Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಸಿರು ಭಾರತಕ್ಕೆ ಮುನ್ನುಡಿ: 2025ರ ಬಳಿಕ...

ಹಸಿರು ಭಾರತಕ್ಕೆ ಮುನ್ನುಡಿ: 2025ರ ಬಳಿಕ ಎಲೆಕ್ಟ್ರಿಕ್ ವಾಹನ ಯುಗ

ವಾರ್ತಾಭಾರತಿವಾರ್ತಾಭಾರತಿ23 May 2019 9:03 AM IST
share
ಹಸಿರು ಭಾರತಕ್ಕೆ ಮುನ್ನುಡಿ: 2025ರ ಬಳಿಕ ಎಲೆಕ್ಟ್ರಿಕ್ ವಾಹನ ಯುಗ

ಹೊಸದಿಲ್ಲಿ: ಹಸಿರು ಭಾರತ ನಿರ್ಮಾಣದ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಅಳವಡಿಕೆಗೆ ಕಾರ್ಯತಂತ್ರ ರೂಪಿಸಿರುವ ಸರ್ಕಾರ 2023ರ ಎಪ್ರಿಲ್‍ನಿಂದ ದೇಶದಲ್ಲಿ ಕೇವಲ ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳ ಮಾರಾಟಕ್ಕಷ್ಟೇ ಅನುಮತಿ ನೀಡುವ ನಿರೀಕ್ಷೆ ಇದೆ. ಅಂತೆಯೇ 2025ರಿಂದ 150 ಸಿಸಿ ಎಂಜಿನ್ ಸಾಮಥ್ರ್ಯವರೆಗಿನ ದ್ವಿಚಕ್ರ ವಾಹನಗಳು ಕೂಡಾ ಎಲೆಕ್ಟ್ರಿಕ್ ವಾಹನಗಳಾಗಿರಬೇಕು ಎನ್ನುವುದನ್ನು ಕಡ್ಡಾಯಪಡಿಸುವ ಚಿಂತನೆ ನಡೆದಿದೆ.

ಈ ಎರಡು ವರ್ಗದ ವಾಹನಗಳಿಂದ ಆಗುವ ಮಾಲಿನ್ಯವನ್ನು ತಪ್ಪಿಸುವ ನಿಟ್ಟಿನಲ್ಲಿ ಉನ್ನತ ಮಟ್ಟದ ಸರ್ಕಾರಿ ಸಮಿತಿ ಈ ಕ್ರಾಂತಿಕಾರಕ ಶಿಫಾರಸ್ಸುಗಳನ್ನು ಮಾಡಿದೆ. ಈ ಎರಡು ವರ್ಗದ ವಾಹನಗಳ ಮಾರಾಟ ವರ್ಷಕ್ಕೆ ಎರಡು ಕೋಟಿಗೂ ಅಧಿಕವಿದ್ದು, ಭಾರತೀಯ ರಸ್ತೆಗಳ ಒಟ್ಟು ವಾಹನಗಳ ಶೇಕಡ 75ರಷ್ಟು ವಾಹನಗಳು ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳಾಗಿವೆ.

ಆದರೆ ಈ ದಿನಾಂಕದವರೆಗೂ ನೋಂದಣಿಯಾದ ವಾಹನಗಳಿಗೆ ಇದು ಅನ್ವಯಿಸುವುದಿಲ್ಲ. ಅಂಥ ಪೆಟ್ರೋಲ್ ವಾಹನಗಳು ಉಳಿದುಕೊಳ್ಳಲಿವೆ. ಮುಂದಿನ ವರ್ಷದ ಎಪ್ರಿಲ್‍ನಿಂದ ಬಿಎಸ್-6 ಗುಣಮಟ್ಟದ ವಾಹನಗಳ ತಯಾರಿಕೆಗೆ ದೊಡ್ಡ ಪ್ರಮಾಣದ ಹಣ ಹೂಡಿಕೆ ಮಾಡಿರುವ ವಾಹನ ಉದ್ಯಮಕ್ಕೆ ಎಲೆಕ್ಟ್ರಿಕ್ ವಾಹನಗಳಿಗೆ ಬದಲಾಯಿಸಿಕೊಳ್ಳಲು ನಾಲ್ಕರಿಂದ ಆರು ವರ್ಷ ಕಾಲಾವಕಾಶ ನೀಡಲಾಗುತ್ತಿದೆ ಎಂದು ಉನ್ನತ ಮೂಲಗಳು ಹೇಳಿವೆ.

ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್ ನೇತೃತ್ವದ ಅಂತರ ಸಚಿವಾಲಯ ಚಾಲನಾ ಸಮಿತಿ, ಸರಕು ಸಾಗಾಣಿಕೆ ವಾಹನಗಳು, ಶಾಲೆ ಮತ್ತು ಸಿಟಿ ಬಸ್ಸುಗಳಿಗೂ ಇಂಥದ್ದೇ ಗಡುವು ನೀಡುವ ಸಾಧ್ಯತೆ ಇದೆ. ಆದರೆ ಈ ಸಲಹೆಗಳು ವಾಹನ ಉದ್ಯಮಕ್ಕೆ ಪಥ್ಯವಾಗುವ ಸಾಧ್ಯತೆ ಕಡಿಮೆ. ಪೆಟ್ರೋಲ್ ಅಥವಾ ಡೀಸೆಲ್ ವಾಹನಗಳ ಬದಲಾಗಿ ಎಲೆಕ್ಟ್ರಿಕ್ ವಾಹನಗಳನ್ನು ಕೈಗೆಟುಕುವಂತೆ ಮಾಡುವ ನಿಟ್ಟಿನಲ್ಲಿ, ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳಿಗೆ ಪ್ರತಿ ಕಿಲೋವ್ಯಾಟ್ ಗಂಟೆಗೆ ನೀಡುವ ನೇರ ಸಬ್ಸಿಡಿಯನ್ನು 20 ಸಾವಿರ ರೂಪಾಯಿಗೆ ಹೆಚ್ಚಿಸುವ ಪ್ರಸ್ತಾಪವನ್ನೂ ಸಮಿತಿ ಮುಂದಿಟ್ಟಿದೆ. ಇದರ ಜತೆಗೆ ಪೆಟ್ರೋಲ್ ಹಾಗೂ ಡೀಸೆಲ್ ವಾಹನಗಳಿಗೆ ಕಟ್ಟುನಿಟ್ಟಿನ ಇಂಧನ ಕ್ಷಮತೆ ಮಾನದಂಡವನ್ನು ನಿಗದಿಪಡಿಸಲು ಕೂಡಾ ಸರ್ಕಾರ ಮುಂದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X