತರಿಸುವ ಮೂಲಕ ತಮ್ಮ 87ನೇ ಹುಟ್ಟುಹಬ್ಬ ಆಚರಿಸಿಕೊಂಡ ಅವರು ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಷ್ಟ್ರೀಯ ಪಕ್ಷದವರು ಪ್ರಧಾನಿಯಾಗಬಹುದು. ಆದರೆ, ಪ್ರಾದೇಶಿಕ ಪಕ್ಷಗಳ ಸಹಕಾರವಿಲ್ಲದೆ ಯಾರೂ ಕೂಡ ಕೇಂದ್ರದಲ್ಲಿ ಸರಕಾರ ರಚನೆ ಮಾಡಲು ಸಾಧ್ಯವಿಲ್ಲ. ಆದುದರಿಂದ, ರಾಷ್ಟ್ರೀಯ ಪಕ್ಷಗಳಿಗೆ ಪ್ರಾದೇಶಿಕ ಪಕ್ಷಗಳ ಬೆಂಬಲ ಅಗತ್ಯ. ಇಲ್ಲದಿದ್ದರೆ, ಐಕ್ಯಮತ್ಯದ ಸರಕಾರ ರಚನೆ ಮಾಡುವುದು ಕಷ್ಟ ಎಂದು ಅವರು ಹೇಳಿದರು.

ಬಿಜೆಪಿ ಜೊತೆಯೂ ಕೆಲವು ಪ್ರಾದೇಶಿಕ ಪಕ್ಷಗಳು ಕೈ ಜೋಡಿಸಿವೆ. ಪ್ರಧಾನಿ ನರೇಂದ್ರಮೋದಿಯ ನಡವಳಿಕೆಯಿಂದ ದೇಶದ ಜನರು ಬೇಸತ್ತಿದ್ದಾರೆ. ಆದುದರಿಂದ, ಅವರು ಹೇಳಿದಂತೆ ಬಿಜೆಪಿಯವರು 300 ಸೀಟುಗಳನ್ನು ಗೆಲ್ಲುವುದು ಅಷ್ಟು ಸುಲಭದ ಮಾತಲ್ಲ ಎಂದು ದೇವೇಗೌಡ ತಿಳಿಸಿದರು.

ವಿಧಾನಸಭೆ ವಿರ್ಸಜಿಸಿ ಚುನಾವಣೆಗೆ ಹೋಗುವುದು ಸೂಕ್ತ ಎಂದು ಜೆಡಿಎಸ್ ಹಿರಿಯ ನಾಯಕ ಬಸವರಾಜ ಹೊರಟ್ಟಿ ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಿನದಿಂದಲೂ ಮೈತ್ರಿ ಸರಕಾರದಲ್ಲಿ ಗೊಂದಲ ಇದ್ದೇ ಇದೆ ಎಂದರು.

ಯಾರು, ಯಾರು ಏನು ಮಾತನಾಡಿದರು ಎಂದು ಹೇಳಲು ಹೋಗುವುದಿಲ್ಲ. ಆದರೆ, ರಾಜ್ಯದಲ್ಲಿ ಮೈತ್ರಿ ಸರಕಾರ ಉಳಿಯುತ್ತದೆ. ಒಪ್ಪಂದದಂತೆ ಐದು ವರ್ಷ ಅಧಿಕಾರ ಪೂರೈಸಲಿದೆ. ಕಾಂಗ್ರೆಸ್ ನಾಯಕರಾದ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿಯ ಒಪ್ಪಿಗೆಯಿಂದ ಈ ಮೈತ್ರಿ ಆಗಿದೆ ಎಂದು ದೇವೇಗೌಡ ಹೇಳಿದರು.

ಕುಮಾರಸ್ವಾಮಿ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಲಿಖಿತವಾಗಿಯೇ ಕಾಂಗ್ರೆಸ್ ವರಿಷ್ಠರು ಬರೆದು ಕೊಟ್ಟಿದ್ದಾರೆ. ಆದುದರಿಂದ, ಈ ಸಂಬಂಧ ಯಾರಿಗೂ ಅನುಮಾನಗಳು ಬೇಡ ಎಂದು ದೇವೇಗೌಡ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X