Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕನಿಷ್ಠ 15 ರಲ್ಲಿ ಗೆಲ್ಲದಿದ್ದರೆ...

ಕನಿಷ್ಠ 15 ರಲ್ಲಿ ಗೆಲ್ಲದಿದ್ದರೆ ನಾಯಕತ್ವದ ಸಮಸ್ಯೆ ಸಾಬೀತಾಗಲಿದೆ: ಶಾಸಕ ಡಾ.ಕೆ.ಸುಧಾಕರ್

"ಚುನಾವಣೋತ್ತರ ಸಮೀಕ್ಷೆ ಫಲಿತಾಂಶವಲ್ಲ"

ವಾರ್ತಾಭಾರತಿವಾರ್ತಾಭಾರತಿ22 May 2019 7:52 PM IST
share
ಕನಿಷ್ಠ 15 ರಲ್ಲಿ ಗೆಲ್ಲದಿದ್ದರೆ ನಾಯಕತ್ವದ ಸಮಸ್ಯೆ ಸಾಬೀತಾಗಲಿದೆ: ಶಾಸಕ ಡಾ.ಕೆ.ಸುಧಾಕರ್

ಬೆಂಗಳೂರು, ಮೇ 22: ಮತದಾನ ಮಾಡಿದ ಮತದಾರರ ಅಭಿಪ್ರಾಯ ಸಂಗ್ರಹಿಸಿ, ಅವರದ್ದೇ ಆದ ರೀತಿಯಲ್ಲಿ ತಂತ್ರಗಾರಿಕೆ ಉಪಯೋಗಿಸಿಕೊಂಡು, ಚುನಾವಣೋತ್ತರ ಸಮೀಕ್ಷೆ ನಡೆಸಲಾಗುತ್ತದೆ. ಆದರೆ, ಅದೇ ಅಂತಿಮ ಫಲಿತಾಂಶವಲ್ಲ ಎಂದು ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಕೆ.ಸುಧಾಕರ್ ಹೇಳಿದ್ದಾರೆ. 

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಾಭಿಪ್ರಾಯ ಸಂಗ್ರಹಿಸಿ ಚುನಾವಣೋತ್ತರ ಸಮೀಕ್ಷೆ ಕೊಡುತ್ತಾರೆ. ಅದರ ಬಗ್ಗೆ ಆರೋಪ ಮಾಡುವುದು ಸರಿಯಲ್ಲ. ನಾಳೆ ಫಲಿತಾಂಶ ಬಂದ ಮೇಲೆ ಸತ್ಯಾಸತ್ಯತೆ ಎಲ್ಲರಿಗೂ ತಿಳಿಯಲಿದೆ ಎಂದರು.

ಗೆದ್ದಾಗ ಎಲೆಕ್ಟ್ರಾನಿಕ್ ಮತಯಂತ್ರ(ಇವಿಎಂ) ಸರಿಯಿರುತ್ತದೆ. ಸೋತಾಗ ಇವಿಎಂ ಸರಿಯಿಲ್ಲ ಅನ್ನುವುದು ನಾವು ಮಾಡುವ ಅವಮಾನ. ಇವಿಎಂ ಬಳಕೆಗೆ ಬಂದ ಬಳಿಕ ನಾವು ಹಲವಾರು ಚುನಾವಣೆಗಳನ್ನು ಎದುರಿಸಿ ಗೆಲುವು ಸಾಧಿಸಿದ್ದೇವೆ. ಭಾರತೀಯ ನಾಗರಿಕರಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇಡಬೇಕು ಎಂದು ಸುಧಾಕರ್ ಹೇಳಿದರು.

ಯಾರಿಗಾದರೂ ಇವಿಎಂ ಕುರಿತು ಅನುಮಾನಗಳಿದ್ದರೆ ಅದಕ್ಕೆ ಚುನಾವಣಾ ಆಯೋಗ ಉತ್ತರದಾಯಿಯಾಗಿರುತ್ತದೆ. ವಿರೋಧ ಪಕ್ಷಗಳ ಸಂದೇಹಗಳನ್ನು ದೂರ ಮಾಡುವುದು ಚುನಾವಣಾ ಆಯೋಗದ ಕರ್ತವ್ಯ ಎಂದು ಸುಧಾಕರ್ ಹೇಳಿದರು.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಬಗ್ಗೆ ಮಾಜಿ ಸಚಿವ ರೋಷನ್ ಬೇಗ್ ಹೇಳಿಕೆ ಕೊಟ್ಟಿರುವುದು ತಪ್ಪು. ಅವರಿಗೆ ಮಂತ್ರಿ ಸ್ಥಾನ ತಪ್ಪಲು ಸಿದ್ದರಾಮಯ್ಯ ಕಾರಣರಲ್ಲ. ದಿನೇಶ್ ಗುಂಡೂರಾವ್ ಇದೇ ಮೊದಲ ಬಾರಿಗೆ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಚುನಾವಣೆಯ ಫಲಿತಾಂಶ ಪ್ರಕಟವಾಗುವ ಮುನ್ನವೇ ಅವರನ್ನು ಅಸಮರ್ಥ ಎನ್ನುವುದು ತಪ್ಪು ಎಂದು ಸುಧಾಕರ್ ಹೇಳಿದರು.

ಪಕ್ಷದಲ್ಲಿ ಎಲ್ಲ ನಾಯಕರು ಒಂದಾಗಿದ್ದೇವೆ. ಆದರೆ, ಕಾರ್ಯಕರ್ತರು ಒಟ್ಟಾಗಿದ್ದಾರಾ ಅನ್ನೋದು ನಾಳೆ ಫಲಿತಾಂಶ ಬಂದ ಬಳಿಕ ಗೊತ್ತಾಗುತ್ತದೆ. ರಾಜ್ಯದಲ್ಲಿ ಯಾವ ರೀತಿಯ ರಾಜಕೀಯ ಬೆಳವಣಿಗೆಗಳು ನಡೆಯುತ್ತವೆ ಎಂಬುದು ಗೊತ್ತಾಗುತ್ತದೆ ಎಂದು ಸುಧಾಕರ್ ತಿಳಿಸಿದರು.

ರಾಜ್ಯದಲ್ಲಿ ಯಾವ ರೀತಿಯಲ್ಲಿ ಬೆಳವಣಿಗೆಗಳು ನಡೆಯಲಿವೆ ಅನ್ನೋದು ಗೊತ್ತಾಗುತ್ತದೆ. ಲೋಕಸಭೆಯ ಚುನಾವಣಾ ಫಲಿತಾಂಶ ಬಂದ ಬಳಿಕ ರಾಜ್ಯ ಸರಕಾರದ ಭವಿಷ್ಯದ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ ಎಂದು ಸುಧಾಕರ್ ಹೇಳಿದರು.

ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಇಬ್ಬರೂ ಸೇರಿ ಚುನಾವಣೆ ಎದುರಿಸಿದ್ದೇವೆ. ಕನಿಷ್ಠ 15ಕ್ಕೂ ಹೆಚ್ಚು ಸ್ಥಾನಗಳನ್ನು ನಾವು ಗೆಲ್ಲುತ್ತೇವೆ. ಅದಕ್ಕಿಂತ ಕಡಿಮೆ ಸ್ಥಾನಗಳು ಬಂದರೆ ನಾಯಕತ್ವದಲ್ಲಿ ಏನೋ ಸಮಸ್ಯೆಯಿದೆ, ನಾಯಕತ್ವವನ್ನು ಆಯ್ಕೆ ಮಾಡುವುದರಲ್ಲಿ ನಾವು ಎಡವಿದ್ದೇವೆ ಅನ್ನೋದು ಸಾಬೀತಾಗಲಿದೆ.

-ಸುಧಾಕರ್, ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X