Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಹುಲ್ ರಾಜೀನಾಮೆಯನ್ನು ಸರ್ವಾನುಮತದಿಂದ...

ರಾಹುಲ್ ರಾಜೀನಾಮೆಯನ್ನು ಸರ್ವಾನುಮತದಿಂದ ತಿರಸ್ಕರಿಸಿದ ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ25 May 2019 10:07 PM IST
share
ರಾಹುಲ್ ರಾಜೀನಾಮೆಯನ್ನು ಸರ್ವಾನುಮತದಿಂದ ತಿರಸ್ಕರಿಸಿದ ಕಾಂಗ್ರೆಸ್

ಹೊಸದಿಲ್ಲಿ,ಮೇ 25: ಶನಿವಾರ ಇಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲುಸಿ) ಸಭೆಯಲ್ಲಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಷ್ಟ್ರಮಟ್ಟದಲ್ಲಿ ಚುನಾವಣಾ ಸೋಲಿನ ಹಿನ್ನೆಲೆಯಲ್ಲಿ ತನ್ನ ಹುದ್ದೆಗೆ ರಾಜೀನಾಮೆಯನ್ನು ಸಲ್ಲಿಸಲು ಮುಂದಾಗಿದ್ದರೂ ಪಕ್ಷವು ಅದನ್ನು ಸರ್ವಾನುಮತದಿಂದ ತಿರಸ್ಕರಿಸಿದೆ.

ಈ ಸವಾಲಿನ ಸಮಯದಲ್ಲಿ ಮಾರ್ಗದರ್ಶನಕ್ಕಾಗಿ ನಮಗೆ ರಾಹುಲ್ ಗಾಂಧಿಯವರ ಅಗತ್ಯವಿದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಅವರು ಸಿಡಬ್ಲುಸಿ ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

ಚುನಾವಣೆಯಲ್ಲಿ ಕೇವಲ 52 ಸ್ಥಾನಗಳು ದೊರಕಿರುವ ಆಘಾತದಲ್ಲಿರುವ ಕಾಂಗ್ರೆಸ್ ಸೋಲಿನ ಕುರಿತು ಚರ್ಚಿಸಲು ನಾಲ್ಕು ಗಂಟೆಗಳ ನಡೆದ ಸಭೆಯಲ್ಲಿ ಸೋಲಿನ ನೈತಿಕ ಹೊಣೆಯನ್ನು ಹೊತ್ತುಕೊಂಡ ರಾಹುಲ್ ಅವರ ‘ತಪ್ಪೊಪ್ಪಿಗೆ’ಗೆ ಸಿದ್ಧ ಮಾದರಿಯಲ್ಲಿ ಪ್ರತಿಕ್ರಿಯಿಸಿತು. ರಾಹುಲ್‌ರನ್ನು ಪ್ರಶಂಸಿಸಿದ ಪಕ್ಷದ ನಾಯಕರು ಪಕ್ಷದ ಸಂಪೂರ್ಣ ಪುನಃಶ್ಚೇತನಕ್ಕೆ ಅವರಿಗೆ ಅಧಿಕಾರ ನೀಡಿದರು.

ಈ ಬಾರಿಯ ಚುನಾವಣೆಯಲ್ಲಿ ರಾಹುಲ್ ಮತ್ತು ಅವರ ಸೋದರಿ ಪ್ರಿಯಾಂಕಾ ಗಾಂಧಿ ಅವರು ರಾಷ್ಟ್ರಾದ್ಯಂತ ವ್ಯಾಪಕ ಪ್ರಚಾರ ನಡೆಸಿದ್ದರಾದರೂ ಅಂತಿಮ ಫಲಿತಾಂಶ ತೀರ ನಿರಾಶಾದಾಯಕವಾಗಿದೆ. ಸ್ವ್ವತಃ ರಾಹುಲ್ ತನ್ನ ಭದ್ರಕೋಟೆಯಾಗಿದ್ದ ಅಮೇಠಿಯಲ್ಲಿ ಸೋಲನ್ನಪ್ಪಿದ್ದು,ಕೇರಳದ ವಯನಾಡಿನಲ್ಲಿ ಗೆಲ್ಲುವ ಮೂಲಕ ಕೊಂಚ ಸಮಾಧಾನ ಕಂಡುಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಹುಲ್ ಆರಂಭಿಸಿದ್ದ ‘ಚೌಕಿದಾರ ಚೋರ್ ಹೈ’ ಅಭಿಯಾನವು ಜನರನ್ನು ಮತ್ತು ಮತಗಳನ್ನು ಸೆಳೆಯುವಲ್ಲಿ ವಿಫಲಗೊಂಡಿತ್ತು. ಕಳೆದ ಲೋಕಸಭೆಯಲ್ಲಿ 44 ಸದಸ್ಯರನ್ನು ಹೊಂದುವ ಮೂಲಕ ತನ್ನ ಐತಿಹಾಸಿಕ ಪತನವನ್ನು ಕಂಡಿದ್ದ ಕಾಂಗ್ರೆಸ್ ಈ ಬಾರಿ 52 ಸ್ಥಾನಗಳನ್ನು ಗಳಿಸಿದೆ. ಈ ಅವಧಿಯಲ್ಲಿಯೂ ಅದು ಪ್ರತಿಪಕ್ಷ ನಾಯಕ ಸ್ಥಾನದಿಂದ ವಂಚಿತವಾಗಲಿದೆ.

 ತನ್ಮಧ್ಯೆ ಸೋಲಿಗೆ ಗೂಬೆ ಕೂರಿಸುವ ಕಾಯಕ ಪಕ್ಷದ ರಾಜ್ಯ ವರಿಷ್ಠರಿಗೂ ಬಿಸಿ ಮುಟ್ಟಿಸಿದೆ. ಅವರೆಲ್ಲ ಸೋಲಿನ ಹೊಣೆಗಾರಿಕೆಯನ್ನು ವಹಿಸಿಕೊಂಡಿದ್ದು,ಹುದ್ದೆಯಿಂದ ಕೆಳಗಿಳಿಯುವುದಾಗಿ ಹೇಳಿದ್ದಾರೆ. ಮೂವರು ಈಗಾಗಲೇ ರಾಜೀನಾಮೆಗಳನ್ನು ಸಲ್ಲಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X