Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋರಕ್ಷಕರಿಂದ ಅಮಾಯಕರ ಮೇಲೆ ಹಲ್ಲೆ...

ಗೋರಕ್ಷಕರಿಂದ ಅಮಾಯಕರ ಮೇಲೆ ಹಲ್ಲೆ ಆಘಾತಕಾರಿ: ಮೆಹಬೂಬ ಮುಫ್ತಿ

ವಾರ್ತಾಭಾರತಿವಾರ್ತಾಭಾರತಿ25 May 2019 10:50 PM IST
share
ಗೋರಕ್ಷಕರಿಂದ ಅಮಾಯಕರ ಮೇಲೆ ಹಲ್ಲೆ ಆಘಾತಕಾರಿ: ಮೆಹಬೂಬ ಮುಫ್ತಿ

ಶ್ರೀನಗರ,ಮೇ 25: ಇಬ್ಬರು ವ್ಯಕ್ತಿಗಳನ್ನು ಥಳಿಸಿರುವ ಶಂಕಿತ ಗೋರಕ್ಷಕರ ವಿರುದ್ಧ ಮಧ್ಯಪ್ರದೇಶ ಸರಕಾರವು ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರು ಶನಿವಾರ ಆಶಯ ವ್ಯಕ್ತಪಡಿಸಿದ್ದಾರೆ.

ಮಧ್ಯಪ್ರದೇಶದ ಸಿಯೋನಿಯಲ್ಲಿ ಗೋಮಾಂಸವನ್ನು ಸಾಗಿಸುತ್ತಿದ್ದ ಆರೋಪದಲ್ಲಿ ಶಂಕಿತ ಗೋರಕ್ಷಕರು ಇಬ್ಬರನ್ನು ದೊಣ್ಣೆಗಳಿಂದ ಥಳಿಸಿದ್ದು,ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಥಳಿತದ ದೃಶ್ಯಗಳಿರುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

 ‘‘ಗೋರಕ್ಷಕರು ಇಷ್ಟೊಂದು ನಿರ್ಭೀತಿಯಿಂದ ಅಮಾಯಕ ಮುಸ್ಲಿಮರನ್ನು ಥಳಿಸುತ್ತಿರುವ ದೃಶ್ಯ ಕಂಡು ಆಘಾತವಾಗಿದೆ. ಈ ಗೂಂಡಾಗಳ ವಿರುದ್ಧ ಸರಕಾರವು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಆಶಿಸಿದ್ದೇನೆ’’ ಎಂದು ಮುಫ್ತಿ ಟ್ವೀಟಿಸಿದ್ದಾರೆ. ಇದು ಆರಂಭವಷ್ಟೇ ಎಂದು ಹೇಳಿರುವ ಜಮ್ಮು-ಕಾಶ್ಮೀರದ ಇನ್ನೋರ್ವ ಮಾಜಿ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ,ಭವಿಷ್ಯದಲ್ಲಿ ಇನ್ನಷ್ಟು ಕೆಟ್ಟದ್ದು ಕಾದಿದೆ ಎಂದು ಭೀತಿ ವ್ಯಕ್ತಪಡಿಸಿದ್ದಾರೆ.

‘ಇಬ್ತೆದಾಯೆ ಇಷ್ಕ್ ಹೈ ರೋತಾ ಹೈ ಕ್ಯಾ,ಆಗೆ ಆಗೆ ದೇಖಿಯೆ ಹೋತಾ ಹೈ ಕ್ಯಾ’ ಎಂಬ 18ನೇ ಶತಮಾನದ ಉರ್ದು ಕವಿ ಮಿರ್ ತಾಕಿ ಮಿರ್ ಅವರ ಕವನದ ಸಾಲುಗಳನ್ನು ಅಬ್ದುಲ್ಲಾ ಟ್ವೀಟಿಸಿದ್ದಾರೆ.

ಹಲ್ಲೆಗೊಳಗಾದವರು ತಮ್ಮ ಜೊತೆಯಲ್ಲಿದ್ದ ಮಹಿಳೆಗೆ ಚಪ್ಪಲಿಯಿಂದ ಥಳಿಸುವಂತೆಯೂ ಐವರು ಗೋರಕ್ಷಕರ ಗುಂಪು ಮಾಡಿತ್ತು ಎಂದು ತಿಳಿಸಿದ ಪೊಲೀಸ್ ಅಧಿಕಾರಿಯೋರ್ವರು,ಮಧ್ಯಪ್ರದೇಶದಲ್ಲಿ ಗೋಮಾಂಸವನ್ನು ಹೊಂದಿರುವುದು ಮತ್ತು ಸಾಗಿಸುವುದು ಅಪರಾಧವಾಗಿರುವುದರಿಂದ ಹಲ್ಲೆಗೊಳಗಾದ ಮೂವರನ್ನು ಬಂಧಿಸಲಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X