Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶ: 8 ಕ್ಷೇತ್ರಗಳಲ್ಲಿ...

ಉತ್ತರ ಪ್ರದೇಶ: 8 ಕ್ಷೇತ್ರಗಳಲ್ಲಿ ಬಿಜೆಪಿಯ ವಿಜಯದ ಅಂತರ ಕಾಂಗ್ರೆಸ್ ಅಭ್ಯರ್ಥಿ ಪಡೆದ ಮತಗಳಿಗಿಂತ ಕಡಿಮೆ

ವಾರ್ತಾಭಾರತಿವಾರ್ತಾಭಾರತಿ28 May 2019 9:44 AM IST
share
ಉತ್ತರ ಪ್ರದೇಶ: 8 ಕ್ಷೇತ್ರಗಳಲ್ಲಿ ಬಿಜೆಪಿಯ ವಿಜಯದ ಅಂತರ ಕಾಂಗ್ರೆಸ್ ಅಭ್ಯರ್ಥಿ ಪಡೆದ ಮತಗಳಿಗಿಂತ ಕಡಿಮೆ

ಲಕ್ನೋ, ಮೇ 28: ಹದಿನೇಳನೇ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು 60 ಕಡೆ ಠೇವಣಿ ಕಳೆದುಕೊಂಡಿದ್ದು, ಕೇವಲ ಮೂರು ಕ್ಷೇತ್ರಗಳಲ್ಲಷ್ಟೇ ಎರಡನೇ ಸ್ಥಾನ ಪಡೆಯಲು ಸಾಧ್ಯವಾಗಿದೆ. ಕಾಂಗ್ರೆಸ್ ಪಕ್ಷ ಗೆಲ್ಲುತ್ತದೆ ಅಥವಾ ಬಿಜೆಪಿಗೆ ಮುಳುವಾಗುತ್ತದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನೀಡಿದ ಹೇಳಿಕೆ ಸುಳ್ಳಾಗಿದೆ. ವಾಸ್ತವವಾಗಿ ಕಾಂಗ್ರೆಸ್ ಪಕ್ಷ ಇಲ್ಲಿ ಎಸ್ಪಿ-ಬಿಎಸ್ಪಿ-ಆರ್‌ಎಲ್‌ಡಿ ಮೈತ್ರಿಕೂಟಕ್ಕೆ ಹಾನಿ ಮಾಡಿದ್ದು, ಕನಿಷ್ಠ ಹತ್ತು ಕ್ಷೇತ್ರಗಳಲ್ಲಿ ಈ ಕೂಟದ ಗೆಲುವಿನ ಅವಕಾಶವನ್ನು ಕಸಿದುಕೊಂಡಿದೆ.

ಬಡೌನ್, ಬಂಡಾ, ಬಾರಾಬಂಕಿ, ಬಸ್ತಿ, ದೌರಾಹ್ರ, ಮೀರತ್, ಸಂತ ಕಬೀರ ನಗರ ಮತ್ತು ಸುಲ್ತಾನ್‌ಪುರ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿನ ಅಂತರ ಕಾಂಗ್ರೆಸ್ ಅಭ್ಯರ್ಥಿಗಳು ಪಡೆದ ಮತಕ್ಕಿಂತ ಕಡಿಮೆ ಎನ್ನುವುದು ಫಲಿತಾಂಶಗಳ ವಿವರವಾದ ವಿಶ್ಲೇಷಣೆಯಿಂದ ತಿಳಿದುಬಂದಿದೆ.

ಇದಲ್ಲದೇ ಕಾಂಗ್ರೆಸ್ ಮಿತ್ರ ಪಕ್ಷವಾದ ಜನ್ ಅಧಿಕಾರ ಪಕ್ಷ ಮಚ್ಲಿಶಹರ್ ಕ್ಷೇತ್ರದಿಂದ ಸ್ಪರ್ಧಿಸಿದ್ದು, ಇಲ್ಲಿ ಕೂಡಾ ಈ ಪಕ್ಷದ ಅಭ್ಯರ್ಥಿಗೆ ಬಿಜೆಪಿ ಅಭ್ಯರ್ಥಿಯ ಗೆಲುವಿನ ಅಂತರಕ್ಕಿಂತ ಅಧಿಕ ಮತ ಸಿಕ್ಕಿದೆ. ಸೀತಾಪುರದಲ್ಲಿ ಬಿಜೆಪಿ ಗೆಲುವಿನ ಅಂತರ 1 ಲಕ್ಷ ಆಗಿದ್ದು, ಕಾಂಗ್ರೆಸ್ ಅಭ್ಯರ್ಥಿ 96,018 ಮತಗಳನ್ನು ಪಡೆದಿದ್ದು, ಇದು ಮೈತ್ರಿಕೂಟದ ಅಭ್ಯರ್ಥಿಯ ಸೋಲಿಗೆ ಕಾರಣವಾಗಿದೆ.

ಎಸ್ಪಿ-ಬಿಎಸ್ಪಿ ಕೂಟದಿಂದ ಹೊರಬಿದ್ದ ಬಳಿಕ, ಕಾಂಗ್ರೆಸ್ ಪಕ್ಷ ಸಾಂಪ್ರದಾಯಿಕವಾಗಿ ಬಿಜೆಪಿಗೆ ಬೆಂಬಲ ನೀಡುವ ಮೇಲ್ವರ್ಗದ ಮತಗಳನ್ನು ವಿಭಜಿಸಲಿದೆ ಎಂದು ವಿಶ್ಲೇಷಕರು ವಾದಿಸಿದ್ದರು. ಆದರೆ ಅದು ನಿಜವಾಗಿಲ್ಲ. ಕಾಂಗ್ರೆಸ್ ಪಕ್ಷ ಅಮೇಥಿ, ಕಾನ್ಪುರ ಮತ್ತು ಫತೇಪುರ ಸಿಕ್ರಿ ಹೀಗೆ ಕೇವಲ ಮೂರು ಕ್ಷೇತ್ರಗಳಲ್ಲಿ ಮಾತ್ರ ದ್ವಿತೀಯ ಸ್ಥಾನಿಯಾಗಿದೆ. ಇಲ್ಲಿ ಕ್ರಮವಾಗಿ ರಾಹುಲ್‌ ಗಾಂಧಿ, ಶ್ರೀಪ್ರಕಾಶ್ ಜೈಸ್ವಾಲ್ ಹಾಗೂ ರಾಜ್ ಬಬ್ಬರ್ ಬಿಜೆಪಿ ವಿರುದ್ಧ ಪರಾಭವಗೊಂಡಿದ್ದರು.

ಈ ಬಾರಿ 80 ಕ್ಷೇತ್ರಗಳ ಪೈಕಿ ಬಿಜೆಪಿ 64 ಸ್ಥಾನಗಳನ್ನು ಗೆದ್ದಿದೆ. ಹಿಂದಿನ ಚುನಾವಣೆಯಲ್ಲಿ ಶೇಕಡ 42.3 ಮತಗಳನ್ನು ಪಡೆದಿದ್ದ ಬಿಜೆಪಿಯ ಮತ ಗಳಿಕೆ ಈ ಬಾರಿ ಶೇಕಡ 49.6ಕ್ಕೆ ಹೆಚ್ಚಿದೆ. ಸಮಾಜವಾದಿ ಪಕ್ಷದ ಮತ ಪ್ರಮಾಣ ಶೇಕಡ 22.2ರಿಂದ ಶೇಕಡ 18ಕ್ಕೆ ಕುಸಿದ್ದು, ಬಿಎಸ್ಪಿ ಮತಗಳಿಕೆ ಶೇಕಡ 19.6ರಿಂದ 19.3ಕ್ಕೆ ಕುಸಿದಿದೆ.

ಎಸ್ಪಿ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರ ಗೆಲುವಿನ ಅಂತರ ಮೈನ್‌ಪುರಿಯಲ್ಲಿ ಗಣನೀಯವಾಗಿ ಕಡಿಮೆಯಾಗಿದ್ದು, ಕಳೆದ ಉಪಚುನಾವಣೆಯಲ್ಲಿ ಗೆದ್ದ ಕೈರಾನಾ, ಗೋರಖ್‌ಪುರ ಮತ್ತು ಫೂಲ್‌ಪುರ ಕ್ಷೇತ್ರಗಳನ್ನು ಎಸ್ಪಿ ಕಳೆದುಕೊಂಡಿದೆ. ಆರ್‌ಎಲ್‌ಡಿ ಸ್ಪರ್ಧಿಸಿದ್ದ ಎಲ್ಲ ಕ್ಷೇತ್ರಗಳನ್ನೂ ಸೋತಿದ್ದು, ಪಕ್ಷದ ಮುಖ್ಯಸ್ಥ ಅಜಿತ್ ಸಿಂಗ್ ಹಾಗೂ ಪುತ್ರ ಜಯಂತ್ ಚೌಧರಿ ಕೂಡಾ ಸೋಲಿನ ರುಚಿ ಕಂಡಿದ್ದಾರೆ. ಪಕ್ಷದ ಸಾಂಪ್ರದಾಯಿಕ ಮತಬ್ಯಾಂಕ್ ಎನಿಸಿದ ಜಾಟ್ ಸಮುದಾಯ ಕೂಡಾ ಈ ಬಾರಿ ಬಿಜೆಪಿ ಪರ ಒಲವು ತೋರಿರುವುದು ಇದರಿಂದ ಸ್ಪಷ್ಟವಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X