Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಜ್ಞಾ ಹೇಳಿಕೆಗೆ ಮೋದಿಯ ಅಸಮ್ಮತಿಯಲ್ಲಿ...

ಪ್ರಜ್ಞಾ ಹೇಳಿಕೆಗೆ ಮೋದಿಯ ಅಸಮ್ಮತಿಯಲ್ಲಿ ಬದ್ಧತೆಯ ಕೊರತೆಯಿತ್ತು: ಅಗ್ನಿವೇಶ್

ವಾರ್ತಾಭಾರತಿವಾರ್ತಾಭಾರತಿ19 May 2019 9:28 PM IST
share
ಪ್ರಜ್ಞಾ ಹೇಳಿಕೆಗೆ ಮೋದಿಯ ಅಸಮ್ಮತಿಯಲ್ಲಿ ಬದ್ಧತೆಯ ಕೊರತೆಯಿತ್ತು: ಅಗ್ನಿವೇಶ್

ಹೊಸದಿಲ್ಲಿ, ಮೇ 19: ಗೋಡ್ಸೆಯನ್ನು ದೇಶಭಕ್ತ ಎಂದು ಬಣ್ಣಿಸಿದ ಬಿಜೆಪಿ ನಾಯಕಿ ಪ್ರಜ್ಞಾ ಸಿಂಗ್ ಹೇಳಿಕೆಗೆ ಪ್ರಧಾನಿ ಮೋದಿ ವ್ಯಕ್ತಪಡಿಸಿದ ಅಸಮ್ಮತಿಯಲ್ಲಿ ಬದ್ಧತೆಯ ಕೊರತೆಯಿತ್ತು ಎಂದು ಸಾಮಾಜಿಕ ಹೋರಾಟಗಾರ ಸ್ವಾಮಿ ಅಗ್ನಿವೇಶ್ ಹೇಳಿದ್ದಾರೆ.

ಮಹಾತ್ಮಾ ಗಾಂಧಿಯ ಹಂತಕ ಗೋಡ್ಸೆ ದೇಶಭಕ್ತ ಎಂದಿರುವ ಪ್ರಜ್ಞಾ ಸಿಂಗ್‌ರನ್ನು ತಾನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಶುಕ್ರವಾರ ಪ್ರಧಾನಿ ಮೋದಿ ಹೇಳಿದ್ದರು. ಕಳೆದ ಐದು ವರ್ಷದಲ್ಲಿ ನಡೆದಿರುವುದನ್ನು ಗಮನಿಸಿದರೆ ಹಾಗೂ ಅವರ ಹಲವು ಸಹೋದ್ಯೋಗಿಗಳು ನೀಡಿರುವ ಇದೇ ರೀತಿಯ ಹೇಳಿಕೆಗಳ ಬಗ್ಗೆ ಪ್ರಧಾನಿಯ ಸಹಿಷ್ಣುತೆಯನ್ನು ಗಮನಿಸಿದರೆ ಇದು ಕೇವಲ ಮುಖ ಉಳಿಸಿಕೊಳ್ಳುವ ತಂತ್ರವಾಗಿದೆ. ಅವರ ಹೇಳಿಕೆಯಲ್ಲಿ ಸ್ಪಷ್ಟತೆ ಅಥವಾ ಬದ್ಧತೆಯ ಕೊರತೆಯಿದೆ ಎಂದು ಅಗ್ನಿವೇಶ್ ಹೇಳಿದ್ದಾರೆ.

ತನ್ನ ಹೇಳಿಕೆ ಬಿಜೆಪಿಯ ಹಿರಿಯ ನಾಯಕರಿಗೆ ಇಷ್ಟವಾಗದು ಎಂದು ತಿಳಿದಿದ್ದರೆ ಪ್ರಜ್ಞಾ ಸಿಂಗ್ ಇಂತಹ ಹೇಳಿಕೆ ನೀಡುತ್ತಿರಲಿಲ್ಲ. ಬಾಯಿಗೆ ಬಂದಂತೆ ಹೇಳಿಕೆ ನೀಡುವ ಪ್ರಜ್ಞಾ ಸಿಂಗ್‌ರನ್ನು ತಡೆಯಲು ಮೋದಿಗೆ ಮನಸಿದ್ದರೆ, ಹೇಮಂತ್ ಕರ್ಕರೆ ಕುರಿತು ಪ್ರಜ್ಞಾ ಅಸಂಬದ್ಧ ಹೇಳಿಕೆ ನೀಡಿದಾಗಲೇ ಆಕೆಗೆ ಎಚ್ಚರಿಕೆ ನೀಡಬೇಕಿತ್ತು ಎಂದು ಅಗ್ನಿವೇಶ್ ಹೇಳಿದ್ದಾರೆ.

   ಇಲ್ಲಿರುವ ವಿಷಯ ಹಿಂದುತ್ವದ ಕುರಿತಾದದ್ದಲ್ಲ, ಇದು ಹಿಂಸಾಚಾರದ ಸಿದ್ಧಾಂತದ ವಿಷಯವಾಗಿದೆ. ಮಹಾತ್ಮಾ ಗಾಂಧೀಜಿಯ ಹತ್ಯೆಯು ಭಾರತದ ಚೈತನ್ಯದ ಮೇಲೆ ಹಿಂಸಾಚಾರದ ಸಿದ್ಧಾಂತದ ಪ್ರತಿಪಾದನೆಯ ಸಂಕೇತವಾಗಿದೆ ಎಂದರು. ಲೋಕಸಭಾ ಚುನಾವಣೆಯ ಸಂದರ್ಭ ಚುನಾವಣಾ ಆಯೋಗದ ಪಕ್ಷಪಾತ ಬಯಲಾಗಿದೆ. ಕೋಮು ದೃವೀಕರಣದ ರಾಜಕೀಯದ ಮೂಲಕ ಮೋದಿ ಮತ್ತು ಶಾ ಸೃಷ್ಟಿಸಿರುವ ಗಾಯಗಳು ವಾಸಿಯಾಗಬೇಕಿದ್ದರೆ ಹಲವು ದಶಕಗಳೇ ಬೇಕಾಗಬಹುದು. ಕೋಮುವಾದಿ ರಾಜಕೀಯಕ್ಕೆ ಮಾನ್ಯತೆ ಮತ್ತು ಮಹತ್ವ ನೀಡುವವರು ಮಹಾತ್ಮಾ ಗಾಂಧೀಜಿಯ ಬದಲು ಗೋಡ್ಸೆಯನ್ನು ದೇಶದ ಮಹಾತ್ಮಾ ಎಂದು ಕಾಣಬಯಸುತ್ತಾರೆ ಎಂದರು.

ಬಿಜೆಪಿ ಪ್ರಜ್ಞಾ ಠಾಕೂರ್‌ಗೆ ನೋಟಿಸ್ ಕಳಿಸಿರಬಹುದು. ಆದರೆ ದೇಶದ ಜನತೆ ಶಾ ಮತ್ತು ಮೋದಿಗೆ ನೋಟಿಸ್ ಕಳಿಸಬೇಕು ಎಂದವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X