Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಬ್ಬಾ, ಕೊನೆಗೂ ಲೋಕಸಭಾ ಚುನಾವಣೆ...

ಅಬ್ಬಾ, ಕೊನೆಗೂ ಲೋಕಸಭಾ ಚುನಾವಣೆ ಮುಗಿಯಿತು: ಅಂತಿಮ ಹಂತದಲ್ಲಿ ಶೇ.61ರಷ್ಟು ಮತದಾನ

ಪ.ಬಂಗಾಳದಲ್ಲಿ ಹಿಂಸಾಚಾರ,ಪಂಜಾಬಿನಲ್ಲಿ ಘರ್ಷಣೆಗಳು

ವಾರ್ತಾಭಾರತಿವಾರ್ತಾಭಾರತಿ19 May 2019 11:15 PM IST
share
ಅಬ್ಬಾ, ಕೊನೆಗೂ ಲೋಕಸಭಾ ಚುನಾವಣೆ ಮುಗಿಯಿತು: ಅಂತಿಮ ಹಂತದಲ್ಲಿ ಶೇ.61ರಷ್ಟು ಮತದಾನ

ಹೊಸದಿಲ್ಲಿ,ಮೇ 19: ಏಳು ಹಂತಗಳ ಮ್ಯಾರಥಾನ್ ಲೋಕಸಭಾ ಚುನಾವಣೆ-2019 ರವಿವಾರ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರದ ಘಟನೆಗಳು ಮತ್ತು ಪಂಜಾಬಿನಲ್ಲಿ ಘರ್ಷಣೆಗಳ ನಡುವೆಯೇ ಅಂತಿಮ ಹಂತದ ಮತದಾನದೊಂದಿಗೆ ಅಂತ್ಯಗೊಂಡಿದೆ.

 ಅಲ್ಲಲ್ಲಿ ಇವಿಎಂ ತಾಂತ್ರಿಕ ದೋಷಗಳು ಮತ್ತು ಕೆಲವು ಮತಗಟ್ಟೆಗಳಲ್ಲಿ ಮತದಾನ ಬಹಿಷ್ಕಾರಗಳೂ ವರದಿಯಾಗಿವೆ. ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 59 ಲೋಕಸಭಾ ಕ್ಷೇತ್ರಗಳಲ್ಲಿ ನಡೆದ ಮತದಾನದಲ್ಲಿ ಸುಮಾರು ಶೇ.61ರಷ್ಟು ಮತದಾರರು ತಮ್ಮ ಪರಮೋಚ್ಚ ಹಕ್ಕನ್ನು ಚಲಾಯಿಸಿದರು. ಅಂತಿಮ ಮತದಾನ ಪ್ರಮಾಣವು ಇನ್ನಷ್ಟು ಹೆಚ್ಚುವ ನಿರೀಕ್ಷೆಯಿದೆ ಎಂದು ಚುನಾವಣಾ ಆಯೋಗವು ಹೇಳಿದೆ.

ಅಂತಿಮ ಹಂತದ ಮತದಾನದಲ್ಲಿ ಉತ್ತರ ಪ್ರದೇಶದ ವಾರಣಾಸಿ ಕ್ಷೇತ್ರದಲ್ಲಿ ಪುನರಾಯ್ಕೆ ಬಯಸಿರುವ ಪ್ರಧಾನಿ ನರೇಂದ್ರ ಮೋದಿ, ಬಿಹಾರದ ಪಾಟ್ನಾಸಾಹಿಬ್‌ನಲ್ಲಿ ಪರಸ್ಪರ ಸೆಣಸುತ್ತಿರುವ ಕೇಂದ್ರ ಸಚಿವ ರವಿಶಂಕರ ಪ್ರಸಾದ ಮತ್ತು ಕಾಂಗ್ರೆಸ್ ನಾಯಕ ಶತ್ರುಘ್ನ ಸಿನ್ಹಾ ಸೇರಿದಂತೆ 918 ಅಭ್ಯರ್ಥಿಗಳ ಭವಿಷ್ಯವನ್ನು ಅಂತಿಮ ಹಂತದಲ್ಲಿಯ ಮತದಾರರು ನಿರ್ಧರಿಸಿದ್ದಾರೆ. ಪಂಜಾಬ್ ಮತ್ತು ಉತ್ತರ ಪ್ರದೇಶಗಳ ತಲಾ 13,ಪಶ್ಚಿಮ ಬಂಗಾಳದ 9,ಬಿಹಾರ ಮತ್ತು ಮಧ್ಯಪ್ರದೇಶಗಳ ತಲಾ 8,ಹಿಮಾಚಲ ಪ್ರದೇಶದ 4,ಜಾರ್ಖಂಡ್‌ನ 3 ಮತ್ತು ಚಂಡಿಗಡದ ಏಕೈಕ ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಮಹೇಂದ್ರನಾಥ ಪಾಂಡೆ ಅವರು ಪುನರಾಯ್ಕೆಯನ್ನು ಬಯಸಿರುವ ಚಂದಾವ್ಲಿ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಎಸ್‌ಪಿ ಕಾರ್ಯಕರ್ತರ ನಡುವೆ ಘರ್ಷಣೆಗಳು ನಡೆದಿದ್ದು ವರದಿಯಾಗಿದೆ. ಕ್ಷೇತ್ರದ ತಾರಾ ಜೀವನಪುರ ಗ್ರಾಮದಲ್ಲಿ ದಲಿತರು ಮತ ಚಲಾಯಿಸುವ ಮೊದಲೇ ಅವರ ಬೆರಳುಗಳಿಗೆ ಶಾಯಿ ಗುರುತುಗಳನ್ನು ಹಾಕಲಾಗಿದ್ದು,ಈ ಬಗ್ಗೆ ಎಫ್‌ಐಆರ್ ದಾಖಲಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

  ಅತ್ತ ಪ.ಬಂಗಾಳದ ಉತ್ತರ ಕೋಲ್ಕತಾ ಕ್ಷೇತ್ರದ ಗಿರೀಶ ಪಾರ್ಕ್ ಬಳಿ ಮಧ್ಯಾಹ್ನ ಕಚ್ಚಾ ಬಾಂಬ್ ಎಸೆಯಲಾಗಿತ್ತು ಎಂದು ಬಿಜೆಪಿ ಅಭ್ಯರ್ಥಿ ರಾಹುಲ್ ಸಿನ್ಹಾ ಹೇಳಿದರೆ, ಆ ಪ್ರದೇಶದಲ್ಲಿ ಪಟಾಕಿಗಳನ್ನು ಸಿಡಿಸಲಾಗಿತ್ತು ಮತ್ತು ಮತದಾನ ಶಾಂತಿಯುತವಾಗಿ ನಡೆದಿದೆ ಎಂದು ಪೊಲೀಸರು ತಿಳಿಸಿದರು.

ಕೋಲ್ಕತಾ ಮತ್ತು ಸುತ್ತುಮುತ್ತಲಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಘರ್ಷಣೆಗಳು ನಡೆದಿವೆ. ಡೈಮಂಡ್ ಹಾರ್ಬರ್ ಮತ್ತು ಜಾದವಪುರ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳಾದ ನೀಲಾಂಜನ ರಾಯ್ ಮತ್ತು ಅನುಪಮ್ ಹಝ್ರ ಅವರ ಕಾರುಗಳಿಗೆ ದುಷ್ಕರ್ಮಿಗಳು ಹಾನಿಯನ್ನುಂಟು ಮಾಡಿರುವುದು ವರದಿಯಾಗಿದೆ.

 ಪಂಜಾಬಿನ ಬಠಿಂಡಾದ ತಲ್ವಾಂಡಿ ಸಾಬೋದಲ್ಲಿ ಮತ್ತು ಗುರುದಾಸಪುರದಲ್ಲಿ ಕಾಂಗ್ರೆಸ್ ಮತ್ತು ಅಕಾಲಿ-ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆಗಳು ನಡೆದಿವೆ. ತಲ್ವಾಂಡಿ ಸಾಬೋದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗುಂಡುಗಳನ್ನು ಹಾರಿಸಿದ್ದರು ಎಂದು ಅಕಾಲಿಗಳು ಆರೋಪಿಸಿದ್ದಾರೆ.

ಸುಗಮ ಮತದಾನಕ್ಕಾಗಿ 1.12 ಲಕ್ಷಕ್ಕೂ ಅಧಿಕ ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು,ವ್ಯಾಪಕ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ರವಿವಾರ ತಮಿಳುನಾಡಿನ ನಾಲ್ಕು ಮತ್ತು ಗೋವಾದ ಒಂದು ವಿಧಾನಸಭಾ ಕ್ಷೇತ್ರಗಳಿಗಾಗಿ ಉಪಚುನಾವಣೆಗಳೂ ನಡೆದಿವೆ.

ಲೋಕಸಭಾ ಚುನಾವಣೆಗಳ ಕಳೆದ ಆರು ಹಂತಗಳಲ್ಲಿ ಸರಾಸರಿ ಶೇ.66.68ರಷ್ಟು ಮತದಾನವಾಗಿತ್ತು. ಚುನಾವಣಾ ಪ್ರಕ್ರಿಯೆ 38 ದಿನಗಳಿಗೂ ಹೆಚ್ಚು ಅವಧಿಗೆ ವಿಸ್ತರಿಸಿಕೊಂಡಿದ್ದು,ಮೇ 23ರಂದು ಮತಎಣಿಕೆ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X