Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಶ್ರೀಕೃಷ್ಣಮಠ ಕೋಮುವಾದದ ಕೇಂದ್ರ:...

ಉಡುಪಿ ಶ್ರೀಕೃಷ್ಣಮಠ ಕೋಮುವಾದದ ಕೇಂದ್ರ: ಅಮೀನ್ ಮಟ್ಟು

ವಾರ್ತಾಭಾರತಿವಾರ್ತಾಭಾರತಿ19 May 2019 5:34 PM IST
share
ಉಡುಪಿ ಶ್ರೀಕೃಷ್ಣಮಠ ಕೋಮುವಾದದ ಕೇಂದ್ರ: ಅಮೀನ್ ಮಟ್ಟು

ಮಂಗಳೂರು, ಮೇ 19: ಪೇಜಾವರ ಶ್ರೀಗಳಂತಹ ಕ್ರಾಂತಿಕಾರಿಗಳು ಯಾರೂ ಇಲ್ಲ. ಇಂದಿಗೂ ಪೇಜಾವರ ಶ್ರೀಗಳು ರಾಮಮಂದಿರ ನಿರ್ಮಾಣದ ಬಗ್ಗೆ ಹೇಳಿಕೆಗಳನ್ನು ಕೊಡುತ್ತಲೇ ಇದ್ದಾರೆ. ಶ್ರೀಕೃಷ್ಣಮಠ ಕೋಮುವಾದದ ಕೇಂದ್ರವಾಗಿದೆ ಎಂದು ಪತ್ರಕರ್ತ, ಚಿಂತ್ರಕ ದಿನೇಶ್ ಅಮೀನ್ ಮಟ್ಟು ಆರೋಪಿಸಿದ್ದಾರೆ.

ನಗರದ ಬಾವುಟಗುಡ್ಡೆಯಲ್ಲಿನ ಸಂತ ಅಲೋಶಿಯಸ್ ಕಾಲೇಜು ಸಭಾಂಗಣದಲ್ಲಿ ರವಿವಾರ ನಡೆದ ತೀಸ್ತಾ ಸೆಟಲ್ವಾಡ್ ಅವರ ಕನ್ನಡ ಅನುವಾದಿತ ‘ಸಂವಿಧಾನದ ಕಾಲಾಳು’ ಕೃತಿ ಬಿಡುಗಡೆ ಮತ್ತು ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ಪೇಜಾವರ ಶ್ರೀಗಳಿದ್ದ ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಮುಸ್ಲಿಮರಿಗಾಗಿ ಈ ಹಿಂದೆ ಇಫ್ತಾರ್‌ಕೂಟಗಳನ್ನು ಆಯೋಜಿಸಲಾಗಿತ್ತು. ಮುಸ್ಲಿಮರಂತೂ ಖುಷಿಯಲ್ಲಿ ತೇಲಾಡಿದ್ದರು. ಕೋಮುವಾದದ ಬಲೆಯಲ್ಲಿ ಬೀಳದಂತೆ ಕರಾವಳಿಗರು ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ಕೋಮುವಾದ ಎದುರಿಸಿ ಜಾತ್ಯತೀತ, ಪ್ರಜಾಪ್ರಭುತ್ವ ರಕ್ಷಣೆ ಸುಲಭವಲ್ಲ. ಚುನಾವಣಾ ರಾಜಕಾರಣಕ್ಕಿಂತ ಪ್ರಬಲ ಅಸ್ತ್ರ ಸಾಂಸ್ಕೃತಿಕ ರಾಜಕಾರಣ ಇಂದಿನ ತುರ್ತು ಅಗತ್ಯವಾಗಿದೆ. ವ್ಯವಸ್ಥೆ ಸುಧಾರಣೆಗೆ ಚುನಾವಣೆಗಳು ಅಗತ್ಯ. ಜನಪ್ರತಿನಿಧಿಗಳು ಚುನಾವಣಾ ಅಧಿಕಾರ ಪಡೆದು ಅದನ್ನು ಜನಸಾಮಾನ್ಯರ ಬಳಿ ತೆಗೆದುಕೊಂಡು ಹೋಗುವ ಅಗತ್ಯವಿದೆ ಎಂದು ಹೇಳಿದರು.

ಯಕ್ಷಗಾನ ಕೇಸರಿಮಯ: ಸಾಂಸ್ಕೃತಿಕ ರಾಜಕಾರಣದಲ್ಲಿ ಚುನಾವಣೆ, ಮತದಾನ ಪ್ರಕ್ರಿಯೆಗಳು ಇರುವುದಿಲ್ಲ. ಇಲ್ಲಿ ನಳಿನ್‌ಗೆ ಮತ ನೀಡಿ; ಮೋದಿಗೆ ಮತ ನೀಡಿ ಎನ್ನುವುದಿಲ್ಲ. ಕರಾವಳಿಯಲ್ಲಿ ಯಕ್ಷಗಾನ, ಕೋಲ, ಬೂತಗಳಿವೆ. ಅದರಲ್ಲೂ ಯಕ್ಷಗಾನ ಕುಲಗೆಟ್ಟು ಹೋಗಿದೆ. ಯಕ್ಷಗಾನ ಪೂರ್ಣ ಕೇಸರಿಮಯವಾಗಿದ್ದು, ಮೋದಿ ಪರ ಮತಯಾಚನೆಗೆಂದೇ ಯಕ್ಷಗಾನ ಹಮ್ಮಿಕೊಳ್ಳುತ್ತಿರುವ ಪ್ರಸಂಗಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ ಎಂದರು.

ಬಿಜೆಪಿ ಸೋತರೆ ಗಲಭೆ ಹೆಚ್ಚಳ: 2002 ರಿಂದ ಗುಜರಾತ್‌ನಲ್ಲಿ ಗಲಭೆಗಳು ನಡೆದಿಲ್ಲ. ಸಂಘಪರಿವಾರ ಹಾಗೂ ಬಿಜೆಪಿಗೆ ಅಧಿಕಾರ ಕೊಟ್ಟರೆ ಯಾವುದೇ ಗಲಭೆಗಳು ನಡೆಯುವುದಿಲ್ಲ ಎನ್ನುವುದಕ್ಕೆ ಗುಜರಾತ್ ರಾಜಕಾರಣ ನಿದರ್ಶನ. ಕೇಂದ್ರದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬಾರದಿದ್ದರೆ ಮತ್ತೆ ಗುಜರಾತ್‌ನಲ್ಲಿ ನಡೆದ ಗಲಭೆಗಳು ಮರುಕಳಿಸಲಿವೆ. ನಮಗೆ ಅಧಿಕಾರ ಕೊಟ್ಟರೆ ಬಾಯಿ ಮುಚ್ಚಿಕೊಂಡು ಇರುತ್ತೇವೆ; ಇಲ್ಲದಿದ್ದರೆ ಕೋಮುಗಲಭೆ ನಡೆಸುತ್ತೇವೆ ಎನ್ನುವ ಪರಿಪಾಠವನ್ನು ಬಿಜೆಪಿ ಹೊಂದಿದೆ ಎಂದು ಎಚ್ಚರಿಸಿದರು.

ಮುಸ್ಲಿಮರಲ್ಲಿ ಹೊಸ ನಾಯಕರಿಲ್ಲ: ಮುಸ್ಲಿಮರ ಮನೋಭಾವನೆಯೇ ವಿಶೇಷ. ತೀಸ್ತಾ ಸೆಟಲ್ವಾಡ್ ಬರುತ್ತಾರೆಂದರೆ ‘ನಮ್ಮ ಹಿರೋಯಿನ್ ಬರುತ್ತಿದ್ದಾರೆ’ ಎಂದು ಸಂತಸ ಪಡುತ್ತಾರೆ. ಆದರೆ ಅಲ್ಲಿಯೂ ಮುಸ್ಲಿಂ ಜನಾಂಗದಲ್ಲಿ ಹೊಸ ನಾಯಕರು ಹುಟ್ಟುತ್ತಿಲ್ಲ. 1983-84ರಲ್ಲಿ ಸಾರಾ ಅಬೂಬಕರ್ ಮನೆ ಮೇಲೆ ದುಷ್ಕರ್ಮಿಗಳು ಕಲ್ಲು ಹೊಡೆಯುತ್ತಿದ್ದರು. ಇಂದು ಸಾರಾ ಅಬೂಬಕರ್, ಬೊಳುವಾರ್ ಮುಹಮ್ಮದ್ ಕುಂಞಿ, ಫಕೀರ್ ಮುಹಮ್ಮದ್ ಕಟ್ಪಾಡಿ ಸೇರಿದಂತೆ ಹಲವರು ತೆರೆಮರೆಗೆ ಸರಿದುಕೊಳ್ಳುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ದಿಕ್ಕುತಪ್ಪಿದ ಚಳವಳಿಗಳು: ದೇವರಾಜ ಅರಸು ಅವರ ಶ್ರಮದಿಂದ ಭೂಸುಧಾರಣೆ, ಮೀಸಲಾತಿ ಕಾಯ್ದೆಗಳು ಜಾರಿಗೆ ಬಂದವು. ಅಂದು ಸುಬ್ಬಯ್ಯ ಶೆಟ್ಟರು ಭೂಮಾಲಕರಾಗಿದ್ದರು. ಎಲ್ಲ ಭೂಮಾಲಕರ ವಿರುದ್ಧ ಹೋರಾಟಗಳು ನಡೆದಾಗ ಸುಬ್ಬಯ್ಯ ಶೆಟ್ಟರು ಎಲ್ಲರಿಗೂ ಮಾದರಿಯಾಗಿದ್ದರು. ಇದಿನಬ್ಬ ಅವರು ಹೆಚ್ಚು ಹೋರಾಟ ಮಾಡಿ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ. ಆದರೆ ದೊಡ್ಡ ಮಟ್ಟದ ಹೋರಾಟಗಳು ಇತ್ತೀಚೆಗೆ ನಡೆಯುತ್ತಿಲ್ಲ. ಚಳವಳಿಗಳ ದಿಕ್ಕೇ ತಪ್ಪಿ ಹೋಗಿವೆ ಎಂದು ಅಮೀನ್ ಮಟ್ಟು ಬೇಸರ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X