Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಮಾರಾಟ ಸಂಸ್ಥೆಯ ವಿರುದ್ಧ ರಿಕ್ಷಾ...

ಉಡುಪಿ: ಮಾರಾಟ ಸಂಸ್ಥೆಯ ವಿರುದ್ಧ ರಿಕ್ಷಾ ಚಾಲಕ-ಮಾಲಕರ ಧರಣಿ

ವಾರ್ತಾಭಾರತಿವಾರ್ತಾಭಾರತಿ27 May 2019 6:25 PM IST
share
ಉಡುಪಿ: ಮಾರಾಟ ಸಂಸ್ಥೆಯ ವಿರುದ್ಧ ರಿಕ್ಷಾ ಚಾಲಕ-ಮಾಲಕರ ಧರಣಿ

ಉಡುಪಿ, ಮೇ 27: ಖರೀದಿಸಿದ ಒಂದು ವರ್ಷದೊಳಗೆ ಇಂಜಿನ್ ಸಮಸ್ಯೆ ಕಂಡು ಬಂದರೂ ಬದಲಿ ರಿಕ್ಷಾವನ್ನು ನೀಡದ ಮಾರಾಟ ಸಂಸ್ಥೆಯ ಕ್ರಮವನ್ನು ವಿರೋಧಿಸಿ ಕಲ್ಯಾಣಪುರ ಸಂತೆಕಟ್ಟೆ ಆಟೋ ರಿಕ್ಷಾ ಮಾಲಕರ ಮತ್ತು ಚಾಲಕ ಸಂಘದ ನೇತೃತ್ವದಲ್ಲಿ ರಿಕ್ಷಾ ಚಾಲಕರು ಸೋಮವಾರ ಉಡುಪಿ ಕರಾವಳಿ ಬೈಪಾಸ್‌ನಲ್ಲಿರುವ ಪವನ್ ಮೋಟಾರ್ಸ್ ಎದುರು ಧರಣಿ ನಡೆಸಿದರು.

ಅಬ್ದುಲ್ ಅಝೀಝ್ ಎಂಬವರು ಸಂಸ್ಥೆಯಿಂದ 2018ರ ಜು.4ರಂದು ಬಜಾಜ್ ಮ್ಯಾಕ್ಸಿಮಾ ಆಟೋರಿಕ್ಷಾವನ್ನು ಖರೀದಿಸಿದ್ದು, ತದನಂತರ ರಿಕ್ಷಾದಲ್ಲಿ ತಾಂತ್ರಿಕ ತೊಂದರೆ ಕಂಡುಬಂದಿತ್ತು. ದುರಸ್ತಿಯ ಸಂದರ್ಭ ಶೋರೂಂನವರು ಮೂರು ಬಾರಿ ರಿಕ್ಷಾದ ಇಂಜಿನ್ ಡೌನ್ ಮಾಡಿದ್ದರು. ಹೀಗೆ 30ಕ್ಕೂ ಅಧಿಕ ಬಾರಿ ರಿಕ್ಷಾ ರಿಪೇರಿಗೆ ಇಡಲಾಗಿತ್ತು. ಒಂದು ವರ್ಷ ವಾರಂಟಿ ಹೊಂದಿರುವ ವಾಹನದಲ್ಲಿ ಒಂದೇ ತಿಂಗಳಲ್ಲಿ ಇಂಜಿನ್ ಸಮಸ್ಯೆ ಕಂಡುಬಂದಿದೆ ಎಂದು ಸಂಘದ ಅಧ್ಯಕ್ಷ ಪ್ರಕಾಶ್ ಶೇರಿಗಾರ್ ಆರೋಪಿಸಿದರು.

ಈ ಸಮಸ್ಯೆ ವಾರಂಟಿ ಅವಧಿಯಲ್ಲಿ ಕಂಡುಬಂದರೂ ಕಂಪೆನಿಯಿಂದ ಯಾವುದೇ ಸ್ಪಂದನೆ ದೊರೆತಿಲ್ಲ. ಬದಲಿ ರಿಕ್ಷಾವನ್ನು ನೀಡಿಲ್ಲ. ದುರಸ್ತಿಯಲ್ಲಿ ರಿಯಾಯಿತಿಯನ್ನು ಕೂಡ ಒದಗಿಸಲಿಲ್ಲ. ರಿಕ್ಷಾದ ಸಾಲ ಮರುಪಾವತಿಗೆ ಬಾಕಿ ಇದ್ದು, ಸಾಲದ ಮೇಲಿನ ಬಡ್ಡಿ ಹೆಚ್ಚುತ್ತಿದೆ. ಆದುದರಿಂದ ಚಾಲಕ ಅಬ್ದುಲ್ ಅಝೀಝ್ ಅವರಿಗೆ ಬದಲಿಗೆ ರಿಕ್ಷಾ ನೀಡುವಂತೆ ಗೌರವಾಧ್ಯಕ್ಷ ಶೇಖರ್ ಪೂಜಾರಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಅಬ್ದುಲ್ ಅಝೀಝ್, ಕೋಶಾಧಿಕಾರಿ ದಿನೇಶ್ ಕವನ, ಜೊತೆ ಕಾರ್ಯದರ್ಶಿ ಕಿರಣ್, ಮಾಜಿ ಅಧ್ಯಕ್ಷ ರಾದ ಜಯರಾಂ ನೇಜಾರು, ರತ್ನಾಕರ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.

ಅಬ್ದುಲ್ ಅಝೀಝ್ ಖರೀದಿಸಿದ ರಿಕ್ಷಾ ಎಂಟು ತಿಂಗಳಲ್ಲಿ 41460 ಕಿ.ಮೀ. ಓಡಿದೆ. ನಮ್ಮ ನಿಯಮ ಪ್ರಕಾರ ಒಂದು ವರ್ಷ ಅವಧಿ ಅಥವಾ 40 ಸಾವಿರ ಕಿ.ಮೀ. ಓಡಿದ ವಾಹನಗಳಿಗೆ ವಾರಂಟಿ ಕೊಡಲು ಅವಕಾಶ ಇಲ್ಲ. ಆದರೂ ಇವರ ವಾಹನವನ್ನು ದುರಸ್ತಿ ಮಾಡಿಕೊಟ್ಟಿದ್ದೇವೆ. ವಾಹನದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಪವನ್ ಮೊಟಾರ್ಸ್ ಮಾಲಕ ಸುಭಾಷ್ ಚಂದ್ರ ಹೆಗ್ಡೆ ಸ್ಪಷ್ಟನೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X