Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರಾಣಿಗಳಿಗಿಂತ ಹೆಚ್ಚು ಶೋಷಿತರು...

ಪ್ರಾಣಿಗಳಿಗಿಂತ ಹೆಚ್ಚು ಶೋಷಿತರು ಬ್ರಾಹ್ಮಣ ಮಹಿಳೆಯರು: ಡಾ.ಎಲ್.ಹನುಮಂತಯ್ಯ

ವಾರ್ತಾಭಾರತಿವಾರ್ತಾಭಾರತಿ22 May 2019 10:09 PM IST
share
ಪ್ರಾಣಿಗಳಿಗಿಂತ ಹೆಚ್ಚು ಶೋಷಿತರು ಬ್ರಾಹ್ಮಣ ಮಹಿಳೆಯರು: ಡಾ.ಎಲ್.ಹನುಮಂತಯ್ಯ

ಬೆಂಗಳೂರು, ಮೇ 22: ಪ್ರಾಣಿಗಳಿಗಿಂತ ಹೆಚ್ಚು ಶೋಷಣೆಯನ್ನು ನಮ್ಮ ದೇಶದ ಬ್ರಾಹ್ಮಣ ಸಮುದಾಯದ ಮಹಿಳೆಯರು ಅನುಭವಿಸಿದ್ದು, ಈ ಸತ್ಯವೂ ಇತಿಹಾಸ ಪುಟಗಳಲ್ಲಿ ದಾಖಲಾಗಿದೆ ಎಂದು ರಾಜ್ಯಸಭಾ ಸದಸ್ಯ ಡಾ.ಎಲ್.ಹನುಮಂತಯ್ಯ ಇಂದಿಲ್ಲಿ ಅಭಿಪ್ರಾಯಪಟ್ಟರು.

ನಗರದ ಶಾಸಕರ ಭವನದಲ್ಲಿ ಕರ್ನಾಟಕ ರಾಜ್ಯ ಸರಕಾರಿ ಸಂಘಗಳ ಒಕ್ಕೂಟ ಏರ್ಪಡಿಸಿದ್ದ, ‘ಭಾರತದ ಪ್ರಪ್ರಥಮ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಸಾಧನೆ ಹೆಜ್ಜೆಗಳು’ ಕುರಿತ ಪುಸ್ತಕ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಈ ಹಿಂದೆ ನಮ್ಮ ದೇಶದೊಳಗೆ ಬಾಲ್ಯ ವಿವಾಹ, ಸತಿಪದ್ಧತಿ, ವಿಧವೆ ಮಹಿಳೆಯರ ಬಹಿಷ್ಕಾರ ಜಾರಿಯಲ್ಲಿತ್ತು. ಆದರೆ, ನಾವು ಯಾರನ್ನು ತಿಳುವಳಿಕೆಯುಳ್ಳವರು (ಬ್ರಾಹ್ಮಣರು) ಎನ್ನುತ್ತಿದ್ದೆವು, ಅವರ ಮಹಿಳೆಯರೇ ಹೆಚ್ಚಾಗಿ ಈ ಅನಿಷ್ಟ ಪದ್ಧತಿಗಳಲ್ಲಿ ಸಿಲುಕಿಕೊಂಡಿದ್ದರು. ಅಷ್ಟೇ ಅಲ್ಲದೆ, ಇತರೆ ಸಮುದಾಯಗಳಲ್ಲಿ ಮಹಿಳೆಯ ಪತಿ ಸಾವನ್ನಪ್ಪಿದರೆ, ಮತ್ತೊಂದು ಮದುವೆ ಮಾಡಿಕೊಳ್ಳುವ ಅವಕಾಶ ಇತ್ತು. ಆದರೆ, ಬ್ರಾಹ್ಮಣರಲ್ಲಿ ಈ ಅವಕಾಶ ನೀಡಿರಲಿಲ್ಲ. ಬದಲಾಗಿ, ಆ ಮಹಿಳೆಯರ ತಲೆಕೂದಲು ತೆಗೆಯುವುದು, ಬಿಳಿ ಬಣ್ಣದ ಸೀರೆ ಧರಿಸುವಂತೆ ಸೂಚಿಸುವುದು, ಆಕೆಯ ಮುಖ ನೋಡುವುದು ಮಂಗಳವಲ್ಲ ಎಂದೆಲ್ಲಾ ಟೀಕಿಸುವ ಸಂಸ್ಕೃತಿ ಚಾಲ್ತಿಯಲ್ಲಿತ್ತು ಎಂದು ಹೇಳಿದರು.

ಮನುಸ್ಮತಿಯಲ್ಲಿ ನ್ಯಾಯ ವ್ಯವಸ್ಥೆಯೂ ಜಾತಿ ಆಧಾರಿತವಾಗಿತ್ತು. ಮನುಸ್ಮತಿಯಲ್ಲಿರುವಂತೆ, ಮೇಲು ಜಾತಿಯ ಯುವಕ ಕೆಳ ಜಾತಿಯ ಯುವತಿಯನ್ನು ಮದುವೆಯಾದರೆ, ದಂಡಿಸಬೇಕು ಎಂದಷ್ಟೇ ಹೇಳಲಾಗಿದೆ. ಆದರೆ, ಕೆಳ ಜಾತಿಯ ಯುವಕ ಮೇಲು ಜಾತಿಯ ಯುವತಿಯನ್ನು ಮದುವೆಯಾದರೆ ಗಲ್ಲು ಶಿಕ್ಷೆ ನೀಡಬೇಕೆಂದು ಸೂಚಿಸಲಾಗಿದೆ. ಆದರೆ, ಈ ಸತ್ಯವನ್ನು ಕೆಲವರು ಮರೆಮಾಚಲು ಪ್ರಯತ್ನ ಮಾಡುತ್ತಿದ್ದಾರೆಂದು ಹನುಮಂತಯ್ಯ ನುಡಿದರು.

ನಮ್ಮಳಗೆ ಹಲವು ಶೋಷಣೆಯ ಪದ್ಧತಿಗಳಿದ್ದವು. ಹಲವು ರಾಜರು ಜನರಿಗೆ ಅನ್ಯಾಯ ಮಾಡಿದ್ದಾರೆ. ಆದರೂ, ಇತಿಹಾಸ ಪುಟದಲ್ಲಿ ಕೆಲವು ರಾಜರ ಆಳ್ವಿಕೆ ಕಾಲವನ್ನು ಸುವರ್ಣ ಯುಗ ಎಂದು ಬಿಂಬಿಸಲಾಗಿದೆ ಎಂದರು.

ಭಾರತೀಯರು ಅಮೆರಿಕಕ್ಕೆ ಹೋದರು ಜಾತಿ ಬಿಟ್ಟಿಲ್ಲ. ಜೊತೆಗೆ ಜಾತಿ ಉಳಿಸಿಕೊಳ್ಳುವ ಪ್ರಯತ್ನಕ್ಕೆ ಮುಂದಾಗಿರುವುದಲ್ಲದೆ, ಅಲ್ಲಿಯೂ ಜಾತಿಗೊಂದು ಸಂಘ ಕಟ್ಟಿಕೊಂಡಿದ್ದಾರೆ. ಆದರೆ, ಅಮೆರಿಕ ಪ್ರಜೆಗಳು ಭಾರತೀಯರನ್ನು ಅಸ್ಪಶ್ಯರಂತೆ ಕಾಣುತ್ತಿದ್ದಾರೆ ಎಂದು ಅವರು ಹೇಳಿದರು.

ದನದ ಕೊಟ್ಟಿಗೆ: ರಾಜ್ಯ ವ್ಯಾಪ್ತಿಯ ಕೆಲ ಸರಕಾರಿ ಶಾಲೆಗಳು ಸೂಕ್ತ ನೀರಿನ ವ್ಯವಸ್ಥೆ, ಮೂಲಸೌಕರ್ಯಗಳಿಲ್ಲದೆ ದನದ ಕೊಟ್ಟಿಗೆಗಿಂತಲೂ ಕಡೆಯಾಗಿವೆ ಎಂದ ಅವರು, ಗ್ರಾಮೀಣ ಭಾಗದ ಶಿಕ್ಷಕರ ಸಮಸ್ಯೆಗಳು ಹೆಚ್ಚಾಗಿವೆ. ಈ ಬಗ್ಗೆ ಸರಕಾರ ಗಮನ ನೀಡಲಿ ಎಂದು ಹನುಮಂತಯ್ಯ ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರಕಾರಿ ಶಿಕ್ಷಕರ ಸಂಘಗಳ ಒಕ್ಕೂಟದ ಅಧ್ಯಕ್ಷೆ ವಿ.ಟಿ.ವೆಂಕಟೇಶಯ್ಯ, ಲೇಖಕಿ ಸುಮಿತ್ರಾ ಎಂ.ದುರ್ಗಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

‘ಆಪ್’ ಹೊಗಳಿದ ಕಾಂಗ್ರೆಸ್ ಸಂಸದ

ನಾನು ಕಾಂಗ್ರೆಸ್ ಸಂಸದನಾಗಿರಬಹುದು. ಆದರೆ, ಆಮ್ ಆದ್ಮಿ ಪಕ್ಷ ಹಾಗೂ ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಾಡಿರುವ ಶೈಕ್ಷಣಿಕ ಅಭಿವೃದ್ಧಿ ಮರೆಯಲು ಸಾಧ್ಯವಿಲ್ಲ. ಅಲ್ಲಿನ ಶಾಲಾ-ಕಾಲೇಜು ಕಟ್ಟಡಗಳು ಖಾಸಗಿ ಸಂಸ್ಥೆಗಳಿಗೆ ಸೆಡ್ಡು ಹೊಡೆದಿದ್ದು, ಪ್ರತಿಯೊಂದು ರಾಜ್ಯದ ಮಂತ್ರಿಗಳು ಒಮ್ಮೆ ದೆಹಲಿ ಭೇಟಿ ನೀಡಬೇಕು ಎಂದು ಎಲ್.ಹನುಮಂತಯ್ಯ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X