Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಧ್ಯಪ್ರಾಚ್ಯದಲ್ಲಿ 1500 ಹೆಚ್ಚುವರಿ...

ಮಧ್ಯಪ್ರಾಚ್ಯದಲ್ಲಿ 1500 ಹೆಚ್ಚುವರಿ ಸೈನಿಕರ ನಿಯೋಜನೆ: ಅಮೆರಿಕ ಘೋಷಣೆ

ಇರಾನ್ ಜೊತೆಗಿನ ಬಿಕ್ಕಟ್ಟು ಉಲ್ಬಣ ಸಾಧ್ಯತೆ

ವಾರ್ತಾಭಾರತಿವಾರ್ತಾಭಾರತಿ25 May 2019 11:39 PM IST
share
ಮಧ್ಯಪ್ರಾಚ್ಯದಲ್ಲಿ 1500 ಹೆಚ್ಚುವರಿ ಸೈನಿಕರ ನಿಯೋಜನೆ: ಅಮೆರಿಕ ಘೋಷಣೆ

ವಾಶಿಂಗ್ಟನ್,ಮೇ 25: ಅಮೆರಿಕವು 1500 ಮಂದಿ ಹೆಚ್ಚುವರಿ ಸೈನಿಕರನ್ನು ಮಧ್ಯಪ್ರಾಚ್ಯದಲ್ಲಿ ನಿಯೋಜಿಸಲಿದೆಯೆಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಯುಎಇ ಸಮುದ್ರಪ್ರದೇಶದಲ್ಲಿ ತೈಲಟ್ಯಾಂಕರ್‌ ಗಳ ಮೇಲೆ ನಡೆದ ದಾಳಿಯ ಹಿಂದೆ ಇರಾನ್‌ನ ಕೈವಾಡವಿದೆಯೆಂದು ಅಮೆರಿಕದ ರಕ್ಷಣಾ ಇಲಾಖೆ ಪೆಂಟಗಾನ್ ಆರೋಪಿಸಿದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.

    ಶುಕ್ರವಾರ ಜಪಾನ್ ಪ್ರವಾಸಕ್ಕೆ ತೆರಳುವ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘‘ ಮಧ್ಯಪ್ರಾಚ್ಯದಲ್ಲಿ ನಮಗೆ ಸಂಪೂರ್ಣ ರಕ್ಷಣೆಯ ಅಗತ್ಯವಿದೆ’’ ಎಂದು ಹೇಳಿದರು. ನಾವು ಮಧ್ಯಪ್ರಾಚ್ಯಕ್ಕೆ ರಕ್ಷಣಾತ್ಮಕವಾಗಿ, ಅತ್ಯಂತ ಕಡಿಮೆ ಸಂಖ್ಯೆಯ ಸೈನಿಕರನ್ನು ಕಳುಹಿಸುತ್ತಿದ್ದೇವೆ’’ ಎಂದು ಟ್ರಂಪ್ ತಿಳಿಸಿದರು. ‘‘ ಕೆಲವು ಪ್ರತಿಭಾವಂತ ವ್ಯಕ್ತಿಗಳು ಮಧ್ಯಪ್ರಾಚ್ಯಕ್ಕೆ ನಿರ್ಗಮಿಸುತ್ತಿದ್ದಾರೆ. ಮುಂದೇನಾಗುತ್ತದೋ ನೋಡೋಣ’’ ಎಂದ ವರು ಹೇಳಿದರು.

    ಅಮೆರಿಕ ಅಧ್ಯಕ್ಷರ ಹೇಳಿಕೆಯ ಬೆನ್ನಲ್ಲೇ ಈ ತಿಂಗಳ ಆರಂಭದಲ್ಲಿ ಯುಎಇನ ಸಮುದ್ರಪ್ರದೇಶದಲ್ಲಿ ತೈಲಟ್ಯಾಂಕರ್‌ಗಳ ಮೇಲೆ ನಡೆದ ದಾಳಿಗೆ ಇರಾನ್‌ನ ಕ್ರಾಂತಿಕಾರಿ ಪಡೆ (ಐಆರ್‌ಜಿಸಿ) ನೇರ ಹೊಣೆಗಾನಾಗಿದೆ ಎಂದು ಆರೋಪಿಸಿದೆ. ಯುಎಇನಲ್ಲಿ ನಿಯೋಜಿತವಾಗಿರುವ ಅಮೆರಿಕದ ಸೇನಾಪಡೆಗಳನ್ನು ಹೊರದಬ್ಬುವ ತನ್ನ ಅಭಿಯಾನದ ಅಂಗವಾಗಿ ಟೆಹರಾನ್ ಈ ಕ್ರಮಕ್ಕೆ ಮುಂದಾಗಿದೆಯೆಂದು ಅದು ಹೇಳಿದೆ.

   ‘‘ಫ್ಯುಜೈರಾದ ಮೇಲೆ ನಡೆದ ದಾಳಿಯ ಹೊಣೆಗಾರಿಕೆಯನ್ನು ನಾವು ಐಆರ್‌ಜಿಸಿಯ ಮೇಲೆ ಹೊರಿಸುತ್ತೇವೆ ’’ ಎಂದು ಜಂಟಿ ಸಿಬ್ಬಂದಿ ವರಿಷ್ಠ ರಿಯರ್ ಆಡ್ಮಿರಲ್ ಮೈಕೆಲ್ ಗಿಲ್ಡೆ ತಿಳಿಸಿದ್ದಾರೆ. ತೈಲ ಟ್ಯಾಂಕರ್‌ಗಳ ಮೇಲೆ ದಾಳಿ ನಡೆಸಲು ಐಆರ್‌ಜಿಸಿಯು ಲಿಂಪೆಟ್ ಮೈನ್ಸ್ ಬಾಂಬ್‌ಗಳನ್ನು ಬಳಸಿರುವುದಾಗಿ ತಿಳಿಸಿದರು.

  ಗಲ್ಫ್ ಪ್ರಾಂತದಲ್ಲಿ ಒಟ್ಟು 10 ಸಾವಿರ ಮಂದಿ ಹೆಚ್ಚುವರಿ ಸೈನಿಕರನ್ನು ನಿಯೋಜಿಸುವ ಯೋಜನೆಯನ್ನು ಪೆಂಟಗಾನ್ ರೂಪಿಸಿತ್ತು. ಆದಾಗ್ಯೂ ನಿಯೋಜನೆಗೊಳ್ಳಲಿರುವ ಸೈನಿಕರ ಸಂಖ್ಯೆಯನ್ನ ಇನ್ನೂ ನಿರ್ಧರಿಸಲಾಗಿಲ್ಲವೆಂದು ಕಾರ್ಯನಿರತ ರಕ್ಷಣಾ ಕಾರ್ಯದರ್ಶಿ ಪ್ಯಾಟ್ರಿಕ್ ಶಾನಾಹಾನ್ ತಿಳಿಸಿದರು. ಅಮೆರಿಕವು ಯುಎಇನಲ್ಲಿ ನಿಯೋಜಿಸಲಿರುವ 1500 ಮಂದಿ ಹೆಚ್ಚುವರಿ ಸೈನಿಕರಲ್ಲಿ, ಸೇನಾ ಎಂಜಿನಿಯರ್‌ಗಳು ಹಾಗೂ ಪ್ಯಾಟ್ರಿಯಟ್ ಕ್ಷಿಪಣಿಗಳನ್ನು ನಿರ್ವಹಿಸುವ 600 ಸಿಬ್ಬಂದಿ ಕೂಡಾ ಒಳಗೊಂಡಿದ್ದಾರೆ.

 ಇರಾನ್‌ನಿಂದ ಮಧ್ಯಪ್ರಾಚ್ಯದ ಶಾಂತಿಗೆ ಬೆದರಿಕೆಯಿದೆಯೆಂದು ಆರೋಪಿಸಿ, ಅಮೆರಿಕವು ಅರೇಬಿಯನ್ ಗಲ್ಫ್ ಪ್ರಾಂತದಲ್ಲಿ ತನ್ನ ಸೈನಿಕರ ಸಂಖ್ಯೆಯನ್ನು ಹೆಚ್ಚಿಸಲು ಆರಂಭಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X