Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಪ್ರದೇಶ, ಬಿಹಾರದಲ್ಲಿ ಇವಿಎಂಗಳ...

ಉತ್ತರಪ್ರದೇಶ, ಬಿಹಾರದಲ್ಲಿ ಇವಿಎಂಗಳ ಸಾಗಾಟ: ವೀಡಿಯೊ ವೈರಲ್

ಇವಿಎಂ ತಿರುಚುವಿಕೆ ಬಗ್ಗೆ ಹೆಚ್ಚಿದ ಆತಂಕ

ವಾರ್ತಾಭಾರತಿವಾರ್ತಾಭಾರತಿ21 May 2019 11:24 PM IST
share
ಉತ್ತರಪ್ರದೇಶ, ಬಿಹಾರದಲ್ಲಿ ಇವಿಎಂಗಳ ಸಾಗಾಟ: ವೀಡಿಯೊ ವೈರಲ್

ಲಕ್ನೋ, ಮೇ 21: ಉತ್ತರಪ್ರದೇಶ, ಬಿಹಾರ್, ಪಂಜಾಬ್ ಹಾಗೂ ಹರ್ಯಾಣದಲ್ಲಿ ಇವಿಎಂಗಳನ್ನು ಖಾಸಗಿ ವಾಹನಗಳಲ್ಲಿ ಸಾಗಿಸುತ್ತಿರುವ ವೀಡಿಯೊ ಮಂಗಳವಾರ ಬೆಳಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆದ ಬಳಿಕ ಇವಿಎಂ ತಿರುಚುವಿಕೆಯ ಆರೋಪ ಮತ್ತೆ ಕೇಳಿ ಬಂದಿದೆ.

 ಚಾಂಡೌಲಿ ಲೋಕಸಭಾ ಕ್ಷೇತ್ರದಲ್ಲಿ ಸೋಮವಾರ ಮೊಬೈಲ್ ಫೋನ್ ಮೂಲಕ ಮಾಡಲಾದ ವೀಡಿಯೊ ದೃಶ್ಯದಲ್ಲಿ ಇವಿಎಂಗಳನ್ನು ಇಳಿಸುವುದು, ಮತ ಎಣಿಕೆ ಕೇಂದ್ರದಂತೆ ಕಾಣುವ ಕೊಠಡಿಯ ಒಳಗೆ ಹಾಕುವುದು ಕಂಡು ಬಂದಿದೆ. ಚಂಡೌಲಿಯ ಎಸ್ಪಿ ಬೆಂಬಲಿಗರು ಇದರ ವೀಡಿಯೊ ಮಾಡಿದ್ದಾರೆ. ಈ ವೀಡಿಯೊದಿಂದಾಗಿ ಮತದಾನ ನಡೆದ ಒಂದು ದಿನದ ಬಳಿಕ ಇವಿಎಂಗಳನ್ನು ಇಳಿಸಿರುವುದು ಯಾಕೆ ? ಮೊದಲೇ ಯಾಕೆ ಇಲ್ಲಿಗೆ ತರಲಿಲ್ಲ ? ಎಂಬ ಪ್ರಶ್ನೆಗಳು ಉದ್ಭವಿಸಿವೆ.

ವೀಡಿಯೊದಲ್ಲಿ ಕಂಡು ಬರುವ ಇವಿಎಂಗಳು ಚಂಡೌಲಿಯ ವಿಧಾಸಭಾ ಕ್ಷೇತ್ರದಲ್ಲಿ ಮೀಸಲು ಇರಿಸಿದ್ದ 35 ಇವಿಎಂಗಳು ಎಂದು ಜಿಲ್ಲಾಡಳಿತ ಹೇಳಿದೆ. ಸಾಗಾಟ ಸಮಸ್ಯೆಯಿಂದ ಈ ಇವಿಎಂಗಳು ದಾಸ್ತಾನು ಕೊಠಡಿ ಹಾಗೂ ಮತ ಎಣಿಕೆ ಕೇಂದ್ರಕ್ಕೆ ತಡವಾಗಿ ತಲುಪಿದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಿಯಮದ ಪ್ರಕಾರ ಮತದಾನಕ್ಕೆ ಬಳಸಲಾದ ಇವಿಎಂಗಳನ್ನು ಸಾಗಿಸುವ ಸಂದರ್ಭವೇ ಇತರ ಇವಿಎಂಗಳನ್ನು ಕೂಡ ಸಾಗಾಟ ಮಾಡಬೇಕು. ಪೂರ್ವ ಉತ್ತರಪ್ರದೇಶದ ಗಾಝಿಪುರದಲ್ಲಿ ಬಿಎಸ್ಪಿ ಅಭ್ಯರ್ಥಿ ಅಫ್ಝಲ್ ಅನ್ಸಾರಿ ಇವಿಎಂಗಳ ದಾಸ್ತಾನ ಕೊಠಡಿ ಮುಂದೆ ಧರಣಿ ಸೋಮವಾರ ರಾತ್ರಿ ನಡೆಸಿದ್ದರು. ಒಂದು ವಾಹನ ತುಂಬ ಇವಿಎಂಗಳನ್ನು ಸಾಗಿಸುವ ಪ್ರಯತ್ನ ನಡೆದಿದೆ ಎಂದು ಅನ್ಸಾರಿ ಹಾಗೂ ಅವರ ಬೆಂಬಲಿಗರು ಆರೋಪಿಸಿದ್ದರು.

ಆದರೆ, ಈ ಆರೋಪವನ್ನು ಪೊಲೀಸರು ಹಾಗೂ ಜಿಲ್ಲಾಡಳಿತ ನಿರಾಕರಿಸಿದೆ. ಈ ಆರೋಪ ನಿಷ್ಪ್ರಯೋಜಕ ಎಂದು ಹೇಳಿರುವ ಚುನಾವಣಾ ಆಯೋಗ, ಇವಿಎಂಗಳನ್ನು ಸೂಕ್ತ ಭದ್ರತೆ ಹಾಗೂ ಶಿಷ್ಟಾಚಾರದೊಂದಿಗೆ ನಿರ್ವಹಿಸಲಾಗುತ್ತಿದೆ ಎಂದು ಚುನಾವಣಾ ಆಯೋಗ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X