Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಮಾನತೆ ಎನ್ನುವ ಪರಿಕಲ್ಪನೆಯೇ ತಪ್ಪು:...

ಸಮಾನತೆ ಎನ್ನುವ ಪರಿಕಲ್ಪನೆಯೇ ತಪ್ಪು: ಲೇಖಕಿ ಡಾ.ವೀಣಾ ಬನ್ನಂಜೆ

ವಾರ್ತಾಭಾರತಿವಾರ್ತಾಭಾರತಿ22 May 2019 10:17 PM IST
share

ಬೆಂಗಳೂರು, ಮೇ 22: ತಮ್ಮ ಪ್ರಕಾರ ಸಮಾನತೆ ಎನ್ನುವ ಪರಿಕಲ್ಪನೆಯೇ ತಪ್ಪು. ಯಾವುದನ್ನೋ ಅಥವಾ ಯಾರನ್ನೋ ಮಾದರಿಯಾಗಿ ಸ್ವೀಕರಿಸಿ ಅವರಿಗೆ ಸಮಾನಾಗಿ ಬೆಳೆಯುವುದು ಸಮಾನತೆ ಅಲ್ಲ. ಇದು ಅತಿರೇಕ ಎನಿಸಿದರೂ ನಾನು ಕಂಡುಕೊಂಡಿರುವ ಸತ್ಯ ಎಂದು ಲೇಖಕಿ ಡಾ.ವೀಣಾ ಬನ್ನಂಜೆ ಅಭಿಪ್ರಾಯಿಸಿದ್ದಾರೆ.

ಬುಧವಾರ ಜಯನಗರದ ವಿಜಯ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ‘ಸ್ತ್ರೀ ಧ್ವನಿ’ ಕುರಿತ ರಾಜ್ಯಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಕಾಲೇಜಿನ ದಿನಗಳಲ್ಲಿ ಬಸ್‌ಗಳಲ್ಲಿ ಮಹಿಳೆಯರಿಗೆ ಪ್ರತ್ಯೇಕ ಆಸನಗಳನ್ನು ಮೀಸಲಿಡುತ್ತಿದ್ದರು. ಆ ಸಂದರ್ಭದಲ್ಲಿ ಸಮಾನತೆ ಕುರಿತು ಮಾತನಾಡಿದ್ದೆ. ಅದಕ್ಕೆ ಹಲವರು ವಿರೋಧ ವ್ಯಕ್ತಪಡಿಸಿದ್ದರು ಎಂದು ಮರು ನೆನಪು ಮಾಡಿಕೊಂಡರು.

ಒಬ್ಬರನ್ನು ಮತ್ತೊಬ್ಬರಿಗೆ ಹೋಲಿಕೆ ಮಾಡುವುದೇ ತಪ್ಪು. ಹೆಣ್ಣು-ಗಂಡಿಗೆ ಅವರದೇ ಆದ ಶಕ್ತಿಯಿದೆ. ತಾಯ್ತನ ಎಂಬುದು ಕೇವಲ ಹೆಣ್ಣಿಗಷ್ಟೇ ಸೀಮಿತವಾಗಿಲ್ಲ. ಗಂಡಸರಲ್ಲೂ ತಾಯ್ತನ ಕಾಣಬಹುದು. ಇದು ಲಿಂಗ ಅಥವಾ ಮಕ್ಕಳನ್ನು ಹೆರುವುದರಿಂದ ನಿರ್ಧರಿತವಾಗುವುದಿಲ್ಲ. ಇಂದು ಸಮಾಜದಲ್ಲಿ ಹೆಚ್ಚಾಗಿರುವ ‘ಲಿಂಗ’ ಪ್ರಜ್ಞೆ ಭಯಕ್ಕೆ ಕಾರಣವಾಗಿದೆ ಎಂದು ಹೇಳಿದರು.

ಹೆಣ್ಣು ಅಥವಾ ಗಂಡಿಗೆ ಮದುವೆ ಹಾಗೂ ಕಾಮವೇ ಬದುಕಲ್ಲ. ಅದರ ಹೊರತಾಗಿಯೂ ಉತ್ತಮ ಬದುಕಿದೆ. ಜಗತ್ತಿನಲ್ಲಿ ದಾಖಲಾದ ಮಹಾಸತ್ಯಗಳು ಮನುಕುಲವನ್ನು ಕಾಪಾಡಿವೆ. ಇನ್ನೂ ದಾಖಲಾಗದ ಎಷ್ಟೋ ಮಹಾಸತ್ಯಗಳು ಹಾಗೆ ಉಳಿದಿವೆ. ಜಗತ್ತಿನ ಪ್ರತಿಯೊಂದು ಸೃಷ್ಟಿಗೂ ಅರ್ಥವಿರುತ್ತದೆ. ಅದಕ್ಕೆ ಅದರದೇ ಆದ ಉದ್ದೇಶ ಹಾಗೂ ಕಾರ್ಯಗಳಿರುತ್ತವೆ. ಹೆಣ್ಣು-ಗಂಡು ವಿಚಾರವೂ ಅದರಿಂದ ಹೊರತಾಗಿಲ್ಲ ಎಂದರು.

ವಿಜಯ ಕಾಲೇಜಿನ ಡೀನ್ ಡಾ.ಆರ್.ವಿ.ಪ್ರಭಾಕರ ಮಾತನಾಡಿ, ಕುಟುಂಬಗಳು ಪ್ರೀತಿ-ವಿಶ್ವಾಸದಿಂದ ಬದುಕು ಕಟ್ಟಿಕೊಂಡು ಸಾಗಬೇಕು. ಅಧಿಕಾರ ಚಲಾವಣೆಯಿಂದ ಪ್ರೀತಿಸಲು ಸ್ಥಳವಿರುವುದಿಲ್ಲ. ಮಹಿಳೆಯರಿಗೆ ಸಮಾನವಾದ ಗೌರವ, ಸ್ಥಾನ-ಮಾನ ಸಿಕ್ಕಿದರೆ ದೇಶ ಅಭಿವೃದ್ಧಿಯಾಗುತ್ತದೆ. ಈ ನಿಟ್ಟಿನಲ್ಲಿ ಮಹಿಳೆಯರನ್ನು ಪುರುಷರು ಸಮಾನವಾಗಿ ಕಾಣುವಂತಾಗಬೇಕು ಎಂದು ನುಡಿದರು. ಕಾರ್ಯಕ್ರಮದಲ್ಲಿ ವಿಜಯ ಕಾಲೇಜಿನ ಪ್ರಾಂಶುಪಾಲೆ ಪ್ರೊ.ಡಿ.ಆರ್.ಸುಧಾ, ಉಪಪ್ರಾಂಶುಪಾಲೆ ಮಮತಾ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X