ಸೂಕ್ತ ಪರಿಶೀಲನೆ ಬಳಿಕ ಮತ ಎಣಿಕೆ ಕೇಂದ್ರದೊಳಗೆ ಪ್ರವೇಶ: ಎಸ್ಪಿ ನಿಶಾ ಜೇಮ್ಸ್
ಉಡುಪಿ, ಮೇ 22: ಸೈಂಟ್ ಸಿಸಿಲಿ ಶಾಲೆಯಲ್ಲಿ ನಾಳೆ ನಡೆಯುವ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕೇಂದ್ರದೊಳಗೆ ಆಗಮಿಸುವವರನ್ನು ಸೂಕ್ತ ತನಿಖೆ ನಡೆಸಿ, ಅಧಿಕೃತ ಗುರುತಿನ ಚೀಟಿ ಹೊಂದಿದವರಿಗೆ ಮಾತ್ರ ಪ್ರವೇಶ ನೀಡಲಾಗುವುದು.
ಮತದಾನ ಕೇಂದ್ರದೊಳಗೆ ಮೊಬೈಲ್ನ್ನು ಸಂಪೂರ್ಣವಾಗಿ ನಿಷೇಧಿಸಿದ್ದು, ಯಾವುದೇ ಕಾರಣಕ್ಕೂ ಯಾರಿಗೂ ಅವಕಾಶ ನೀಡಲಾಗುವುದಿಲ್ಲ. ಮೊಬೈಲ್ಗಳನ್ನು ತರದಂತೆ ಎಚ್ಚರ ವಹಿಸಿ ಎಂದು ಮತ ಎಣಿಕೆ ಕೇಂದ್ರದ ಕರ್ತವ್ಯಕ್ಕೆ ನಿಯೋಜಿಸಿರುವ ಪೊಲೀಸ್ ಅಧಿಕಾರಿಗಳಿಗೆ ಎಸ್ಪಿನಿಶಾ ಜೇಮ್ಸ್ ಸೂಚನೆಗಳನ್ನು ನೀಡಿದ್ದಾರೆ.
ಬುಧವಾರ, ಸೈಂಟ್ ಸಿಸಿಲಿಸ್ ಶಾಲೆಯಲ್ಲಿ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮತ ಎಣಿಕೆ ದಿನ ನಿರ್ವಹಿಸಬೇಕಾದ ಕರ್ತವ್ಯಗಳ ಕುರಿತು ಮಾಹಿತಿಗಳನು್ನ ನೀಡಿ ಅವರು ಮಾತನಾಡುತಿದ್ದರು.
ಮತ ಎಣಿಕೆ ಕೇಂದ್ರದೊಳಗೆ ಪ್ರವೇಶಿಸಲು ಈಗಾಗಲೇ ನೀಡಲಾಗಿರುವ ವಿವಿಧ ರೀತಿಯ ಪಾಸ್ಗಳ ಕುರಿತು ಮಾಹಿತಿ ನೀಡಿದ ನಿಶಾ ಜೇಮ್ಸ್, ಮೊಬೈಲ್ ತರಲು ಯಾರಿಗೂ ಅವಕಾಶವಿಲ್ಲ. ಮಾಧ್ಯಮದವರಿಗೆ ಮಾತ್ರ ಮಾಧ್ಯಮ ಕೇಂದ್ರದೊಳಗೆ ಮೊಬೈಲ್ ಬಳಕೆಗೆ ಅವಕಾಶ ಇದೆ. ಎಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮಗೆ ನಿಯೋಜಿಸಿರುವ ಸ್ಥಳದಲ್ಲಿ ಯಾವುದೇ ಲೋಪವಾಗದಂತೆ ಕರ್ತವ್ಯ ನಿರ್ವಹಿಸುವಂತೆ ಹಾಗೂ ಈಗಾಗಲೇ ಸೂಚಿಸಿರುವಂತೆ ಮತ ಎಣಿಕೆ ಕೇಂದ್ರದ ಹೊರಗೆ ಸಂಚಾರ ವ್ಯವಸ್ಥೆ ಮತ್ತು ಪಾರ್ಕಿಂಗ್ ವ್ಯವಸ್ಥೆಯನ್ನು ಸಮರ್ಪಕ ರೀತಿಯಲ್ಲಿ ನಿರ್ವಹಿಸುವಂತೆ ಸೂಚಿಸಿದರು.
ಮತ ಎಣಿಕೆಯ ಭದ್ರತೆಗಾಗಿ ಕೇಂದ್ರದ ಒಳಗೆ ಮತ್ತು ಹೊರಗೆ, ಒಂದು ಸಿಆರ್ಪಿಎಫ್ ತುಕಡಿ, 3 ಕೆಎಸ್ಆರ್ಪಿ ತುಕಡಿ, 30 ಹೋಂಗಾರ್ಡ್ಸ್, 335 ಪೊಲೀಸ್ ಸಿಬ್ಬಂದಿ ಸೇರಿದಂತೆ ಒಟ್ಟು 534 ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ದ್ರತಾ ಧೃಷ್ಠಿಯಿಂದ 130ಕ್ಕೂ ಹೆಚ್ಚು ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ.
ಮತ ಎಣಿಕೆಯ
ದ್ರತೆಗಾಗಿಕೇಂದ್ರದಒಳಗೆಮತ್ತುಹೊರಗೆ,ಒಂದುಸಿಆರ್ಪಿಎಫ್ತುಕಡಿ,3ಕೆಎಸ್ಆರ್ಪಿತುಕಡಿ,30ಹೋಂಗಾರ್ಡ್ಸ್,335ಪೊಲೀಸ್ಸಿಬ್ಬಂದಿಸೇರಿದಂತೆಒಟ್ಟು534ಸಿಬ್ಬಂದಿಯನ್ನುನಿಯೋಜಿಸಲಾಗಿದ್ದು,ದ್ರತಾೃಷ್ಠಿಯಿಂದ 130ಕ್ಕೂ ಹೆಚ್ಚು ಸಿಸಿ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ. ಎಣಿಕೆ ಕೇಂದ್ರದ ಸುತ್ತಮುತ್ತಲಿನ ಪ್ರದೇಶದಲ್ಲಿ ಸೂಕ್ತ ಪಾರ್ಕಿಂಗ್ ಮತ್ತು ಸಂಚಾರ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲಾ ಆಸ್ಪತ್ರೆಯ ಮುಂಭಾಗದಿಂದ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶ ಲ್ಪಿಸಲಾಗಿದೆ ಎಂದು ಎಸ್ಪಿಹೇಳಿದರು.
ಸಭೆಯಲ್ಲಿ ಎಎಸ್ಪಿ ಕೃಷ್ಣಕಾಂತ್, ಕುಮಾರ್ಚಂದ್ರ ಹಾಗೂ ಇತರೆ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.