Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಾವಣಗೆರೆ: ರೌಡಿಶೀಟರ್ ಹತ್ಯೆ ಪ್ರಕರಣ;...

ದಾವಣಗೆರೆ: ರೌಡಿಶೀಟರ್ ಹತ್ಯೆ ಪ್ರಕರಣ; 18 ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ22 May 2019 6:10 PM IST
share
ದಾವಣಗೆರೆ: ರೌಡಿಶೀಟರ್ ಹತ್ಯೆ ಪ್ರಕರಣ; 18 ಆರೋಪಿಗಳ ಬಂಧನ

ದಾವಣಗೆರೆ, ಮೇ 22: ರೌಡಿಶೀಟರ್ ನಾಗರಾಜ್ ಅಲಿಯಾಸ್ ಬುಳ್ಳನಾಗಣ್ಣನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 18 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.

ಈ ಕುರಿತು ಗೋಷ್ಠಿಯಲ್ಲಿ ಮಾಹಿತಿ ನೀಡಿದ ಎಸ್ಪಿ ಆರ್. ಚೇತನ್, ಮೇ 11ರಂದು ವಿದ್ಯಾನಗರ ಠಾಣೆ ವ್ಯಾಪ್ತಿಯ ಎಸ್‍ಎಸ್ ಹೈಟೆಕ್ ಆಸ್ಪತ್ರೆ ಹಿಂಭಾಗದ ಕೆಎಸ್‍ಆರ್‍ಟಿಸಿ ಬಸ್ ಡಿಪೋ ಮುಂಭಾಗ ರೌಡಿಶೀಟರ್ ಬುಳ್ಳಾನಾಗನನ್ನು ಹಳೇ ದ್ವೇಷದ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪತ್ತೆ ಮಾಡಲು ಎಎಸ್‍ಪಿ ಟಿ.ಜಿ.ಉದೇಶ್, ನಗರ ಉಪವಿಭಾಗ ಪೊಲೀಸ್ ಉಪಾಧೀಕ್ಷಕ ನಾಗರಾಜ್ ಮಾರ್ಗದರ್ಶನದಲ್ಲಿ ಸಿಪಿಐ ಆನಂದ್, ಡಿಸಿಐಬಿ ಘಟಕದ ಲಕ್ಷ್ಮಣ್ ನಾಯ್ಕ, ನಗರವೃತ್ತ ನಿರೀಕ್ಷಕ ಶ್ರೀನಿವಾಸ್ ನೇತೃತ್ವದಲ್ಲಿ ಸಿಬ್ಬಂದಿ ಒಳಗೊಂಡ ವಿಶೇಷ ತಂಡ ರಚನೆ ಮಾಡಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು. 

ಆರೋಪಿಗಳಾದ ಸಂತೋಷ್ ಕುಮಾರ್, ಪರಶುರಾಮ್, ವಿಜಯನಾಯ್ಕ್, ಪವನ್ ಕುಮಾರ್, ಮಹಾಂತೇಶ್, ನವೀನ್ ಜಿ, ರಾಕೇಶ್ ಪಿ, ಮಂಜುನಾಥ್ ಎಂ, ವಿಜಯ ಎಸ್, ಶಿವಕುಮಾರ್, ಮೈಲಾರಿ ಎ, ರಮೇಶ್, ಮನೋಜ್, ಶ್ರೀನಿವಾಸ್, ಸುಭಾನಿ, ರವಿ, ನೀಲಗಿರಿ, ಪರಮೇಶಿ ಹಾಗೂ ಕೃತ್ಯಕ್ಕೆ ಬಳಸಿದ ಆಯುಧ, ಮೊಬೈಲ್, ವಾಹನ ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ಇದ್ದು, ಶೀಘ್ರದಲ್ಲೇ ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದರು. 

ರೌಡಿ ನಿಯಂತ್ರಣ ತಂಡ ರಚನೆ
ರೌಡಿ ಶೀಟರ್ ಮತ್ತವರ ಹಿಂಬಾಲಕರನ್ನು ನಿಯಂತ್ರಿಸಲು ಆ್ಯಂಟಿ ರೌಡಿ ಸ್ಕ್ವಾಡ್ ರಚಿಸಿ, ರೌಡಿ ಶೀಟರ್ ಗಳ ಚಲನವಲನಗಳ ಮೇಲೆ ನಿಗಾ ಇಡಲಾಗುವುದು. ರಿಯಲ್ ಎಸ್ಟೇಟ್ ದಂಧೆ, ಸಿವಿಲ್ ವ್ಯಾಜ್ಯ ಪ್ರಕರಣ, ವಾಹನಗಳ ಸೀಜಿಂಗ್, ಮನೆ, ಜಾಗ ಖಾಲಿ ಮಾಡಿಸುವ ಹೀಗೆ ನಾನಾ ಪ್ರಕರಣಗಳಲ್ಲಿ ರೌಡಿಗಳು ಪ್ರವೇಶಿಸುತ್ತಿದ್ದು, ಇಂತಹವರನ್ನು ಮಟ್ಟ ಹಾಕಲು ಇಲಾಖೆ ರೌಡಿ ನಿಗ್ರಹ ಪಡೆ ಶೀಘ್ರವೇ ರಚಿಸಲಿದೆ.
-ಆರ್.ಚೇತನ್, ಎಸ್ಪಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X