Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗದ್ದಿಗೌಡರ್‌ಗೆ ಸಚಿವ ಸ್ಥಾನ ನೀಡಲು...

ಗದ್ದಿಗೌಡರ್‌ಗೆ ಸಚಿವ ಸ್ಥಾನ ನೀಡಲು ಆಗ್ರಹ: ಬೆಂಬಲಿಗರಿಂದ ಪ್ರಧಾನಿಗೆ ಟ್ವೀಟ್ ಸಂದೇಶ

ವಾರ್ತಾಭಾರತಿವಾರ್ತಾಭಾರತಿ26 May 2019 10:05 PM IST
share
ಗದ್ದಿಗೌಡರ್‌ಗೆ ಸಚಿವ ಸ್ಥಾನ ನೀಡಲು ಆಗ್ರಹ: ಬೆಂಬಲಿಗರಿಂದ ಪ್ರಧಾನಿಗೆ ಟ್ವೀಟ್ ಸಂದೇಶ

ಬಾಗಲಕೋಟ, ಮೇ 26: ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ್ ಅವರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪ್ರಧಾನಿ ನರೇಂದ್ರ ಮೋದಿಯವರಿಗೆ ಟ್ವೀಟ್ ಮೂಲಕ ಸಂದೇಶ ಕಳುಹಿಸಿ ಆಗ್ರಹಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ದೇಶಾದ್ಯಂತ ಭರ್ಜರಿ ಜಯಬೇರಿ ಬಾರಿಸಿದ ಬೆನ್ನಲ್ಲೇ, ಕೇಂದ್ರದಲ್ಲಿ ಮಂತ್ರಿ ಮಂಡಲ ರಚನೆಯ ಕಸರತ್ತು ಜೋರಾಗಿ ನಡೆದಿದೆ. ಕರ್ನಾಟಕ ರಾಜ್ಯ ಈ ಬಾರಿಯ ಚುನಾವಣೆಯಲ್ಲಿ 25 ಜನ ಸಂಸದರನ್ನು ನೀಡಿರುವ ಹಿನ್ನೆಯಲ್ಲಿ ಮೋದಿ ಸರಕಾರ ಕರ್ನಾಟಕಕ್ಕೆ ಹೆಚ್ಚಿನ ಮಂತ್ರಿ ಸ್ಥಾನ ನೀಡಲು ನಿರ್ಧರಿಸಿದೆ ಎನ್ನಲಾಗಿದೆ. ಇದರಿಂದ ಸತತ ನಾಲ್ಕು ಬಾರಿ ಗೆಲುವಿನ ನಗೆ ಬೀರಿರುವ ಗದ್ದಿಗೌಡರ್ ಕೂಡ ರೇಸ್‌ನಲ್ಲಿದ್ದು, ಬಾಗಲಕೋಟೆಗೆ ಕೇಂದ್ರ ಮಂತ್ರಿ ಸ್ಥಾನ ಒಲಿಯುವ ಸಾಧ್ಯತೆ ದಟ್ಟವಾಗಿದೆ.

ಫಲಿತಾಂಶದ ಹಿಂದಿನ ದಿನವೇ ಕೇಂದ್ರದ ಬಿಜೆಪಿ ಕಾರ್ಯಾಲಯ ಗದ್ದಿಗೌಡರ್ ಅವರ ಸಂಪೂರ್ಣ ಮಾಹಿತಿಯನ್ನ ಪಡೆದುಕೊಂಡಿದೆ. ಹೀಗಾಗಿ, ಬಾಗಲಕೋಟೆ ಸಂಸದರಿಗೆ ಮಂತ್ರಿ ಸ್ಥಾನ ಸಿಗುವುದು ಖಚಿತ ಎನ್ನಲಾಗುತ್ತಿದೆ. ಇನ್ನು, ಗೆಲುವಿನ ನಗೆ ಬೀರಿರುವ ಗದ್ದಿಗೌಡರ್ ಇದು ಕಾರ್ಯಕರ್ತರ ಗೆಲುವು, ಜನರ ಆಶಿರ್ವಾದ ಎಂದು ಬಣ್ಣಿಸಿದ್ದಾರೆ. ಕಳೆದ 2004ರ ಲೋಕಸಭೆ ಚುನಾವಣೆಯಿಂದ ಅಖಾಡ ಪ್ರವೇಶಿಸಿದ ಪಿ.ಸಿ.ಗದ್ದಿಗೌಡರ್ ಅಲ್ಲಿಂದ ಇಲ್ಲಿಯವರೆಗೂ ಹಿಂದೆ ತಿರುಗಿ ನೋಡಿದ್ದೇ ಇಲ್ಲ. ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಬಲ ಲಿಂಗಾಯತ ಗಾಣಿಗ ಸಮುದಾಯದ ಗದ್ದಿಗೌಡರ್ ಸತತ ನಾಲ್ಕು ಬಾರಿ ಗೆಲ್ಲುವುದರ ಮೂಲಕ ದಾಖಲೆ ನಿರ್ಮಿಸಿದ್ದಾರೆ.

ಜನತಾ ಪರಿವಾರದಿಂದ ಹೊರ ಬಂದು ಕಳೆದ 2004ರಲ್ಲಿ ಬಿಜೆಪಿಯಿಂದ ಲೋಕಸಭೆಗೆ ಪ್ರವೇಶಿಸಿದ ಗದ್ದಿಗೌಡರ್ ಕಾಂಗ್ರೆಸ್ ಭದ್ರಕೋಟೆಯನ್ನು ಛಿದ್ರಮಾಡಿ ಗೆಲುವಿನ ಬಾವುಟ ಹಾರಿಸಿದವರು. ಈ ಹಿಂದೆ ಜನತಾ ಪಕ್ಷದಲ್ಲಿ ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನಪರಿಷತ್ತಿಗೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಜಿಲ್ಲಾ ಪುನರ್‌ವಿಂಗಡನೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು, ಹೀಗೆ ರಾಜಕೀಯದ ಹಲವು ಮಜಲುಗಳನ್ನು ದಾಟಿ ಸದಾ ಗೆಲುವಿನ ಅಲೆಯಲ್ಲಿ ತೇಲುತ್ತಿರುವ ಗದ್ದಿಗೌಡರ್ ಅವರಿಗೆ ಲಿಂಗಾಯತ ಕೋಟಾದಲ್ಲಿ ಮಂತ್ರಿಗಿರಿ ಒಲಿಯುವ ಸಾಧ್ಯತೆ ಇದೆ.

ಬಾಗಲಕೋಟೆ ಕ್ಷೇತ್ರದಲ್ಲಿ ಗಾಣಿಗ ಸಮುದಾಯ ನಿರ್ಣಾಯಕವಾಗಿರುವುದರಿಂದ ಈ ಬಾರಿ ಲಿಂಗಾಯತ ಕೋಟಾದ ಅಡಿಯಲ್ಲಿ ಮಂತ್ರಿಗಿರಿ ಭಾಗ್ಯ ಒಲಿಯುತ್ತದೆಯೋ ಎಂದು ಕಾದು ನೋಡಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X