Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೆಎಸ್ಸಾರ್ಟಿಸಿ ಫೆಡರೇಷನ್‌ನಿಂದ ಜೂ.27...

ಕೆಎಸ್ಸಾರ್ಟಿಸಿ ಫೆಡರೇಷನ್‌ನಿಂದ ಜೂ.27 ರಂದು ಬೆಂಗಳೂರು ಚಲೋ

ವಾರ್ತಾಭಾರತಿವಾರ್ತಾಭಾರತಿ25 May 2019 8:27 PM IST
share

ಬೆಂಗಳೂರು, ಮೇ 25: ಕೆಎಸ್ಸಾರ್ಟಿಸಿ ಸ್ಟಾಪ್ ಅಂಡ್ ವರ್ಕರ್ಸ್ ಫೆಡರೇಷನ್ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮೇ 28 ರಂದು ರಾಜ್ಯದ ಎಲ್ಲಾ ವಿಭಾಗೀಯ ಕಚೇರಿಗಳ ಮುಂದೆ ಧರಣಿ ಸತ್ಯಾಗ್ರಹ ಹಾಗೂ ಜೂ.27 ರಂದು ಬೆಂಗಳೂರು ಚಲೋ ನಡೆಸಲು ತೀರ್ಮಾನಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಫೆಡರೇಶನ್‌ನ ಅಧ್ಯಕ್ಷ ಎಚ್.ವಿ. ಅನಂತ ಸುಬ್ಬರಾವ್ ಮಾತನಾಡಿ, ಸಾರಿಗೆ ನಿಗಮಗಳಲ್ಲಿ ಕಾರ್ಮಿಕರಿಗೆ ಸಂಬಂಧಪಟ್ಟಂತೆ ಅನೇಕ ಸಮಸ್ಯೆಗಳು ಉಲ್ಬಣವಾಗುತ್ತಿವೆ. ಇದರಿಂದ ಕಾರ್ಮಿಕರು ನೆಮ್ಮದಿಯಿಂದ ಕೆಲಸ ಮಾಡುವ ಪರಿಸ್ಥಿತಿ ಸಂಸ್ಥೆಯಲ್ಲಿ ಇಲ್ಲದಂತಾಗಿದೆ. ಆದ್ದರಿಂದ ಈ ಬಗ್ಗೆ ಸರಕಾರ ಗಮನ ಹರಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ಸಾರಿಗೆ- ನಿಗಮಗಳಲ್ಲಿ ಕಾರ್ಮಿಕರಿಗೆ ಒದಗಿಸಿರುವ ವೈದ್ಯಕೀಯ ವ್ಯವಸ್ಥೆಯು ಬಹಳ ಅಸಮರ್ಪಕವಾಗಿದೆ. ಸಾರಿಗೆ ನಿಗಮಗಳ ನೌಕರಿಗೆ ಆಸ್ಪತ್ರೆಗಳು ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಬೇಕು. ನಾಲ್ಕು ಸಾರಿಗೆ ನಿಗಮಗಳಲ್ಲೂ ಕೈಗಾರಿಕಾ ಬಾಂಧವ್ಯ ಸಂಪೂರ್ಣವಾಗಿ ಕುಸಿದಿದೆ. ಕೈಗಾರಿಕಾ ಬಾಂಧವ್ಯವನ್ನು ಸರಿಪಡಿಸುವ ದಿಕ್ಕಿನಲ್ಲಿ ಆಡಳಿತ ವರ್ಗ ಯಾವುದೇ ಸಕಾರಾತ್ಮಕ ಕ್ರಮ ತೆಗೆದುಕೊಂಡಿಲ್ಲ. ಇದರ ಬಗ್ಗೆ ಸರಕಾರ ಗಮನ ಹರಿಸಿ ಕೈಗಾರಿಕಾ ಬಾಂಧವ್ಯ ಮೂಡಿಸಬೇಕು ಎಂದು ಹೇಳಿದರು.

ಕಳೆದ ಹತ್ತಾರು ವರ್ಷಗಳಿಂದ ಸಾರಿಗೆ ನಿಗಮಗಳಲ್ಲಿ ಕಾರ್ಯಸ್ಥಳದಲ್ಲಿ ಹಿಂಸೆ ಕಿರುಕುಳಗಳನ್ನು ತಾಳಲಾರದೆ ಹತಾಶರಾಗಿ ನೌಕರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು. ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ತಿಳಿಸಿದರು.

ಸರಕಾರ ತ್ರಿಪಕ್ಷೀಯ ಸಭೆ ಕರೆದು ಬೇಡಿಕೆಗಳನ್ನು ಈಡೇರಿಸಬೇಕು. ಈ ಹೋರಾಟದ ಮೊದಲೇ ಸಭೆ ಕರೆದು ಬೇಡಿಕೆ ಈಡೇರಿಸಿದರೆ ಪ್ರತಿಭಟನೆಯನ್ನು ಹಿಂಪಡೆಯಲಾಗುವುದು ಇಲ್ಲದಿದ್ದರೆ ಹೋರಾಟ ಮುಂದುವರೆಸಲಾಗುವುದು ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಫೆಡರೇಶನ್‌ನ ಪದಾಧಿಕಾರಿಗಳಾದ ಟಿ.ಎಲ್.ರಾಜಗೋ ಪಾಲ್, ಬಿ.ನಾರಾಯಣ ರೆಡ್ಡಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X