Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಂಭೀರ್ ಹೇಳಿಕೆ ಬಿಜೆಪಿಯನ್ನು ಟೀಕಿಸುವ...

ಗಂಭೀರ್ ಹೇಳಿಕೆ ಬಿಜೆಪಿಯನ್ನು ಟೀಕಿಸುವ ರೀತಿಯಲ್ಲಿದೆ: ಪಕ್ಷದ ಮುಖಂಡರಿಂದ ಟೀಕೆ

ವಾರ್ತಾಭಾರತಿವಾರ್ತಾಭಾರತಿ27 May 2019 8:13 PM IST
share
ಗಂಭೀರ್ ಹೇಳಿಕೆ ಬಿಜೆಪಿಯನ್ನು ಟೀಕಿಸುವ ರೀತಿಯಲ್ಲಿದೆ: ಪಕ್ಷದ ಮುಖಂಡರಿಂದ ಟೀಕೆ

ಹೊಸದಿಲ್ಲಿ, ಮೇ 27: ಗುರುಗ್ರಾಮದಲ್ಲಿ ಮುಸ್ಲಿಮ್ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ದುರದೃಷ್ಟಕರ ಎಂದಿರುವ ಬಿಜೆಪಿ ಸಂಸದ ಗೌತಮ್ ಗಂಭೀರ್, ವಿಷಯದ ಬಗ್ಗೆ ತಕ್ಷಣ ಗಮನ ಹರಿಸಿ ತಪ್ಪಿತಸ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ಮಧ್ಯೆ, ನೂತನ ಬಿಜೆಪಿ ಸಂಸದ ಗಂಭೀರ್ ಅವರ ಹೇಳಿಕೆಯನ್ನು ದಿಲ್ಲಿ ಬಿಜೆಪಿಯ ಕೆಲವು ಮುಖಂಡರು ಖಂಡಿಸಿದ್ದು ಇದು ಪರೋಕ್ಷವಾಗಿ ಪಕ್ಷದತ್ತ ಬೆರಳು ತೋರಿಸಿದಂತಾಗುತ್ತದೆ ಎಂಬುದನ್ನು ಗಂಭೀರ್ ಅರಿತುಕೊಳ್ಳಬೇಕು ಎಂದಿದ್ದಾರೆ.

ಮೇ 25ರಂದು ಗುರುಗ್ರಾಮದಲ್ಲಿ ತನ್ನ ಮೇಲೆ ಗುಂಪೊಂದು ಹಲ್ಲೆ ನಡೆಸಿ, ತಾನು ಧರಿಸಿದ್ದ ಟೋಪಿಯನ್ನು ತೆಗೆಯುವಂತೆ ಬೆದರಿಸಿ ‘ಜೈ ಶ್ರೀರಾಮ್’ ಎಂದು ಹೇಳುವಂತೆ ಬಲವಂತಪಡಿಸಿದೆ ಎಂದು 25 ವರ್ಷದ ಮುಸ್ಲಿಂ ವ್ಯಕ್ತಿಯೊಬ್ಬರು ಆರೋಪಿಸಿದ್ದರು. ಈ ಬಗ್ಗೆ ಟ್ವೀಟ್ ಮಾಡಿರುವ ಗೌತಮ್ ಗಂಭೀರ್, ಗುರುಗ್ರಾಮದಲ್ಲಿ ಮುಸ್ಲಿಮ್ ವ್ಯಕ್ತಿಯ ಟೋಪಿ ತೆಗೆಯುವಂತೆ ಬೆದರಿಸಿ ಜೈಶ್ರೀರಾಮ್ ಎಂದು ಹೇಳುವಂತೆ ಬಲವಂತಪಡಿಸಿರುವುದು ದುರದೃಷ್ಟಕರ. ಗುರುಗ್ರಾಮ ಘಟನೆಗೆ ಸೀಮಿತವಾಗಿ ನಾನು ಈ ಹೇಳಿಕೆ ನೀಡುತ್ತಿಲ್ಲ. ನಮ್ಮದು ಜಾತ್ಯಾತೀತ ದೇಶವಾಗಿದ್ದು ಸಹಿಷ್ಣುತೆ ಮತ್ತು ಎಲ್ಲರನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿ ನಮ್ಮ ಧ್ಯೇಯವಾಗಿರಬೇಕು. ಪ್ರಧಾನಿ ಮೋದಿ ಹೇಳಿರುವ ‘ಸಬ್‌ಕಾ ಸಾಥ್, ಸಬ್‌ಕಾ ವಿಕಾಸ್’ ಧ್ಯೇಯವಾಕ್ಯದ ತಿರುಳು ಕೂಡಾ ಇದೇ ಆಗಿದೆ. ಜಾತಿ ಅಥವಾ ಧರ್ಮದ ಆಧಾರದಲ್ಲಿ ದಬ್ಬಾಳಿಕೆ ನಡೆಸುವುದು ಖಂಡನೀಯ ಮತ್ತು ವಿಷಾದನೀಯ ಎಂದು ಹೇಳಿದ್ದಾರೆ.

ಈ ಮಧ್ಯೆ, ಗಂಭೀರ್ ಅವರ ಹೇಳಿಕೆಯ ಬಗ್ಗೆ ದಿಲ್ಲಿ ಬಿಜೆಪಿಯ ಕೆಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹೇಳಿಕೆ ಬಿಜೆಪಿಯನ್ನು ಟೀಕಿಸುವ ರೀತಿಯಲ್ಲಿದೆ. ತಾನೀಗ ಕ್ರಿಕೆಟರ್ ಅಲ್ಲ ಎಂಬುದನ್ನು ಗಂಭೀರ್ ಮರೆಯಬಾರದು ಮತ್ತು ತಾನು ಆಡುವ ಮಾತು ಅಥವಾ ಕ್ರಿಯೆಯನ್ನು ರಾಜಕೀಯ ನೆಲೆಯಲ್ಲಿ ಗಮನಿಸುತ್ತಾರೆ ಎಂಬುದನ್ನು ಅವರು ಅರಿತುಕೊಳ್ಳಬೇಕು. ಇಂತಹ ಘಟನೆಗಳನ್ನು ಯಾರೂ ಒಪ್ಪುವುದಿಲ್ಲ. ಆದರೆ ಹರ್ಯಾಣದಲ್ಲಿ ನಡೆದ ಘಟನೆಗೆ ಪ್ರತಿಕ್ರಿಯೆ ನೀಡುವುದರಿಂದ ಇತರ ಪಕ್ಷಗಳಿಗೆ ಬಿಜೆಪಿಯ ವಿರುದ್ಧ ಟೀಕಿಸಲು ಒಂದು ಅಸ್ತ್ರ ದೊರೆತಂತೆ ಆಗುತ್ತದೆ ಎಂದು ದಿಲ್ಲಿ ಬಿಜೆಪಿಯ ಮುಖಂಡರು  ಪ್ರತಿಕ್ರಿಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X