Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುದ್ದೇಬಿಹಾಳ: ಎರಡು ಗುಂಪುಗಳ ನಡುವೆ...

ಮುದ್ದೇಬಿಹಾಳ: ಎರಡು ಗುಂಪುಗಳ ನಡುವೆ ಮಾರಾಮಾರಿ; 18ಕ್ಕೂ ಹೆಚ್ಚು ಮಂದಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ19 May 2019 10:51 PM IST
share
ಮುದ್ದೇಬಿಹಾಳ: ಎರಡು ಗುಂಪುಗಳ ನಡುವೆ ಮಾರಾಮಾರಿ; 18ಕ್ಕೂ ಹೆಚ್ಚು ಮಂದಿಗೆ ಗಾಯ

ಮುದ್ದೇಬಿಹಾಳ, ಮೇ 19: ಹಳೇ ವೈಷಮ್ಯ ಹಿನ್ನೆಲೆ ತಾಲೂಕಿನ ನೇಬಗೇರಿಯಲ್ಲಿ ಎರಡು ಗುಂಪುಗಳ ನಡುವೆ ರವಿವಾರ ರಾತ್ರಿ ಮಾರಾಮಾರಿ ನಡೆದಿದ್ದು ಮಾರಕಾಸ್ತ್ರಗಳಿಂದ ಪರಸ್ಪರ ಹಲ್ಲೆ ನಡೆಸಿದ್ದರಿಂದ ಎರಡೂ ಗುಂಪಿನ 18ಕ್ಕೂ ಹೆಚ್ಚು ಜನರು ಗಾಯಗೊಂಡು ಇವರಲ್ಲಿ ಓರ್ವ ಮಹಿಳೆ ಸೇರಿ 5 ಮಂದಿಗೆ ಗಂಭೀರ ಗಾಯಗಳಾದ ಘಟನೆ ನಗರದಲ್ಲಿ ನಡೆದಿದೆ.

ವೆಂಕಟೇಶ ನಾಯಕ, ಶಿವಾಜಿ ಲಮಾಣಿ, ರವಿ ಲಮಾಣಿ ಹಾಗೂ ರೇಷ್ಮಾ ಲಮಾಣಿ, ಶ್ರೀಕಾಂತ ನಾಯಕ ಇವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದಲ್ಲದೆ ಒಂದು ಗುಂಪಿನ 4 ಮತ್ತು ಇನ್ನೊಂದು ಗುಂಪಿನ 9 ಜನರಿಗೆ ಗಾಯಗಳಾಗಿದ್ದು ಇವರಿಗೆ ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ.

ಗಾಯಗೊಂಡವರನ್ನು ಚಿಕಿತ್ಸೆಗೆ ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ತಂದ ವಿಷಯ ತಿಳಿದ ಒಂದು ಗುಂಪಿನ ಕೆಲವರು ಹಿಂಬಾಲಿಸಿಕೊಂಡು ಆಸ್ಪತ್ರೆಗೂ ಬಂದು ಕೆಲವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಇದರಿಂದಾಗಿ ಆಸ್ಪತ್ರೆಯಲ್ಲಿ ಕೆಲ ಹೊತ್ತು ಬಿಗುವಿನ ಪರಿಸ್ಥಿತಿ ನಿರ್ಮಾಣಗೊಂಡಿತ್ತು. ಪೊಲೀಸರು ಗುಂಪನ್ನು ಚದುರಿಸುವ ಮೂಲಕ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ವಿಷಯ ತಿಳಿದು ಮುದ್ದೇಬಿಹಾಳ, ಬಸವನ ಬಾಗೇವಾಡಿ, ನಿಡಗುಂದಿ ಠಾಣೆಗಳ ಪಿಎಸೈ ಮತ್ತು ಜಿಲ್ಲಾ ಮೀಸಲು ಪಡೆಯ ಪೊಲೀಸರು ಗ್ರಾಮಕ್ಕೆ ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಹಳೇ ವೈಷಮ್ಯ ಕಾರಣ: ನೇಬಗೇರಿ ಗ್ರಾಮ ಮತ್ತು ತಾಂಡಾ ಎರಡೂ ಒಂದಕ್ಕೊಂದು ಹೊಂದಿಕೊಂಡಿವೆ. ತಾಂಡಾದಲ್ಲಿ ಮತ್ತು ಊರಲ್ಲಿ ಲಂಬಾಣಿ ಸಮಾಜದವರು ವಾಸವಾಗಿದ್ದಾರೆ. ಈ ಸಮಾಜದ ಎರಡು ಕುಟುಂಬಗಳ ನಡುವೆ ಸೇವಾಲಾಲ ಭವನಕ್ಕೆ ಮೀಸಲಿರಿಸಿದ್ದು ಎನ್ನಲಾದ ಜಾಗಕ್ಕೆ ಸಂಬಂಧಿಸಿದಂತೆ ಹಳೇ ವೈಷಮ್ಯ ಇದೆ. ಗ್ರಾಮದಲ್ಲಿ ಒಂದು ಕುಟುಂಬಕ್ಕೆ ಸೇರಿದ ಮಹಿಳೆಯೊಬ್ಬರು ನಿಧನರಾಗಿದ್ದರಿಂದ ಅವರ ಅಂತ್ಯ ಸಂಸ್ಕಾರಕ್ಕೆ ಬಂದಿದ್ದ ಆ ಕುಟುಂಬದ ಬಂಧುಗಳು ಒಂದೆಡೆ ಸೇರಿ ಚರ್ಚಿಸಿದ್ದಾರೆ. ಈ ಸಂದರ್ಭ ಎರಡು ಕುಟುಂಬಗಳ ನಡುವೆ ಇದ್ದ ವೈಷಮ್ಯ ಮತ್ತೆ ಭುಗಿಲೆದ್ದು ಈ ಮಾರಾಮಾರಿ ನಡೆದಿದೆ ಎನ್ನಲಾಗಿದೆ. 

ಖಾಸಗಿ ಜಾಗಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಜಗಳ ಇದೆ. ನಿನ್ನೆ ಊರಲ್ಲಿ ಒಂದು ಕುಟುಂಬಕ್ಕೆ ಸೇರಿದವರೊಬ್ಬರು ನಿಧನರಾಗಿದ್ದರು. ಇವರ ಅಂತ್ಯಸಂಸ್ಕಾರಕ್ಕೆ ವಿವಿಧೆಡೆಯಿಂದ ಬಂಧುಗಳು ಆಗಮಿಸಿದ್ದರು. ಈ ವೇಳೆ ಹಳೇ ವೈಷಮ್ಯ ಉಲ್ಭಣಗೊಂಡು ಈ ಘಟನೆ ನಡೆದಿದೆ. ಮುದ್ದೇಬಿಹಾಳ, ನಿಡಗುಂದಿ, ಬಸವನ ಬಾಗೇವಾಡಿ ಠಾಣೆಗಳಿಂದ ಪಿಎಸೈ, ಒಂದು ಡಿಆರ್ ವ್ಯಾನ್ ಪೊಲೀಸರನ್ನು ಗ್ರಾಮದಲ್ಲಿ ಬಂದೋಬಸ್ತ್ ಗೆ ನಿಯೋಜಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ.
-ಮಹೇಶ್ವರಗೌಡ ಎಸ್.ಯು., ಡಿವೈಎಸ್ಪಿ, ಬಸವನ ಬಾಗೇವಾಡಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X