Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2019ರ ಪ್ರತಿಷ್ಠಿತ ವಾನ್ ಪ್ರಶಸ್ತಿಗಳಿಗೆ...

2019ರ ಪ್ರತಿಷ್ಠಿತ ವಾನ್ ಪ್ರಶಸ್ತಿಗಳಿಗೆ ಪ್ರವೇಶ ಪಡೆದ ಏಕತಾ ಪ್ರತಿಮೆ

ವಾರ್ತಾಭಾರತಿವಾರ್ತಾಭಾರತಿ28 May 2019 10:13 PM IST
share
2019ರ ಪ್ರತಿಷ್ಠಿತ ವಾನ್ ಪ್ರಶಸ್ತಿಗಳಿಗೆ ಪ್ರವೇಶ ಪಡೆದ ಏಕತಾ ಪ್ರತಿಮೆ

ಮುಂಬೈ,ಮೇ 28: ಗುಜರಾತ್ ನಲ್ಲಿರುವ ಏಕತಾ ಪ್ರತಿಮೆಯು ಪ್ರತಿಷ್ಠಿತ 2109ರ ವರ್ಲ್ಡ್ ‘ಆರ್ಕಿಟೆಕ್ಚರ್ ನ್ಯೂಸ್(ವಾನ್)’ ಪ್ರಶಸ್ತಿಗಳಿಗೆ ಪ್ರವೇಶ ಪಡೆದಿದೆ.

ಹಾಲಿ ಮತ್ತ್ತು ಭವಿಷ್ಯದ ಯೋಜನೆಗಳಲ್ಲಿ ಅತ್ಯುತ್ತಮ ಅಂತರರಾಷ್ಟ್ರೀಯ ವಿನ್ಯಾಸವನ್ನು ವಾನ್ ಪ್ರಶಸ್ತಿಗಳು ಬಿಂಬಿಸುತ್ತವೆ. ಪ್ರಶಸ್ತಿ ಪ್ರದಾನ ಸಮಾರಂಭವು ಜುಲೈನಲ್ಲಿ ನಡೆಯುವ ಸಾಧ್ಯತೆಯಿದೆ.

ಇದು ಭಾರತದ ಇಂಜಿನಿಯರಿಂಗ್ ಕೌಶಲ್ಯ ಮತ್ತು ಯೋಜನೆ ನಿರ್ವಹಣೆಗೆ ಲಭಿಸಿರುವ ಅತ್ಯಂತ ಮಹತ್ವದ ಮತ್ತು ಅರ್ಹ ಮಾನ್ಯತೆಯಾಗಿದೆ ಎಂದು ವಿಶ್ವದ ಅತ್ಯಂತ ಎತ್ತರದ ಏಕತಾ ಪ್ರತಿಮೆಯನ್ನು ನಿರ್ಮಿಸಿರುವ ಲಾರ್ಸನ್ ಆ್ಯಂಡ್ ಟುಬ್ರೋದ ಸಿಇಒ ಹಾಗೂ ಎಂಡಿ ಎಸ್.ಎನ್.ಸುಬ್ರಹ್ಮಣ್ಯನ್ ಅವರು ಹರ್ಷ ವ್ಯಕ್ತಪಡಿಸಿದರು.

ದಾಖಲೆಯ 33 ತಿಂಗಳ ಅವಧಿಯಲ್ಲಿ ನಿರ್ಮಾಣಗೊಂಡಿರುವ 182 ಮೀ.ಎತ್ತರದ ಏಕತಾ ಪ್ರತಿಮೆಯು ದೇಶದ ಸ್ವಾತಂತ್ಯ್ರ ಹೋರಾಟದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಕೊಡುಗೆ ಮತ್ತು ದೇಶದ ಏಕೀಕರಣದಲ್ಲಿ ಅವರ ಪಾತ್ರಕ್ಕಾಗಿ ತಲೆಯೆತ್ತಿರುವ ಭವ್ಯ ಸ್ಮಾರಕವಾಗಿದೆ.

ಪ್ರತಿಮೆಯ ನಿರ್ಮಾಣಕ್ಕಾಗಿ ಒಟ್ಟು 25,000 ಟನ್ ಉಕ್ಕು,210,000 ಟನ್ ಕಾಂಕ್ರೀಟ್ ಮತ್ತು 1,700 ಟನ್ ಕಂಚಿನ ಲೇಪನಗಳನ್ನು ಬಳಸಲಾಗಿದ್ದು,4,500ಕ್ಕೂ ಅಧಿಕ ವಿನ್ಯಾಸಕಾರರು,ವಾಸ್ತುಶಿಲ್ಪಿಗಳು,ಜಾಗತಿಕ ಸಲಹೆಕಾರರು,ಇಂಜಿನಿಯರ್‌ಗಳು ಮತ್ತು ಕಾರ್ಮಿಕರು ಶ್ರಮಿಸಿದ್ದಾರೆ.

ಬಾಹ್ಯಾಕಾಶದಿಂದ ಗೋಚರಿಸುವ,ಮಾನವ ನಿರ್ಮಿತ ಕೆಲವೇ ರಚನೆಗಳಲ್ಲೊಂದಾಗಿರುವ ಏಕತಾ ಪ್ರತಿಮೆಯು ನರ್ಮದಾ ಜಲಾಶಯದಿಂದ 3.2 ಕಿ.ಮೀ ದೂರದ ಸಾಧು ಬೇಟ್ ದ್ವೀಪದಲ್ಲಿ ಸ್ಥಿತಗೊಂಡಿದೆ. ಮಹಾರಾಷ್ಟ್ರದ ಖ್ಯಾತ ವಾಸ್ತುಶಿಲ್ಪಿ ರಾಮ ವಿ.ಸುತಾರ ಅವರು ಪ್ರತಿಮೆಯ ವಿನ್ಯಾಸವನ್ನು ರಚಿಸಿದ್ದರು.

ಪ್ರತಿಮೆಯ ಎದೆಭಾಗದಲ್ಲಿ,135 ಮೀ.ಎತ್ತರದಲ್ಲಿ ವೀಕ್ಷಣಾ ಗ್ಯಾಲರಿಯನ್ನು ನಿರ್ಮಿಸಲಾಗಿದ್ದು,ಇಲ್ಲಿಂದ ಏಕಕಾಲದಲ್ಲಿ 200 ಪ್ರವಾಸಿಗಳು ನರ್ಮದಾ ಜಲಾಶಯ ಮತ್ತು ಇತರ ಹೆಗ್ಗುರುತುಗಳ ವಿಹಂಗಮ ನೋಟವನ್ನು ಸವಿಯಬಹುದಾಗಿದೆ.

ಪ್ರತಿ ಗಂಟೆಗೆ 290 ಕಿ.ಮೀ.ಗಾಳಿಯ ವೇಗ ಮತ್ತು ರಿಕ್ಟರ್ ಮಾಪಕದಲ್ಲಿ 6.5 ತೀವ್ರತೆವರೆಗಿನ ಭೂಕಂಪಗಳನ್ನು ತಡೆದುಕೊಳ್ಳುವಂತೆ ಏಕತಾ ಪ್ರತಿಮೆಯನ್ನು ನಿರ್ಮಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X