Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹಣ್ಣುಗಳ ಸಿಪ್ಪೆಗಳಿಂದ ನೀರು ಶುದ್ಧೀಕರಣ:...

ಹಣ್ಣುಗಳ ಸಿಪ್ಪೆಗಳಿಂದ ನೀರು ಶುದ್ಧೀಕರಣ: ವಿದ್ಯಾರ್ಥಿಯ ಸಂಶೋಧನೆ

ವಾರ್ತಾಭಾರತಿವಾರ್ತಾಭಾರತಿ24 May 2019 11:25 PM IST
share

ಬೆಂಗಳೂರು, ಮೇ 24: ಬೆಳ್ಳಂದೂರು ಕೆರೆಯ ನೊರೆ ಹಾಗೂ ಬೆಂಕಿಗೆ ಕಾರಣವಾದ ರಾಸಾಯನಿಕ ಮಿಶ್ರಿತ ನೀರನ್ನು ವಿವಿಧ ಹಣ್ಣುಗಳ ಸಿಪ್ಪೆಗಳ ಮೂಲಕ ಶುದ್ಧೀಕರಿಸುವ ವಿಧಾನವನ್ನು ವೈಟ್‌ಫೀಲ್ಡ್ ಸಮೀಪದ ಎಂವಿಜೆ ಎಂಜಿನಿಯರಿಂಗ್ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿ ಸಂಶೋಧಿಸಿದ್ದಾರೆ.

ಇಲ್ಲಿನ ಏರೋನಾಟಿಕ್ಸ್ ಎಂಜಿನಿಯರಿಂಗ್ ಅಧ್ಯಯನ ಮಾಡುತ್ತಿರುವ ಎ.ಪವನ್ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಯೋಗಾಲಯದಲ್ಲಿ ಈ ಪ್ರಯೋಗ ಮಾಡಿದ್ದು, ಶುದ್ಧೀಕರಿಸಿದ ನೀರನ್ನು ಕುಡಿಯುವುದನ್ನು ಬಿಟ್ಟು ಬೇರೆಲ್ಲಾ ಕೆಲಸಗಳಿಗೆ ಬಳಸಲು ಯೋಗ್ಯವಾಗಿದೆ ಎಂದು ಕೆಎಸ್‌ಪಿಸಿಬಿ ಲ್ಯಾಬ್ ಪ್ರಮಾಣಪತ್ರ ನೀಡಿದೆ.

ಕೈಗಾರಿಕೆಗಳ ತ್ಯಾಜ್ಯ ನೀರಿನಿಂದ ಕೆರೆ ನೀರು ಕಲುಷಿತಗೊಳ್ಳುತ್ತಿರುವುದು ನಿಜವಾದರೂ, ಮನೆಯ ಡಿಟರ್‌ಜೆಂಟ್ ತ್ಯಾಜ್ಯಗಳಲ್ಲಿರುವ ಫ್ಲೋರೈಡ್ ಮತ್ತು ಪಾಸ್ಫೇಟ್ ಅಂಶಗಳು ನೀರನ್ನು ಸಂಪೂರ್ಣ ಹಾಳುಗೆಡವಿವೆ. ಇದು ನೂರೆ ಮತ್ತು ಬೆಂಕಿಗೆ ಕಾರಣವಾಗುವುದು ಸಂಶೋಧನೆ ಸಮಯದಲ್ಲಿ ಕಂಡುಬಂದಿದೆ ಎಂದು ಪವನ್ ತಿಳಿಸಿದರು.

ಬೆಳ್ಳಂದೂರು ಕೆರೆಯ ನೊರೆ ಮತ್ತು ಬೆಂಕಿಯ ಸುದ್ದಿ ಓದಿದಾಗ, ಕೆರೆ ರಸ್ತೆಯಲ್ಲಿ ತೆರಳುವಾಗ ಭಯವಾಗುತ್ತಿತ್ತು. ಈ ಸಮಸ್ಯೆಗೆ ಏನಾದರೂ ಪರಿಹಾರ ಕಂಡುಕೊಳ್ಳಲೇಬೇಕೆಂಬ ಗುರಿಯೊಂದಿಗೆ 8 ತಿಂಗಳ ಹಿಂದೆ ಈ ಪ್ರಯೋಗ ಆರಂಭಿಸಿದೆ. ಸಮೀಪದ ಜ್ಯೂಸ್ ಶಾಪ್‌ಗಳಿಂದ ಬಾಳೆಹಣ್ಣು, ಅನಾನಸ್, ಕಲ್ಲಂಗಡಿ, ನಿಂಬೆ ಮತ್ತು ಪಪ್ಪಾಯ ಹಣ್ಣುಗಳ ಸಿಪೆಗಳನ್ನು ಸಂಗ್ರಹಿಸಿ, ಎರಡು ವಾರದವರೆಗೆ ಬಿಸಿಲಿನಲ್ಲಿ ಒಣಗಿಸಿದೆ. ನಂತರ ಈ ಸಿಪ್ಪೆಗಳನ್ನು ಪುಡಿಯಾಗಿ ಮಾರ್ಪಡಿಸಿ, ಕೃತಕ ಪೊರೆ ರೂಪಕ್ಕೆ ತರಲಾಯಿತು.

ಬಳಿಕ, ಬೆಳ್ಳಂದೂರು ಕೆರೆಯಿಂದ ಐದು ಲೀಟರ್ ಕೊಳಚೆ ನೀರನ್ನು ಸಂಗ್ರಹಿಸಿ ಪೊರೆಯ ಮೂಲಕ ಫಿಲ್ಟರ್ ಮಾಡಲು ಒಂದು ದಿನ ಬೇಕಾಯಿತು. ಹೀಗೆ ಶುದ್ಧವಾದ ನೀರು ಕುಡಿಯಲು ಬರುವುದಿಲ್ಲ. ಬದಲಿಗೆ ಬೇರೆಲ್ಲ ಕೆಲಸಗಳಿಗೂ ಬಳಸಬಹುದು ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X