Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇದು ನಮ್ಮ ಕೊನೆಯ ಮತದಾನ ಎಂದು ಭೀತಿ...

ಇದು ನಮ್ಮ ಕೊನೆಯ ಮತದಾನ ಎಂದು ಭೀತಿ ವ್ಯಕ್ತಪಡಿಸಿರುವ ಜನರು ಯಾರು ಗೊತ್ತಾ ?

ಈ 4,000 ನಾಗರಿಕರಿಗೆ ಸಮುದ್ರದಲ್ಲಿ ಮುಳುಗುವ ಆತಂಕ

ವಾರ್ತಾಭಾರತಿವಾರ್ತಾಭಾರತಿ19 May 2019 10:04 PM IST
share
ಇದು ನಮ್ಮ ಕೊನೆಯ ಮತದಾನ ಎಂದು ಭೀತಿ ವ್ಯಕ್ತಪಡಿಸಿರುವ ಜನರು ಯಾರು ಗೊತ್ತಾ ?

ಘೋರಮಾರಾ ದ್ವೀಪ(ಪ.ಬಂಗಾಳ),ಮೇ 19: ರವಿವಾರ ಲೋಕಸಭಾ ಚುನಾವಣೆಗಳ ಅಂತಿಮ ಹಂತದಲ್ಲಿ ತಾವು ಚಲಾಯಿಸಿದ ಮತಗಳೇ ತಮ್ಮ ದ್ವೀಪವು ಬಂಗಾಳ ಕೊಲ್ಲಿಯಲ್ಲಿ ಮುಳುಗುವ ಮುನ್ನ ತಮ್ಮ ಅಂತಿಮ ಮತದಾನವಾಗಬಹುದು ಎಂದು ಘೋರಮಾರಾ ದ್ವೀಪದ ನಿವಾಸಿಗಳು ಭೀತಿಯನ್ನು ವ್ಯಕ್ತಪಡಿಸಿದ್ದಾರೆ. ಜಾಗತಿಕ ಹವಾಮಾನ ಏರಿಕೆಯಿಂದಾಗಿ ಸುಂದರಬನ ಮುಖಜ ಪ್ರದೇಶದಲ್ಲಿರುವ ಈ ದ್ವೀಪವೀಗ ಮುಳುಗುವ ಅಪಾಯದಲ್ಲಿದೆ. ಈ ದ್ವೀಪದ ಸುಮಾರು 4,000 ಜನರು ಮತದಾರರ ಪಟ್ಟಿಯಲ್ಲಿದ್ದಾರೆ.

“ಉಳ್ಳವರು ದ್ವೀಪವನ್ನು ಈಗಾಗಲೇ ತೊರೆದಿದ್ದಾರೆ. ಆದರೆ ನನ್ನಂತಹ ಬಡವರಿಗೆ ಅದು ಹೇಗೆ ಸಾಧ್ಯ? ಹೊಸ ಬದುಕು ಆರಂಭಿಸಲು ಸರಕಾರವು ನಮಗೆ ನೆರವಾಗುತ್ತದೆ” ಎಂದು ನಾವು ಆಶಿಸಿದ್ದೇವೆ ಎಂದು ದ್ವೀಪದ ಬಡ ಮೀನುಗಾರ ಗೋರಾಂಗ ದೊಲುಯಿ ಸುದ್ದಿಗಾರರ ಬಳಿ ಅಳಲು ತೋಡಿಕೊಂಡರು.

ಕಳೆದ ಮೂರು ದಶಕಗಳಲ್ಲಿ ಉಕ್ಕೇರುತ್ತಿರುವ ಸಮುದ್ರದಿಂದಾಗಿ ತನ್ನ ಅರ್ಧ ಭಾಗವನ್ನು ಕಳೆದುಕೊಂಡಿರುವ ಘೋರಮಾರಾ ಈಗ ಸುಮಾರು ನಾಲ್ಕು ಚ.ಕಿ.ಮೀ.ವಿಸ್ತೀರ್ಣವನ್ನು ಮಾತ್ರ ಹೊಂದಿದೆ.

ತನ್ನ ಮತ ಮತ್ತು ಮೇ 23ರಂದು ಪ್ರಕಟವಾಗಲಿರುವ ಚುನಾವಣಾ ಫಲಿತಾಂಶ ದ್ವೀಪದ ಭವಿಷ್ಯವನ್ನು ಬದಲಿಸಲಿದೆ ಎಂಬ ಆಶಾಭಾವನೆ ಹೊಂದಿರುವ ದೊಲುಯಿ, “ನಮಗೆ ಇಲ್ಲಿ ಬದುಕಲಾಗದು ಎನ್ನುವವರೆಗೂ ನಾವು ಇಲ್ಲಿ ವಾಸಿಸುತ್ತೇವೆ” ಎಂದರು. ಈಗ ಒಂದು ಗಂಟೆ ಲಾಂಚ್‌ನಲ್ಲಿ ಪ್ರಯಾಣದ ಬಳಿಕವಷ್ಟೇ ದ್ವೀಪವಾಸಿಗಳು ಮುಖ್ಯಭೂಮಿಯನ್ನು ಸೇರಬಹುದು.

 ಇನ್ನೊಂದು 2-3 ವರ್ಷಗಳಲ್ಲಿ ಈ ದ್ವೀಪ ಇಲ್ಲವಾಗಬಹುದು, ಪ್ರತಿ ಮಳೆಗಾಲದಲ್ಲಿಯೂ ಇಲ್ಲಿ ಸಮುದ್ರ ಕೊರೆತ ಹೆಚ್ಚುತ್ತಲೇ ಇದೆ ಎಂದು ಘೋರಮಾರಾದಲ್ಲಿ ಚುನಾವಣಾಧಿಕಾರಿ ಸ್ವಾತಿ ಬಂಡೋಪಾಧ್ಯಾಯ ಹೇಳಿದರು. ಇದು ತಡೆಯಲು ಸಾಧ್ಯವಿಲ್ಲದ ನೈಸರ್ಗಿಕ ಪ್ರಕ್ರಿಯೆ ಎನ್ನುವುದು ಜನರಿಗೂ ಗೊತ್ತು ಮತ್ತು ಅವರು ಕ್ರಮೇಣ ಮುಖ್ಯಭೂಮಿಗೆ ವಲಸೆ ಹೋಗುತ್ತಿದ್ದಾರೆ ಎಂದರು.

ಇತ್ತೀಚಿನ ವರ್ಷಗಳಲ್ಲಿ ಸಾವಿರಾರು ಘೋರಮಾರಾ ನಿವಾಸಿಗಳು ದೊಡ್ಡ ದ್ವೀಪವಾಗಿರುವ ಸಾಗರ್ ಅಥವಾ ಮುಖ್ಯಭೂಮಿಯಲ್ಲಿನ ಕಾಕದ್ವೀಪ್‌ಗೆ ವಲಸೆ ಹೋಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X