Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತನ್ನದೇ ಹೆಲಿಕಾಪ್ಟರ್...

ತನ್ನದೇ ಹೆಲಿಕಾಪ್ಟರ್ ಹೊಡೆದುರುಳಿಸಿದ್ದನ್ನು ಕಡೆಗೂ ಒಪ್ಪಿಕೊಂಡ ವಾಯುಪಡೆ

ಚುನಾವಣೆ ಮುಗಿಯುವವರೆಗೆ ವರದಿ ಮುಚ್ಚಿಟ್ಟ ಆರೋಪ

ವಾರ್ತಾಭಾರತಿವಾರ್ತಾಭಾರತಿ22 May 2019 10:54 PM IST
share
ತನ್ನದೇ ಹೆಲಿಕಾಪ್ಟರ್ ಹೊಡೆದುರುಳಿಸಿದ್ದನ್ನು ಕಡೆಗೂ ಒಪ್ಪಿಕೊಂಡ ವಾಯುಪಡೆ

ಹೊಸದಿಲ್ಲಿ, ಮೇ 22: ಕಳೆದ ಫೆಬ್ರವರಿ 27ರಂದು ಕಾಶ್ಮೀರದ ಬುದ್‌ಗಾಂವ್‌ನಲ್ಲಿ ಕ್ಷಿಪಣಿ ದಾಳಿಯಿಂದ ಪತನಗೊಂಡ ಹೆಲಿಕಾಪ್ಟರ್ ಹೊಡೆದುರುಳಿಸಿದ್ದು ತಾನೇ ಎಂದು ಭಾರತೀಯ ವಾಯುಪಡೆ (ಐಎಎಫ್) ಅನಧಿಕೃತವಾಗಿ ಒಪ್ಪಿಕೊಂಡಿದೆ.

ಸಾರ್ವತ್ರಿಕ ಚುನಾವಣೆಯ ಅಂತಿಮ ಹಂತ ಕೊನೆಗೊಂಡ ಬಳಿಕ ಈ ಹೇಳಿಕೆ ಹೊರಬಿದ್ದಿರುವುದು ಈಗ ಚರ್ಚೆಗೆ ಗ್ರಾಸ ಒದಗಿಸಿದ್ದು ಚುನಾವಣೆಯಲ್ಲಿ ಸರಕಾರಕ್ಕೆ ಮುಜುಗರ ತಪ್ಪಿಸಲು ಹೀಗೆ ಮಾಡಲಾಗಿದೆ ಎಂದು ವ್ಯಾಪಕ ಟೀಕೆ ವ್ಯಕ್ತವಾಗಿದೆ. ಪುಲ್ವಾಮಾದಲ್ಲಿ ಭಯೋತ್ಪಾದಕರ ಆತ್ಮಾಹುತಿ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯುಪಡೆ ಪಾಕಿಸ್ತಾನದ ಬಾಲಕೋಟ್ ಪ್ರದೇಶಕ್ಕೆ ನುಗ್ಗಿ ವಾಯದಾಳಿ ನಡೆಸಿತ್ತು. ಇದರ ಮರುದಿನ ಕಾಶ್ಮೀರದ ಗಡಿಭಾಗದಲ್ಲಿ ಪಾಕಿಸ್ತಾನ ವಾಯುದಾಳಿ ನಡೆಸಿದಾಗ ಭಾರತ ಪ್ರತ್ಯುತ್ತರ ನೀಡಿತ್ತು. ಈ ಸಂದರ್ಭ ಬುದ್‌ಗಾಂವ್‌ನಲ್ಲಿ ಭಾರತದ ಎಂಐ-17 ಹೆಲಿಕಾಪ್ಟರ್‌ಗೆ ಕ್ಷಿಪಣಿಯೊಂದು ಬಡಿದ ಕಾರಣ ಹೆಲಿಕಾಪ್ಟರ್ ಪತನಗೊಂಡು ವಾಯುಪಡೆಯ ಆರು ಸಿಬ್ಬಂದಿಗಳು ಹಾಗೂ ಓರ್ವ ನಾಗರಿಕ ಮೃತಪಟ್ಟಿದ್ದರು.

 ಈ ಘಟನೆಗೆ ಭಾರತದ ಯೋಧರೇ ಕಾರಣವಾಗಿರಬಹುದು ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹೇಳಿದ್ದರು. ಕೆಲವು ಮಾಧ್ಯಮಗಳಲ್ಲೂ ಇದೇ ರೀತಿಯ ವರದಿ ಪ್ರಸಾರವಾಗಿತ್ತು. ಆದರೆ ಇದನ್ನು ನಿರಾಕರಿಸಿದ್ದ ಸರಕಾರ ಮತ್ತು ವಾಯುಪಡೆ, ಘಟನೆಯ ಬಗ್ಗೆ ವಿಚಾರಣಾ ನ್ಯಾಯಾಲಯದ ತನಿಖೆಗೆ ಆದೇಶಿಸಿತ್ತು. ತನ್ನದೇ ಹೆಲಿಕಾಪ್ಟರ್ ಅನ್ನು ವಾಯುಪಡೆ ಉರುಳಿಸಿದ ವಿಷಯ ಸಾರ್ವತ್ರಿಕ ಚುನಾವಣೆಯ ಸಂದರ್ಭ ಹೊರಬಿದ್ದರೆ ಆಗ ಪ್ರಧಾನಿ ಮೋದಿಗೆ ಸಂದಿರುವ ಬಾಲಕೋಟ್ ವೈಮಾನಿಕ ದಾಳಿಯ ಯಶಸ್ಸಿನ ಮಹತ್ವ ಕಡಿಮೆಯಾಗಬಹುದು ಹಾಗೂ ಚುನಾವಣೆಯ ಮೇಲೆ ಪರಿಣಾಮ ಬೀರಬಹುದು ಎಂಬ ಉದ್ದೇಶದಿಂದ ತನಿಖಾ ವರದಿಯನ್ನು ಬಹಿರಂಗಗೊಳಿಸಿಲ್ಲ ಎಂಬ ವಾದ ಕೇಳಿಬರುತ್ತಿದೆ.

 ಎರಡು ತಿಂಗಳಿಗೂ ಅಧಿಕ ಕಾಲ ರಹಸ್ಯವಾಗಿದ್ದ ಈ ಪ್ರಕರಣ ಚುನಾವಣೆ ಕೊನೆಗೊಂಡ ಎರಡು ದಿನದ ಬಳಿಕ ಮತ್ತೆ ಮುನ್ನೆಲೆಗೆ ಬಂದಿದೆ. ಎನ್‌ಡಿ ಟಿವಿಯಲ್ಲಿ ಪ್ರಸಾರವಾದ ವರದಿಯಲ್ಲಿ, ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಅನ್ನು ಶತ್ರುವಿನ ಹೆಲಿಕಾಪ್ಟರ್ ಎಂದು ತಪ್ಪಾಗಿ ಭಾವಿಸಿ ಹೊಡೆದುರುಳಿಸಲಾಗಿದೆ ಎಂದು ಹೇಳಲಾಗಿದೆ. ಕ್ಷಿಪಣಿ ಹಾರಿಸಿದ ಕೃತ್ಯದ ಹೊಣೆ ಹೊತ್ತಿರುವ ಅಧಿಕಾರಿಯ ವಿರುದ್ಧ ಶಿಕ್ಷಾರ್ಹ ನರಹತ್ಯೆ ಪ್ರಕರಣ ದಾಖಲಿಸುವ ಸಾಧ್ಯತೆಯಿದೆ ಎಂದು ಇಕನಾಮಿಕ್ಸ್ ಟೈಮ್ಸ್‌ನಲ್ಲಿ ವರದಿಯಾಗಿದೆ. ಭಾರತದ ವಾಯುಪಡೆಯೇ ತನ್ನ ಹೆಲಿಕಾಪ್ಟರ್ ಉರುಳಿಸಿರುವುದು ಸ್ಪಷ್ಟವಾಗಿದೆ. ಆದರೆ ಸಾರ್ವತ್ರಿಕ ಚುನಾವಣೆ ಮುಗಿದ ಬಳಿಕವಷ್ಟೇ ತನಿಖೆಯ ವರದಿ ಬಿಡುಗಡೆಯಾಗಬಹುದು.

ಯಾಕೆಂದರೆ ಬಾಲಕೋಟ್ ವಾಯುದಾಳಿಯ ವಿಷಯವನ್ನು ಚುನಾವಣಾ ಪ್ರಚಾರದಲ್ಲಿ ಬಳಸಿಕೊಂಡಿದ್ದ ಮೋದಿ ಸರಕಾರಕ್ಕೆ ಬುದಗಾಂವ್‌ನಲ್ಲಿ ವಾಯುಪಡೆಯೇ ತನ್ನ ಹೆಲಿಕಾಪ್ಟರ್ ಉರುಳಿಸಿರುವ ವಿಷಯ ಮುಜುಗುರಕ್ಕೆ ಕಾರಣವಾಗುತ್ತದೆ ಎಂದು ಕಳೆದ ಎಪ್ರಿಲ್ 27ರಂದೇ ಬಿಸಿನೆಸ್ ಸ್ಟಾಂಡರ್ಡ್ ಪತ್ರಿಕೆಯಲ್ಲಿ ವರದಿಯಾಗಿರುವುದನ್ನು ಇಲ್ಲಿ ಉಲ್ಲೇಖಿಸಬಹುದು. ಆಡಳಿತಾರೂಢ ಬಿಜೆಪಿಗೆ ಮುಜುಗುರ ಉಂಟಾಗಬಾರದು ಎಂಬ ಕಾರಣಕ್ಕೆ ಚುನಾವಣೆ ಮುಗಿಯುವವರೆಗೆ ಸಶಸ್ತ್ರ ಪಡೆಗಳು ಬುದ್‌ಗಾಂವ್ ಪ್ರಕರಣದ ಬಗ್ಗೆ ವೌನ ತಳೆದಿದ್ದರೆ ಇದು ನಿಜಕ್ಕೂ ಕಳವಳಕಾರಿ ವಿಷಯವಾಗಿದೆ ಎಂದು scroll.in ವರದಿ ಮಾಡಿದೆ. ವಿಚಾರಣಾ ನ್ಯಾಯಾಲಯ ಇನ್ನೂ ತನ್ನ ಅಂತಿಮ ವರದಿ ಸಲ್ಲಿಸಿಲ್ಲ. ಆದರೆ ಕೆಲವೊಂದು ಲೋಪಗಳು ಈ ದುರಂತಕ್ಕೆ ಕಾರಣ ಎಂದು ವರದಿಯಲ್ಲಿ ಉಲ್ಲೇಖಿಸಿರುವುದಾಗಿ ಮೂಲಗಳು ತಿಳಿಸಿವೆ.

ವಾಯುಪಡೆಯೇ ತನ್ನ ಹೆಲಿಕಾಪ್ಟರ್ ಅನ್ನು ಹೊಡೆದುರುಳಿಸಿದೆ. ಆದರೆ ಚುನಾವಣೆ ಮುಗಿಯುವವರೆಗೆ ವರದಿ ಬಹಿರಂಗಗೊಳಿಸದಂತೆ ವಾಯುಪಡೆಗೆ ಸೂಚಿಸಲಾಗಿದೆ ಎಂದು ರಕ್ಷಣಾ ವಿಶ್ಲೇಷಕ ಅಜಯ್ ಶುಕ್ಲ ಈ ಹಿಂದೆಯೇ ಹೇಳಿಕೆ ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X