Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಪಾಯದ ಅಂಚಿನಲ್ಲಿ ಮಡಿವಾಳ ಕೆರೆಯ...

ಅಪಾಯದ ಅಂಚಿನಲ್ಲಿ ಮಡಿವಾಳ ಕೆರೆಯ ಜಲಚರ-ಪಕ್ಷಿ ಸಂಕುಲ

ವಾರ್ತಾಭಾರತಿವಾರ್ತಾಭಾರತಿ27 May 2019 9:51 PM IST
share

ಬೆಂಗಳೂರು, ಮೇ 27: ಮೂನ್ನೂರು ವರ್ಷಗಳ ಇತಿಹಾಸವುಳ್ಳ ಮಡಿವಾಳ ಕೆರೆಯಲ್ಲಿ ವಿವಿಧ ಜೀವವೈವಿಧ್ಯ ನೆಲೆಯೂರಿದ್ದು, ಕೆರೆಯಲ್ಲಿನ ತ್ಯಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಾಣ ಮತ್ತು ಹೂಳೆತ್ತುವ ಕೆಲಸವೇ ಆಗದೆ, ಕೆರೆಯು ಸಂಪೂರ್ಣವಾಗಿ ಮಲಿನಗೊಂಡು ಜಲಚರಗಳು ಹಾಗೂ ಪಕ್ಷಿ ಸಂಕುಲದ ವಿನಾಶಕ್ಕೆ ಕಾರಣವಾಗುತ್ತಿದೆ.

ಕಾಂಕ್ರಿಟ್ ಕಾಡಿನ ಮಧ್ಯೆ ಇರುವ ಮಡಿವಾಳ ಕೆರೆಯಲ್ಲಿ ಸಸ್ಯ, ಪ್ರಾಣಿಸಂಕುಲ ಮೈದಳೆವಂತೆ ಮಾಡಲು, ವಾಯುಮಾಲಿನ್ಯ ತಗ್ಗಿಸಲು ಮತ್ತು ಅಂತರ್ಜಲ ವೃದ್ಧಿಸುವ ಉದ್ದೇಶದಿಂದ ಕರ್ನಾಟಕ ಸರೋವರ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರವು (ಕೆಎಲ್‌ಸಿಡಿಎ) ಕೆರೆ ಅಂಗಳದಲ್ಲಿ 24.72 ಕೋಟಿ ರೂ. ವೆಚ್ಚದಲ್ಲಿ ಜೀವವೈವಿಧ್ಯ ಉದ್ಯಾನ ನಿರ್ಮಾಣ ಮತ್ತು ಪುನರುಜ್ಜೀವನ ಕಾಮಗಾರಿ ಕೈಗೊಂಡಿತು. ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು 2016ರ ಸೆ.12ರಂದು ಇದಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು.

ಜ್ಞಾನ ಆಯೋಗದ ಸಲಹೆಯಂತೆ ಜೀವವೈವಿಧ್ಯ ಉದ್ಯಾನ, ಜಲಾನಯನ ಪ್ರದೇಶ ವಿಸ್ತರಣೆ, 5 ಕಿ.ಮೀ. ಉದ್ದದ ವಿಹಾರ ಪಥ, ಪಕ್ಷಿಲೋಕ, ಆರ್ಕಿಡ್ ಉದ್ಯಾನ, ಬಯಲು ರಂಗಮಂದಿರ, ಪಾಲಿಹೌಸ್‌ಗಳನ್ನು ನಿರ್ಮಿಸಲಾಗಿದೆ. ಸ್ಥಳೀಯ ಪ್ರಭೇದದ ಮರಗಳು ಮತ್ತು ಜವುಗು ಪ್ರದೇಶದ ಸಸ್ಯಗಳನ್ನು ಬೆಳೆಸಲಾಗಿದೆ. ಆದರೆ, ಜೀವವೈವಿಧ್ಯ ಉದ್ಯಾನ ನಿರ್ಮಾಣದೊಂದಿಗೆ ಕೈಗೊಳ್ಳಬೇಕಾದ ಹಲವು ಅಭಿವೃದ್ಧಿ ಕೆಲಸಗಳು ಆಗಿಲ್ಲ. ಹೀಗಾಗಿ 272 ಎಕರೆ ವಿಸ್ತೀರ್ಣ ಹೊಂದಿರುವ ಕೆರೆಯು ಪರಿಪೂರ್ಣ ಅಭಿವೃದ್ಧಿ ಕಂಡಿಲ್ಲ.

ಕೆಎಲ್‌ಸಿಡಿಎ ನಿಷ್ಕ್ರಿಯಗೊಳಿಸಿದ ಬಳಿಕ ಮಡಿವಾಳ ಕೆರೆ ಅಭಿವೃದ್ಧಿಗೆ ಎಳ್ಳುನೀರು ಬಿಟ್ಟಂತಾಗಿದೆ. ಹೂಳು ತೆಗೆಸದ ಪರಿಣಾಮ ಕೆರೆ ಸುತ್ತಲೂ ಕಳೆ ಸಸ್ಯಗಳು ಬೆಳೆದು ನಿಂತಿವೆ. ಎರಡು ತಿಂಗಳ ಹಿಂದೆ ಕೆರೆಯ ಬಹುತೇಕ ಪ್ರದೇಶವು ನೀರಿಲ್ಲದೆ ಬತ್ತಿ ಹೋಗಿತ್ತು. ಹೀಗಾಗಿ ದೋಣಿ ವಿಹಾರವನ್ನು ಸ್ಥಗಿತಗೊಳಿಸಲಾಗಿತ್ತು. ಇತ್ತೀಚೆಗೆ ಸುರಿದ ಮಳೆಯಿಂದ ಕೆರೆಗೆ ಮತ್ತೆ ನೀರು ಬಂದಿದ್ದು, ದೋಣಿ ವಿಹಾರವನ್ನು ಆರಂಭಿಸಲಾಗಿದೆ. ವರ್ಷಗಳ ಹಿಂದೆ ನಿರ್ಮಿಸಿರುವ ಶೌಚಾಲಯಕ್ಕೆ ವಿದ್ಯುತ್ ಮತ್ತು ನೀರಿನ ಸಂಪರ್ಕ ಕಲ್ಪಿಸಿಲ್ಲ. ಹಾಗಾಗಿ ನೂತನ ಶೌಚಾಲಯವು ಬಳಕೆಗೆ ಮುಕ್ತವಾಗಿಲ್ಲ.

ಜಲಚರಗಳ ಮಾರಣಹೋಮ: ಕೆರೆಯ ಮಡಿಲಿನಲ್ಲಿ ಬಣ್ಣ ಬಣ್ಣದ ಹಕ್ಕಿಗಳು, ಜಲಚರಗಳಿವೆ. ಬಾನಾಡಿಗಳನ್ನು ನೋಡಲು ನಿತ್ಯ ನೂರಾರು ಮಂದಿ ಬರುತ್ತಾರೆ. ಆದರೆ, ಕೆರೆಯಲ್ಲಿ ಸೇರುವ ಮಲಿನ ನೀರಿನ ಪ್ರಮಾಣ ಹೆಚ್ಚುತ್ತಲೇ ಇದೆ. ಕೆರೆ ಮಲಿನಗೊಂಡರೆ ವಲಸೆ ಪಕ್ಷಿಗಳು ಬರುವುದಿಲ್ಲ. ಕೆರೆಯ ನೀರು ವಿಷವಾಗಿ ಪರಿವರ್ತನೆಗೊಳ್ಳುತ್ತಿರುವುದರಿಂದ ಆಗಾಗ್ಗೆ ಮೀನು, ಶಂಖದ ಹುಳಗಳ ಮಾರಣಹೋಮ ನಡೆಯುತ್ತಿದೆ. ಆದರೂ ಕೆರೆಗೆ ಕೊಳಚೆ ನೀರು ಸೇರುವುದನ್ನು ತಡೆಯುವ ಪ್ರಯತ್ನ ಈವರೆಗೆ ನಡೆದಿಲ್ಲ.

ಬಿಟಿಎಂ ಲೇಔಟ್, ಬಿಳೇಕಹಳ್ಳಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಿಂದ ಹರಿದು ಬರುವ ಒಳಚರಂಡಿ ನೀರು ನೇರವಾಗಿ ಕೆರೆಯ ಒಡಲು ಸೇರುತ್ತಿದೆ. ಸಂಸ್ಕರಣಾ ಘಟಕ ನಿರ್ಮಾಣ ಕಾಮಗಾರಿಯನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸುವಂತೆ ಹಲವು ಬಾರಿ ಜಲಮಂಡಳಿಗೆ ಪತ್ರ ಬರೆದಿದ್ದೇವೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X