Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇನ್ನೂ ದುರಸ್ತಿಯಾಗದ ಗಂಗೊಳ್ಳಿ ಜಟ್ಟಿ:...

ಇನ್ನೂ ದುರಸ್ತಿಯಾಗದ ಗಂಗೊಳ್ಳಿ ಜಟ್ಟಿ: ಮೀನುಗಾರರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ24 May 2019 8:18 PM IST
share
ಇನ್ನೂ ದುರಸ್ತಿಯಾಗದ ಗಂಗೊಳ್ಳಿ ಜಟ್ಟಿ: ಮೀನುಗಾರರ ಆಕ್ರೋಶ

ಗಂಗೊಳ್ಳಿ, ಮೇ 24: ಗಂಗೊಳ್ಳಿ ಮೀನುಗಾರಿಕಾ ಬಂದರಿನ ಜೆಟ್ಟಿ ಕುಸಿದು ಏಳು ತಿಂಗಳು ಕಳೆದರೂ ಸಂಬಂಧ ಪಟ್ಟ ಇಲಾಖೆಯವರು ಈವರೆಗೆ ದುರಸ್ತಿ ಕಾರ್ಯ ನಡೆಸದೆ ನಿರ್ಲಕ್ಷ ವಹಿಸಿರುವ ಬಗ್ಗೆ ಸ್ಥಳೀಯ ಮೀನುಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷದ ಅ.13ರಂದು ಗಂಗೊಳ್ಳಿ ಬಂದರಿನ ಎರಡನೆ ಹರಾಜು ಪ್ರಾಂಗಣದ ಸ್ಲ್ಯಾಬ್ ಕುಸಿದಿದ್ದು, ಮುಂದೆ ಡಿ.7ರಂದು ಮತ್ತೊಂದು ಕಡೆ ಕೂಡ ಸ್ಲ್ಯಾಬ್ ಕುಸಿತ ಕಂಡಿತ್ತು. ಪ್ರಮುಖ ಮೀನುಗಾರಿಕಾ ಬಂದರು ಆಗಿರುವ ಗಂಗೊಳ್ಳಿಯ ಈ ಸಮಸ್ಯೆಗೆ ಈವರೆಗೆ ಪರಿಹಾರ ಭಾಗ್ಯ ಕಂಡಿಲ್ಲ. ಅಧಿಕಾರಿ ಗಳು ವಿವಿಧ ಕಾರಣ ನೀಡಿ ದುರಸ್ತಿ ಕಾರ್ಯವ್ನು ಮುಂದೂಡುತ್ತಲೇ ಬಂದಿದ್ದಾರೆ.

ಎರಡು ಕಡೆಗಳಲ್ಲಿ ಸ್ಲ್ಯಾಬ್ ಕುಸಿದ ಪರಿಣಾಮ ಮೀನುಗಾರಿಕೆ ಮುಗಿಸಿ ವಾಪಾಸು ಬರುವ ಬೋಟುಗಳು ಹಾಗೂ ದೋಣಿಗಳಿಂದ ಬಂದರಿನಲ್ಲಿ ಮೀನುಗಳನ್ನು ಇಳಿಸಲು ಜಾಗದ ಕೊರತೆ ಕಾಡುತ್ತಿದೆ. ಇದರಿಂದ ನೂರಾರು ಮಂದಿ ನಾಡದೋಣಿ, ಬೋಟುಗಳ ಮೀನುಗಾರರಿಗೆ ತೊಂದರೆ ಯಾಗುತ್ತಿದೆ. ಅದನ್ನು ಮೀರಿ ಈ ಜಟ್ಟಿಯಲ್ಲೇ ಬೋಟಿನಿಂದ ಮೀನು ಇಳಿಸುವ ಕಾರ್ಯ ಮಾಡಿದರೆ ಮತ್ತಷ್ಟು ಜಟ್ಟಿ ಕುಸಿಯುವ ಸಾಧ್ಯತೆ ಇದೆ. ಅದೇ ರೀತಿ ಇಲ್ಲಿನ ಎರಡನೇ ಹರಾಜು ಪ್ರಾಂಗಣ್ಕೂ ಧಕ್ಕೆಯಾಗುವ ಭೀತಿ ಎದುರಾಗಿದೆ.

ಕಳೆದ ನವೆಂಬರ್‌ನಲ್ಲಿ ನಡೆದ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಾಗೂ ಈ ಬಾರಿಯ ಲೋಕಸಭಾ ಚುನಾವಣಾ ಪ್ರಚಾರದ ಸಮಯ ರಾಜ್ಯ ಮೀನುಗಾರಿಕಾ ಸಚಿವ ವೆಂಕಟ ರಾವ್ ನಾಡಗೌಡ ಗಂಗೊಳ್ಳಿಗೆ ಭೇಟಿ ನೀಡಿದ್ದರು. ಈ ವೇಳೆ ಮೀನುಗಾರರ ನಿಯೋಗ ಈ ಕುರಿತಂತೆ ಎರಡು ಬಾರಿ ಸಚಿವರಿಗೆ ಮನವಿ ಸಲ್ಲಿಸಿತ್ತು. ಆದರೆ ಅವರು ಭರವಸೆ ನೀಡಿದ್ದಾರೆಯೇ ಹೊರತು ಈವರೆಗೆ ದುರಸ್ತಿ ಕಾರ್ಯಕ್ಕೆ ಸೂಚನೆ ನೀಡಿಲ್ಲ.

ಮೇ 23ರವರೆಗೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಟ್ಟಿ ದುರಸ್ತಿಗೆ ಅನುದಾನ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಸಚಿವರು ಹೇಳಿದ್ದಾರೆ. ಇದೀಗ ಚುನಾವಣೆ ಮುಗಿದಿದ್ದು, ಇನ್ನಾದರೂ ಕಾಮಗಾರಿಯನ್ನು ಶೀಘ್ರವೇ ಆರಂಭಿಸಿ ಮೀನುಗಾರರಿಗೆ ಅನುಕೂಲ ಮಾಡಿಕೊಡಬೇಕೆಂದು ಸ್ಥಳೀಯ ಮೀನುಗಾರರರು ಒತ್ತಾಯಿಸಿದ್ದಾರೆ.

ಇನ್ನು ಕೆಲ ದಿನಗಳಲ್ಲೇ ಮಳೆಗಾಲ ಆರಂಭವಾಗಲಿದ್ದು, ಅದರ ನಂತರ ಕಾಮಗಾರಿ ನಡೆಸಲು ಸಾಧ್ಯವಿಲ್ಲ. ಈ ಮಧ್ಯೆ ಕಾಮಗಾರಿ ನಡೆಯುವ ಬಗ್ಗೆ ಮೀನುಗಾರರು ಅನುಮಾನ ವ್ಯಕ್ತಪಡಿಸಿದ್ದಾರೆ. ಕಳೆದ ಅಕ್ಟೋಬರ್‌ನಲ್ಲಿ ಕುಸಿದ ಜಟ್ಟಿ ದುರಸ್ತಿಯಾಗಲು ಇನ್ನೆಷ್ಟು ಸಮಯ ಕಾಯಬೇಕು ಎಂಬುದು ಮೀನುಗಾರರ ಯಕ್ಷ ಪ್ರಶ್ನೆಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X