Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿಗದಿಗಿಂತ ಹೆಚ್ಚು ಹಣ ಪಡೆದ ಮಳಿಗೆಗೆ 50...

ನಿಗದಿಗಿಂತ ಹೆಚ್ಚು ಹಣ ಪಡೆದ ಮಳಿಗೆಗೆ 50 ಸಾವಿರ ದಂಡ ವಿಧಿಸಿದ ಕೋರ್ಟ್ !

ವಾರ್ತಾಭಾರತಿವಾರ್ತಾಭಾರತಿ22 May 2019 9:49 PM IST
share
ನಿಗದಿಗಿಂತ ಹೆಚ್ಚು ಹಣ ಪಡೆದ ಮಳಿಗೆಗೆ 50 ಸಾವಿರ ದಂಡ ವಿಧಿಸಿದ ಕೋರ್ಟ್ !

ಬೆಂಗಳೂರು, ಮೇ 22: ಸಾಬೂನಿನ ಗರಿಷ್ಠ ಮಾರಾಟ ಬೆಲೆಗಿಂತ 5 ರೂ. ಹೆಚ್ಚುವರಿ ಪಡೆದಿದ್ದ ಮಳಿಗೆಯೊಂದಕ್ಕೆ ಗ್ರಾಹಕ ನ್ಯಾಯಾಲಯ 50 ಸಾವಿರ ರೂಪಾಯಿಗೂ ಅಧಿಕ ದಂಡ ವಿಧಿಸಿದೆ. 

ಎಂಆರ್‌ಪಿಗಿಂತ ಹೆಚ್ಚು ಹಣ ಪಡೆಯುವ ವ್ಯಾಪಾರಸ್ಥರು, ಮಳಿಗೆಗಳಿಗೆ ಇದು ಎಚ್ಚರಿಕೆ ಗಂಟೆಯಾಗಿದೆ. ಸಾಬೂನಿನ ಎಂಆರ್‌ಪಿ 50 ರೂ. ಇದ್ದರೂ ಬಿಲ್‌ನಲ್ಲಿ 55 ರೂ. ಎಂದು ನಮೂದಿಸಿ 5 ರೂ. ಹೆಚ್ಚುವರಿ ಪಡೆದು ವಂಚಿಸಲಾಗಿದೆ ಎಂದು ಆರೊಪಿಸಿ ಮಂಡ್ಯದ 59 ವರ್ಷದ ಸುರೇಶ್ ಕುಮಾರ್ ಮಂಡ್ಯ ಜಿಲ್ಲಾ ಗ್ರಾಹಕ ನ್ಯಾಯಾಲಯದ ಮೆಟ್ಟಿಲೇರಿದ್ದರು. ನ್ಯಾಯಾಧೀಶ ಟಿ.ಶ್ರೀಕಂಠ ಹಾಗೂ ಎಂ.ಕೆ. ಲಲಿತಾ ಅವರಿದ್ದ ಪೀಠ ದೂರಿನ ವಿಚಾರಣೆ ನಡೆಸಿತ್ತು. ನಿಗದಿತ ದರಕ್ಕಿಂತ ಹೆಚ್ಚು ಪಡೆದ ಸೂಪರ್ ಮಾರ್ಕೆಟ್, ಅನುಚಿತ ವ್ಯಾಪಾರ ಪದ್ಧತಿ ಅನುಸರಿಸಿರುವುದು ಸಾಬೀತಾಗಿದೆ ಎಂದು ಹೇಳಿದೆ.

ದೂರುದಾರರಿಂದ ಪಡೆದಿರುವ ಹೆಚ್ಚುವರಿ 5 ರೂ., ಮಾನಸಿಕ ಕಿರುಕುಳಕ್ಕೆ ಪರಿಹಾರವಾಗಿ 25 ಸಾವಿರ ರೂ. ಹಾಗೂ ವ್ಯಾಜ್ಯದ ವೆಚ್ಚ 2 ಸಾವಿರ ರೂ. ಸೇರಿ ಒಟ್ಟು 27,005 ರೂ.ಗಳನ್ನು ವಾರ್ಷಿಕ ಶೇ. 9 ಬಡ್ಡಿಯೊಂದಿಗೆ ಪಾವತಿಸಬೇಕು ಎಂದು ಆದೇಶಿಸಿದೆ. ದಂಡದ ರೂಪದಲ್ಲಿ 25 ಸಾವಿರ ರೂ.ಗಳನ್ನು ಗ್ರಾಹಕ ಕಲ್ಯಾಣ ನಿಧಿಗೆ ಪಾವತಿಸುವಂತೆಯೂ ಸೂಪರ್ ಮಾರ್ಕೆಟ್ ವ್ಯವಸ್ಥಾಪಕರಿಗೆ ನಿರ್ದೇಶಿಸಿದೆ.

ವಿಚಾರಣೆಗೆ ಗೈರಾದ ವ್ಯವಸ್ಥಾಪಕ: ಸೂಪರ್ ಮಾರ್ಕೆಟ್ ವ್ಯವಸ್ಥಾಪಕರಿಗೆ ನೋಟಿಸ್ ಜಾರಿಗೊಳಿಸಿ, ಅದನ್ನು ಅವರು ಸ್ವೀಕರಿಸಿದ್ದರೂ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ಏಕಪಕ್ಷೀಯವಾಗಿ ವಿಚಾರಣೆ ಆರಂಭಿಸಿದ್ದ ನ್ಯಾಯಾಲಯ, ವಿಚಾರಣೆ ಪೂರ್ಣಗೊಳಿಸಿ ಆದೇಶ ನೀಡಿದೆ.

ಕೋರ್ಟ್ ಆದೇಶವೇನು: ದೂರುದಾರರು ರಸೀದಿ, ಲೀಗಲ್ ನೋಟಿಸ್, ಹಾಗೂ ಸಾಬೂನು ಸೇರಿ ಅರ್ಹ ದಾಖಲೆ ಸಲ್ಲಿಸುವುದರೊಂದಿಗೆ ವಂಚನೆಯನ್ನು ಸಾಬೀತುಪಡಿಸಿದ್ದಾರೆ. ವಿಚಾರಣೆಗೆ ಗೈರು ಹಾಜರಾಗಿರುವ ಸೂಪರ್ ಮಾರ್ಕೆಟ್ ವ್ಯವಸ್ಥಾಪಕರು, ತಮ್ಮಿಂದ ಯಾವುದೇ ಸೇವಾ ನ್ಯೂನತೆ ಉಂಟಾಗಿಲ್ಲ ಎಂಬುದನ್ನು ಸಮರ್ಥಿಸಿಕೊಳ್ಳಲು ವಿಫಲರಾಗಿದ್ದಾರೆ. ಹೀಗಾಗಿ ದೂರುದಾರರಿಗೆ ಪರಿಹಾರ ನೀಡುವ ಹೊಣೆ ಸೂಪರ್ ಮಾರ್ಕೆಟ್ ವ್ಯವಸ್ಥಾಪಕರದ್ದಾಗಿದೆ. ಇದೇ ರೀತಿ ಅನೇಕ ಮುಗ್ಧ ಗ್ರಾಹಕರಿಗೆ ವಂಚಿಸಿರುವುದನ್ನೂ ಅಲ್ಲಗಳೆಯಲು ಸಾಧ್ಯವಿಲ್ಲ. ಹೀಗಾಗಿ ಗ್ರಾಹಕ ಕಲ್ಯಾಣ ನಿಧಿಗೂ ದಂಡ ಪಾವತಿಸಲು ಸೂಪರ್ ಮಾರ್ಕೆಟ್ ಬದ್ಧವಾಗಿದೆ ಎಂದು ಗ್ರಾಹಕ ನ್ಯಾಯಾಲಯ ಹೇಳಿದೆ.

ಪ್ರಕರಣವೇನು: ಮಂಡ್ಯ ಅಶೋಕನಗರ ನಿವಾಸಿ ಸುರೇಶ್ ಕುಮಾರ್ 2017ರ ಜು.30ರಂದು ಅಲ್ಲಿನ ಸೂಪರ್ ಮಾರ್ಕೆಟ್ ಒಂದರಿಂದ 129 ರೂ. ಮೌಲ್ಯದ ಗೃಹ ಬಳಕೆ ವಸ್ತುಗಳನ್ನು ಖರೀದಿಸಿದ್ದರು. ಇದರಲ್ಲಿ ಸಾಬೂನೊಂದಕ್ಕೆ 55 ರೂ. ಪಾವತಿಸಿದ್ದರು. ಮನೆಗೆ ಬಂದು ಪರಿಶೀಲಿಸಿದಾಗ ಎಲ್ಲ ತೆರಿಗೆಗಳೂ ಸೇರಿ ಸಾಬೂನಿನ ಗರಿಷ್ಠ ಮಾರಾಟ ಬೆಲೆ 50 ರೂ. ಎಂದು ನಮೂದಿಸಿದ್ದರೂ, 5 ರೂ. ಹೆಚ್ಚು ಪಡೆದಿರುವುದನ್ನು ಗಮನಿಸಿದ ಸುರೇಶ್ ಕುಮಾರ್, ಆ ಕುರಿತು ಸೂಪರ್ ಮಾರ್ಕೆಟ್ ಸಿಬ್ಬಂದಿಯನ್ನು ವಿಚಾರಿಸಿದ್ದರು. ಆದರೆ, ಸಿಬ್ಬಂದಿ ಅದಕ್ಕೆ ಹಾರಿಕೆಯ ಉತ್ತರ ನೀಡಿದ್ದರು. ಇದನ್ನು ಪ್ರಶ್ನಿಸಿ ಸೂಪರ್ ಮಾರ್ಕೆಟ್‌ಗೆ ನೋಟಿಸ್ ಜಾರಿಗೊಳಿಸಿದ್ದರು. ಇದಕ್ಕೆ ಯಾವುದೇ ಪ್ರತಿಕ್ರಿಯೆ ಬಾರದ್ದರಿಂದ ಗ್ರಾಹಕ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X