Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಜಾಗತಿಕ ವಿಜ್ಞಾನ ಸ್ಪರ್ಧೆಯ ಅಂತಿಮ...

ಜಾಗತಿಕ ವಿಜ್ಞಾನ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಭಾರತದ ಬಾಲಕ ಶಾಮಿಲ್ ಕರೀಂ ನಂ.1

ವಾರ್ತಾಭಾರತಿವಾರ್ತಾಭಾರತಿ26 May 2019 9:34 PM IST
share
ಜಾಗತಿಕ ವಿಜ್ಞಾನ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಭಾರತದ ಬಾಲಕ ಶಾಮಿಲ್ ಕರೀಂ ನಂ.1

ದುಬೈ,ಮೇ 26: ವಿದ್ಯುತ್ ಪೋಲಾಗುವುದನ್ನು ಕನಿಷ್ಠಗೊಳಿಸುವ ಮತ್ತು ಬೀದಿದೀಪಗಳನ್ನು ಇನ್ನಷ್ಟು ಸ್ಮಾರ್ಟ್‌ಗೊಳಿಸುವ ತನ್ನ ಪರಿಕಲ್ಪನೆಗಾಗಿ ದುಬೈನಲ್ಲಿ ನೆಲೆಸಿರುವ ಭಾರತೀಯ ಹದಿಹರೆಯದ ಬಾಲಕ ಶಾಮಿಲ್ ಕರೀಂ ಅವರು ಪ್ರತಿಷ್ಠಿತ ‘ಗೂಗಲ್ ಸೈನ್ಸ್ ಫೇರ್’ ಜಾಗತಿಕ ಸ್ಪರ್ಧೆಯ ಅಂತಿಮ ಸುತ್ತು ತಲುಪಿರುವ 100 ಪ್ರಾದೇಶಿಕ ಸ್ಪರ್ಧಿಗಳ ಪಟ್ಟಿಯಲ್ಲಿ ನಂ.1 ಸ್ಥಾನದಲ್ಲಿದ್ದಾರೆ. ಜಾಗತಿಕ ಮಟ್ಟದಲ್ಲಿ ಅಂತಿಮ 20ರ ಪಟ್ಟಿಯನ್ನು ಶೀಘ್ರವೇ ಪ್ರಕಟಿಸುವ ನಿರೀಕ್ಷೆಯಿದೆ.

ದುಬೈನ ಇಂಡಿಯನ್ ಹೈಸ್ಕೂಲ್‌ನಲ್ಲಿ 11ನೇ ಗ್ರೇಡ್‌ನ ವಿದ್ಯಾರ್ಥಿಯಾಗಿರುವ ಮೂಲತಃ ಚೆನ್ನೈನ ಕರೀಂ (15) ಸಾವಿರಾರು ಪ್ರವೇಶಗಳಿಂದ ಸ್ಪರ್ಧೆಗೆ ಆಯ್ಕೆಯಾಗಿದ್ದರು. ವಿನೂತನ ಪರಿಕಲ್ಪನೆಯ ಅವರ ಯೋಜನೆಯು ರಸ್ತೆಯಲ್ಲಿ ಕಾರು ಅಥವಾ ವ್ಯಕ್ತಿಯು ಹಾದು ಹೋಗುವುದನ್ನು ಗುರುತಿಸುತ್ತದೆ ಮತ್ತು ಮುಂದಿನ ಬೀದಿದೀಪವನ್ನು ಉಜ್ವಲಗೊಳಿಸುತ್ತದೆ ಹಾಗೂ ಹಿಂದಿನ ದೀಪವನ್ನು ಮಂದಗೊಳಿಸುತ್ತದೆ,ತನ್ಮೂಲಕ ವಿದ್ಯುಚ್ಛಕ್ತಿಯ ಉಳಿತಾಯಕ್ಕೆ ನೆರವಾಗುತ್ತದೆ.

ಕರೀಂ ತನ್ನ ಯೋಜನೆಯಲ್ಲಿ ರಸ್ತೆಯಲ್ಲಿ ಹಾದು ಹೋಗುವ ಕಾರುಗಳು ಅಥವಾ ಜನರ ನೆರಳನ್ನು ಗುರುತಿಸಲು ದುಬಾರಿ ಬೆಲೆಯ ಇನ್‌ಫ್ರಾ ರೆಡ್ ಆಧರಿತ ಮೋಷನ್ ಡಿಟೆಕ್ಟರ್‌ಗಳ ಬದಲಿಗೆ ಫೋಟೊ-ರಸಿಸ್ಟರ್‌ಗಳನ್ನು ಬಳಸಿದ್ದಾರೆ. ಹೀಗಾಗಿ ಅವರ ಯೋಜನೆಯು ಶೇ.63ರಷ್ಟು ಅಗ್ಗವಾಗಿದೆ. ಸಾಧನವು ನೆರಳನ್ನು ಗುರುತಿಸಿದ ಬಳಿಕ ರಸ್ತೆ ಬಳಕೆದಾರನಿಗಾಗಿ ಮುಂದಿನ ದೀಪವು ಉಜ್ವಲವಾಗಿ ಬೆಳಗುತ್ತದೆ ಮತ್ತು ಹಿಂದಿನ ದೀಪವು ಮಂದಗೊಳ್ಳುತ್ತದೆ.

 ಸುರಕ್ಷತೆಯ ಕಾರಣಗಳಿಂದಾಗಿ ಕಟ್ಟಡಗಳ ಕಾರಿಡಾರ್‌ ಗಳಲ್ಲಿರುವಂತೆ ಬೀದಿ ದೀಪಗಳನ್ನು ಆಫ್ ಮಾಡಿ ಮತ್ತು ನಂತರ ದಿಢೀರ್‌ ರನೆ ಬೆಳಗುವಂತೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ಅಗತ್ಯವಿದ್ದೆಡೆ ಉಜ್ವಲ ಮತ್ತು ಮಂದಗೊಳ್ಳುವಂತೆ ಅವುಗಳನ್ನು ಹೆಚ್ಚು ಸ್ಮಾರ್ಟ್‌ಗೊಳಿಸುವುದು ಪರಿಹಾರವಾಗಿದೆ ಎಂದು ಕರೀಂ ಹೇಳಿದ್ದನ್ನು ಗಲ್ಪ್ ನ್ಯೂಸ್ ಉಲ್ಲೇಖಿಸಿದೆ.

ವಿದ್ಯುತ್ ಪೋಲಾಗದಂತೆ ಪರಿಹಾರವನ್ನು ಕಂಡುಕೊಳ್ಳಲು ತನ್ನ ತಂದೆಯೇ ತನಗೆ ಸ್ಫೂರ್ತಿಯಾಗಿದ್ದಾರೆ ಎಂದಿರುವ ಕರೀಂ,‘‘ ಅದೊಂದು ದಿನ ತಡರಾತ್ರಿ ನಾವು ಪಾರ್ಕ್‌ನಲ್ಲಿದ್ದಾಗ ಅಲ್ಲಿಯ ಎಲ್ಲ ದೀಪಗಳೂ ಉರಿಯುತ್ತಿದ್ದವು. ಇದನ್ನು ತಪ್ಪಿಸಲು ನಾವೂ ಏನಾದರೂ ಮಾಡಲು ಸಾಧ್ಯವೇ ಎಂದು ತಂದೆ ನನ್ನನ್ನು ಪ್ರಶ್ನಿಸಿದ್ದರು. ಅಂದೇ ನಾನು ಬೀದಿ ದೀಪಗಳನ್ನು ಸ್ಮಾರ್ಟ್‌ಗೊಳಿಸುವ ಯೋಜನೆಯ ನಿರ್ಧಾರ ಮಾಡಿದ್ದೆ ’’ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X