Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪುಂಡಾಟ ಮಾಡಿದ ಹೆಣ್ಣಾನೆ ಸೆರೆ:...

ಪುಂಡಾಟ ಮಾಡಿದ ಹೆಣ್ಣಾನೆ ಸೆರೆ: ನೆಲ್ಯಹುದಿಕೇರಿಯಲ್ಲಿ ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆ

ವಾರ್ತಾಭಾರತಿವಾರ್ತಾಭಾರತಿ28 May 2019 11:20 PM IST
share
ಪುಂಡಾಟ ಮಾಡಿದ ಹೆಣ್ಣಾನೆ ಸೆರೆ: ನೆಲ್ಯಹುದಿಕೇರಿಯಲ್ಲಿ ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆ

ಮಡಿಕೇರಿ, ಮೇ 28: ಸಿದ್ದಾಪುರದ ನೆಲ್ಯಹುದಿಕೇರಿ ವ್ಯಾಪ್ತಿಯ ನಲ್ವತ್ತೆಕ್ರೆ ಬೆಟ್ಟದಕಾಡು ಸುತ್ತಮುತ್ತ ಪುಂಡಾಟ ಮಾಡುತ್ತಿದ್ದ ಹೆಣ್ಣು ಕಾಡಾನೆಯನ್ನು ಸರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.

ಸೋಮವಾರ ಸಂಜೆಯಿಂದಲೇ ಕಾಡಾನೆಯ ಚಲನವಲನದ ಮೇಲೆ ನಿಗಾ ಇರಿಸಿದ್ದ ಅರಣ್ಯ ಇಲಾಖೆ ಸಿಬ್ಬಂದಿಗಳು ಮಂಗಳವಾರ ಮಧ್ಯಾಹ್ನದ ವೇಳೆಗೆ ಸಾಕಾನೆಗಳ ಸಹಕಾರದಿಂದ ತೋಟದೊಳಗಿದ್ದ ಕಾಡಾನೆಯನ್ನು ಸೆರೆ ಹಿಡಿದರು. ವೈದ್ಯಾಧಿಕಾರಿ ಡಾ.ಮುಜೀಬ್ ಅವರ ಮಾರ್ಗದರ್ಶನದಂತೆ ಕಾಡಾನೆಗಳ ಹಿಂಡಿನಲ್ಲಿದ್ದ ಹೆಣ್ಣು ಪುಂಡಾನೆಗೆ ಅರವಳಿಕೆ ಗುಂಡನ್ನು ಹಾರಿಸಲಾಯಿತು. ನಂತರ ಸಾಕಾನೆಗಳ ಸಹಾಯದಿಂದ ಮುಖ್ಯ ರಸ್ತೆಗೆ ಕರೆತಂದು ಲಾರಿ ಮೂಲಕ ಕುಶಾಲನಗರದ ದುಬಾರೆ ಸಾಕಾನೆ ಶಿಬಿರಕ್ಕೆ ಸ್ಥಳಾಂತರಿಸಲಾಯಿತು. 

ಕಾರ್ಯಾಚರಣೆಯಲ್ಲಿ ಡಿಎಫ್‍ಓ ಮಂಜುನಾಥ್, ವೈದ್ಯಾಧಿಕಾರಿ ಮುಜೀಬ್, ಎಸಿಎಫ್ ಚಿಣ್ಣಪ್ಪ, ವಲಯ ಅರಣ್ಯಾಧಿಕಾರಿ ಅರುಣ್, ಉಪವಲಯ ಅರಣ್ಯಾಧಿಕಾರಿಗಳಾದ ರಂಜನ್, ವಿಲಾಸ್, ಸಿಬ್ಬಂದಿಗಳು, ಮಾವುತರು ಹಾಗೂ ಕಾವಾಡಿಗಳು ಪಾಲ್ಗೊಂಡಿದ್ದರು.

ಅಭ್ಯತ್ಮಂಗಲ ಗ್ರಾಮದ ಸಮೀಪ ಕಾಡಾನೆ ಸೆರೆಗೆ ಸಿದ್ಧತೆ ನಡೆಸಲಾಗಿತ್ತು. ದುಬಾರೆ ಹಾಗೂ ಮತ್ತಿಗೋಡು ಆನೆ ಶಿಬಿರದ ಹರ್ಷ, ಕೃಷ್ಣ, ಅಭಿಮನ್ಯು, ಧನಂಜಯ, ಲಕ್ಷ್ಮಣ, ಈಶ್ವರ, ಅಜಯ್, ವಿಕ್ರಮ್ ಆನೆಗಳೊಂದಿಗೆ ಸುಮಾರು ಐವತ್ತಕ್ಕೂ ಹೆಚ್ಚು ಸಿಬ್ಬಂದಿಗಳು ಕಾಡಾನೆ ಇರುವಿಕೆಯ ಬಗ್ಗೆ ಮಾಹಿತಿ ಸಂಗ್ರಹಿಸಿ ಇಂದು ಬೆಳಗಿನಿಂದಲೇ ಕಾರ್ಯಾಚರಣೆ ನಡೆಸಿದರು. 

ಬೆಳಗ್ಗೆ ಹನ್ನೊಂದು ಗಂಟೆ ಸುಮಾರಿಗೆ ಪಿಂಟೊ ಅವರ ಕಾಫಿ ತೋಟದಲ್ಲಿ 10 ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಇರುವುದನ್ನು ಗಮನಿಸಿದ ಸಿಬ್ಬಂದಿಗಳು ತಕ್ಷಣ ಮೇಲಧಿಕಾರಿಗಳಿಗೆ ಮಾಹಿತಿ ನೀಡಿದರು. 

ಶಾಶ್ವತ ಪರಿಹಾರ
ಡಿಎಫ್‍ಒ ಮಂಜುನಾಥ್ ಮಾತನಾಡಿ ಕಾಫಿತೋಟಗಳಲ್ಲಿ ಬೀಡು ಬಿಟ್ಟು ಕಾರ್ಮಿಕರು ಹಾಗೂ ಗ್ರಾಮಸ್ಥರಿಗೆ ಆತಂಕ ಸೃಷ್ಟಿ ಮಾಡುತ್ತಿದ್ದ ಹೆಣ್ಣಾನೆಯನ್ನು ಸೆರೆ ಹಿಡಿಯಲಾಗಿದೆ. ಎರಡು ಪುಂಡಾನೆಗಳನ್ನು ಸೆರೆ ಹಿಡಿಯಲು ಅನುಮತಿ ಸಿಕ್ಕಿರುವ ಹಿನ್ನೆಲೆಯಲ್ಲಿ ಇನ್ನು ಎರಡು ದಿನಗಳಲ್ಲಿ ಮತ್ತೊಂದು ಗಂಡಾನೆಯನ್ನು ಸೆರೆಹಿಡಿಯಲು ಮುಂದಾಗುವುದಾಗಿ ಹೇಳಿದರು. ಕಾಡಾನೆ ಹಾವಳಿ ತಡೆಗೆ ಶಾಶ್ವತ ಯೋಜನೆಗಳನ್ನು ರೂಪಿಸಿದ್ದು ದುಬಾರೆ ವ್ಯಾಪ್ತಿಯಲ್ಲಿ ರೈಲ್ವೆ ಕಂಬಿಗಳ ಅಳವಡಿಸುವ ಕಾರ್ಯ ಸದ್ಯದಲ್ಲೇ ನಡೆಯಲಿದೆ ಎಂದರು.

ಡಾ.ಮುಜೀಬ್ ಮಾತನಾಡಿ ಇದುವರೆಗೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹದಿನೈದು ಕಾಡಾನೆಗಳನ್ನು ಸೆರೆ ಹಿಡಿಯಲಾಗಿದೆ ಹಾಗೂ ಹದಿನೈದಕ್ಕೂ ಹೆಚ್ಚು ಕಾಡಾನೆಗಳಿಗೆ ರೇಡಿಯೊ ಕಾಲರ್ ಅಳವಡಿಸಲಾಗಿದೆ ಎಂದು ತಿಳಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X