Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಈ ಕಲಾಪ್ರೇಮಿ, ಐದು ಬಾರಿಯ ಸಿಎಂ...

​ಈ ಕಲಾಪ್ರೇಮಿ, ಐದು ಬಾರಿಯ ಸಿಎಂ ಆಲ್‌ಸೀಸನ್ ಲೀಡರ್!

ವಾರ್ತಾಭಾರತಿವಾರ್ತಾಭಾರತಿ24 May 2019 9:34 AM IST
share
​ಈ ಕಲಾಪ್ರೇಮಿ, ಐದು ಬಾರಿಯ ಸಿಎಂ ಆಲ್‌ಸೀಸನ್ ಲೀಡರ್!

ಭುವನೇಶ್ವರ, ಮೇ 24: ಐದು ದಶಕಗಳ ಹಿಂದೆ ರಾಷ್ಟ್ರರಾಜಧಾನಿಯಲ್ಲಿ ಸೈಚೆದೆಲ್ಲಿ ಎಂಬ ಕಲಾ ಮಳಿಗೆ ತೆರೆಯಲು ಹಿಂದಿನ ರಾಜ ಮಾರ್ತಾಂಡ್ ಸಿಂಗ್ ಜತೆ ಕೈಜೋಡಿಸಿದ್ದ ಈ ಕಲಾಪ್ರೇಮಿ ಇದೀಗ ಐದನೇ ಬಾರಿ ಒಡಿಶಾ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಬಿಜು ಜನತಾದಳ ಸಂಸ್ಥಾಪಕ ಬಿಜು ಪಟ್ನಾಯಕ್ ಅವರ ಕಿರಿಯ ಮಗ ರಾಜಕೀಯವಾಗಿ ಈ ಎತ್ತರಕ್ಕೆ ಬೆಳೆಯುತ್ತಾರೆ ಎಂದು ಯಾರೂ ಕಲ್ಪನೆ ಕೂಡಾ ಮಾಡಿರಲಿಲ್ಲ.

1997ರಲ್ಲಿ ಬಿಜು ಪಟ್ನಾಯಕ್ ಮೃತಪಟ್ಟಾಗ ಅವರ ಅನುಯಾಯಿಗಳು ಉತ್ತರಾಧಿಕಾರಿಯ ಹುಡುಕಾಟದಲ್ಲಿದ್ದರು. ಹೊಸದಾಗಿ ಸ್ಥಾಪನೆಯಾದ ಈ ಪ್ರಾದೇಶಿಕ ಪಕ್ಷ ಅನುಕಂಪದ ಅಲೆಯ ಲಾಭ ಪಡೆಯುವ ಸಲುವಾಗಿ ತಂದೆಯ ಹೊಣೆ ನವೀನ್ ಹೆಗಲೇರಿತು. 2000ನೇ ಇಸವಿಯಲ್ಲಿ ನವೀನ್ ಸಿಎಂ ಆಗಲು ಬಿಜೆಪಿ ಜತೆ ಕೈಜೋಡಿಸಿದರು. ಸ್ಥಳೀಯ ಒಡಿಯಾ ಭಾಷೆಯಲ್ಲಿ ಸರಾಗವಾಗಿ ಮಾತನಾಡಲು ಬರದಿದ್ದರೂ, ಅದು ನವೀನ್ ಜನಪ್ರಿಯತೆಗೆ ಅಡ್ಡಿಯಾಗಲಿಲ್ಲ. 2004ರ ಚುನಾವಣೆಯಲ್ಲಿ ಅಟಲ್‌ ಬಿಹಾರಿ ವಾಜಪೇಯಿ ವಿಫಲರಾದರೂ, ಬಿಜೆಪಿ ಸಖ್ಯ ಹೊಂದಿದ್ದ ನವೀನ್ ಬಿಜೆಪಿ ಜತೆ ಸೇರಿ ವಿಧಾನಸಭೆ ಚುನಾವಣೆ ಗೆದ್ದರು. 2009ರ ಚುನಾವಣೆಯಲ್ಲಿ ಬಿಜೆಪಿ ಜತೆ ಸಂಬಂಧ ಕಡಿದುಕೊಂಡರೂ ಆರಾಮವಾಗಿ ಜಯಶಾಲಿಯಾದರು. 2014ರಲ್ಲಿ ಇಡೀ ದೇಶದಲ್ಲಿ ಮೋದಿ ಅಲೆ ಇದ್ದಾಗ ಕೂಡಾ 147 ಸದಸ್ಯಬಲದ ವಿಧಾನಸಭೆಯ 117 ಸ್ಥಾನಗಳನ್ನು ಹಾಗೂ ರಾಜ್ಯದ 21 ಲೋಕಸಭಾ ಸ್ಥಾನಗಳ ಪೈಕಿ 20ನ್ನು ಗೆದ್ದು ದಾಖಲೆ ಸ್ಥಾಪಿಸಿದರು.

ಆದರೆ ಈ ಚುನಾವಣೆಯಲ್ಲಿ ಮೋದಿ- ಶಾ ಜೋಡಿ ಒಡಿಶಾ ವಶಕ್ಕೆ ಹೊರಟ ಹಿನ್ನೆಲೆಯಲ್ಲಿ ರಾಜ್ಯದ ಉದ್ದಗಲಕ್ಕೂ ಓಡಾಡಿ 150 ಪ್ರಚಾರ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಅಧಿಕಾರ ವಿರೋಧಿ ಅಲೆಯನ್ನು ಮೆಟ್ಟಿ ನಿಲ್ಲುವ ಪ್ರಯತ್ನವಾಗಿ ರಾಜ್ಯದ 57 ಲಕ್ಷಕ್ಕೂ ಅಧಿಕ ರೈತರಿಗೆ ವಾರ್ಷಿಕ 10 ಸಾವಿರ ರೂಪಾಯಿಯನ್ನು ನೇರವಾಗಿ ವರ್ಗಾಯಿಸುವ ಯೋಜನೆ ಆರಂಭಿಸಿದರು.

ಕಳೆದ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸಿದ್ದ ಮಹಿಳಾ ಮತದಾರರಿಗೆ ಕೂಡಾ ನಿರಾಸೆ ಮಾಡದೇ, ಸ್ವಸಹಾಯ ಸಂಘಗಳಿಗೆ 15 ಸಾವಿರ ರೂಪಾಯಿಯಿಂದ ಆರು ಲಕ್ಷ ರೂಪಾಯಿವರೆಗೂ ನೆರವು ನೀಡಿದರು. ಈ ಬಾರಿ 21 ಲೋಕಸಭಾ ಕ್ಷೇತ್ರಗಳ ಪೈಕಿ 7 ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಟ್ಟರು. ಈ ಪೈಕಿ ಆರು ಮಂದಿ ಗೆಲುವಿನ ನಗೆ ಬೀರಿದ್ದಾರೆ. ಲೋಕಸಭೆಗೆ ಈ ಬಾರಿ 11 ಸದಸ್ಯರನ್ನು ಮಾತ್ರ ಕಳುಹಿಸಲು ಬಿಜೆಡಿಗೆ ಸಾಧ್ಯವಾಗಿದ್ದರೂ, ವಿಧಾನಸಭೆಯಲ್ಲಿ ನಿಚ್ಚಳ ಬಹುಮತ ಸಾಧಿಸಿದೆ. ಗೆಲುವು ಹಾಗೂ ಮುನ್ನಡೆ ಸೇರಿ ಬಿಜೆಡಿ 112 ಸ್ಥಾನಗಳನ್ನು ಗಳಿಸಿದೆ. ಬಿಜೆಪಿ 22 ಸ್ಥಾನಗಳನ್ನು ಪಡೆದಿದೆ.

ಪಶ್ಚಿಮ ಬಂಗಾಳದ ಮಾಜಿ ಸಿಎಂ ಜ್ಯೋತಿ ಬಸು ಹಾಗೂ ಸಿಕ್ಕಿಂನ ಪವನ್ ಚಾಮ್ಲಿಂಗ್ ಮಾತ್ರ ಇದುವರೆಗೆ ಸತತ ಐದು ಬಾರಿ ಸಿಎಂ ಆಗಿದ್ದರು. ಇದೀಗ ನವೀನ್ ಪಟ್ನಾಯಕ್ ಕೂಡಾ ಆ ಸಾಲಿಗೆ ಸೇರುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X