Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪಾಕಿಸ್ತಾನಕ್ಕೆ ಆಘಾತ ನೀಡಿದ...

ಪಾಕಿಸ್ತಾನಕ್ಕೆ ಆಘಾತ ನೀಡಿದ ಅಫ್ಘಾನಿಸ್ತಾನ

ವಿಶ್ವಕಪ್ ಅಭ್ಯಾಸ

ವಾರ್ತಾಭಾರತಿವಾರ್ತಾಭಾರತಿ26 May 2019 12:19 AM IST
share
ಪಾಕಿಸ್ತಾನಕ್ಕೆ ಆಘಾತ ನೀಡಿದ ಅಫ್ಘಾನಿಸ್ತಾನ

ಕಾರ್ಡಿಫ್, ಮೇ 25: ವಿಶ್ವಕಪ್‌ನ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 3 ವಿಕೆಟ್‌ಗಳಿಂದ ಮಣಿಸಿ ಶಾಕ್ ನೀಡಿದ ಅಫ್ಘಾನಿಸ್ತಾನ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವ ಸಂದೇಶ ರವಾನಿಸಿದೆ.

   ಮಧ್ಯಮ ಕ್ರಮಾಂಕದ ಯುವ ದಾಂಡಿಗ ಹಶ್ಮತುಲ್ಲಾ ಶಾಹಿದಿ ಔಟಾಗದೆ 74 ರನ್ ಗಳಿಸಿ ಪಾಕಿಸ್ತಾನ ನೀಡಿದ್ದ 263 ರನ್ ಗುರಿಯನ್ನು ಇನ್ನೂ ಕೆಲವು ಎಸೆತ ಬಾಕಿ ಇರುವಾಗಲೇ ತಲುಪಲು ನೆರವಾಗಿದ್ದಾರೆ. ಐಪಿಎಲ್‌ನಲ್ಲಿ ಮಿಂಚಿದ್ದ ಬೌಲರ್‌ಗಳಾದ ಮುಹಮ್ಮದ್ ನಬಿ(3-46) ಹಾಗೂ ರಶೀದ್ ಖಾನ್(2-27)ಪಾಕಿಸ್ತಾನವನ್ನು 300ರೊಳಗೆ ನಿಯಂತ್ರಿಸಿದರು. ನಬಿ ಶ್ರೇಷ್ಠ ಬೌಲಿಂಗ್‌ನ ಜೊತೆಗೆ 41 ಎಸೆತಗಳಲ್ಲಿ 34 ರನ್ ಗಳಿಸಿದ್ದರು. ಇದರಲ್ಲಿ 3 ಬೌಂಡರಿಗಳಿದ್ದವು. ತಾಳ್ಮೆಯ ಇನಿಂಗ್ಸ್ ಆಡಿದ ಶಾಹಿದಿ 102 ಎಸೆತಗಳಲ್ಲಿ 7 ಬೌಂಡರಿ ಬಾರಿಸಿದ್ದರು. ಆರಂಭಿಕ ಆಟಗಾರ ಹಝರ್ತುಲ್ಲಾ ಝಝೈ 28 ಎಸೆತಗಳಲ್ಲಿ 49 ರನ್ ಗಳಿಸಿ ಗಮನ ಸೆಳೆದರು. ಮುಹಮ್ಮದ್ ಶಹಝಾದ್ 23 ರನ್ ಗಳಿಸಿ ಗಾಯಗೊಂಡು ನಿವೃತ್ತಿಯಾದರು.

ಪಾಕ್ ವೇಗದ ಬೌಲರ್ ಮುಹಮ್ಮದ್ ಆಮಿರ್ 6 ಓವರ್‌ಗಳಲ್ಲಿ 27 ರನ್ ನೀಡಿದರೂ ವಿಕೆಟ್ ಪಡೆಯಲು ವಿಫಲರಾದರು. ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ್ದ ಪಾಕಿಸ್ತಾನ ತಂಡ ಬಾಬರ್ ಆಝಂ(112 ರನ್, 108 ಎಸೆತ)ಶತಕದ ಬೆಂಬಲದಿಂದ 47.5 ಓವರ್‌ಗಳಲ್ಲಿ 262 ರನ್ ಗಳಿಸಿತು. ಶುಐಬ್ ಮಲಿಕ್ 44 ರನ್ ಗಳಿಸಿದರು.

ಗೆಲ್ಲಲು 263 ರನ್ ಗುರಿ ಪಡೆದಿದ್ದ ಅಫ್ಘಾನಿಸ್ತಾನ 49.4 ಓವರ್‌ಗಳಲ್ಲಿ 263 ರನ್ ಗಳಿಸಿ ಗೆಲುವಿನ ನಗೆ ಬೀರಿತು.

ಶ್ರೀಲಂಕಾವನ್ನು ಸೋಲಿಸಿದ ದ.ಆಫ್ರಿಕ: ನಾಯಕ ಎಫ್ ಡು ಪ್ಲೆಸಿಸ್ ಅರ್ಧಶತಕ(88) ಹಾಗೂ ಅಂಡಿಲೆ ಫೆಹ್ಲುಕ್ವಾವೊ ಅವರ ಆಲ್‌ರೌಂಡ್ ಪ್ರಯತ್ನದ ಫಲವಾಗಿ ದಕ್ಷಿಣ ಆಫ್ರಿಕ ತಂಡ ಶುಕ್ರವಾರ ನಡೆದ ವಿಶ್ವಕಪ್‌ನ ಮತ್ತೊಂದು ಅಭ್ಯಾಸ ಪಂದ್ಯದಲ್ಲಿ ಶ್ರೀಲಂಕಾವನ್ನು 87 ರನ್‌ಗಳಿಂದ ಮಣಿಸಿತು.

 ಮೊದಲು ಬ್ಯಾಟಿಂಗ್ ಮಾಡಿದ ದ.ಆಫ್ರಿಕ 7 ವಿಕೆಟ್‌ಗಳ ನಷ್ಟಕ್ಕೆ 338 ರನ್ ಗಳಿಸಿತು. ಗೆಲ್ಲಲು ಕಠಿಣ ಸವಾಲು ಪಡೆದಿದ್ದ ಶ್ರೀಲಂಕಾ 42.3 ಓವರ್‌ಗಳಲ್ಲಿ 251 ರನ್‌ಗೆ ಆಲೌಟಾಯಿತು. ಫೆಹ್ಲುಕ್ವಾವೊ 7 ಓವರ್‌ಗಳಲ್ಲಿ 36 ರನ್‌ಗೆ 4 ವಿಕೆಟ್ ಕಬಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X