Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಸದ ನಳಿನ್‌ಕುಮಾರ್ ರಿಂದ ತೊಕ್ಕೊಟ್ಟು,...

ಸಂಸದ ನಳಿನ್‌ಕುಮಾರ್ ರಿಂದ ತೊಕ್ಕೊಟ್ಟು, ಪಂಪ್‌ವೆಲ್ ಕಾಮಗಾರಿ ವೀಕ್ಷಣೆ

ವಾರ್ತಾಭಾರತಿವಾರ್ತಾಭಾರತಿ29 May 2019 9:51 PM IST
share
ಸಂಸದ ನಳಿನ್‌ಕುಮಾರ್ ರಿಂದ ತೊಕ್ಕೊಟ್ಟು, ಪಂಪ್‌ವೆಲ್ ಕಾಮಗಾರಿ ವೀಕ್ಷಣೆ

ಮಂಗಳೂರು, ಮೇ 29: ಸಂಸದರಾಗಿ ಮೂರನೇ ಬಾರಿಗೆ ಪುನರಾಯ್ಕೆಗೊಂಡ ನಳಿನ್ ಕುಮಾರ್ ತೊಕ್ಕೊಟ್ಟು ಮತ್ತು ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿಗಳನ್ನು ಬುಧವಾರ ವೀಕ್ಷಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ನಳಿನ್‌ಕುಮಾರ್ ಕಟೀಲ್, ಗುತ್ತಿಗೆದಾರ ಕಂಪೆನಿಯ ಆರ್ಥಿಕ ಸಮಸ್ಯೆಯಿಂದ ಕಾಮಗಾರಿ ವಿಳಂಬವಾಗಿತ್ತು. ಫೆಬ್ರವರಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿ, 55 ಕೋಟಿ ರೂ. ವ್ಯವಸ್ಥೆ ಮಾಡಿದ್ದೆವು. ಮುಂದೆ ಚುನಾವಣೆ ನೀತಿಸಂಹಿತೆ ಜಾರಿಯಾಗಿದ್ದರಿಂದ ಪರೀಶೀಲನೆ ಮಾಡಲು ಸಾಧ್ಯವಾಗಿರಲಿಲ್ಲ. ಇದೀಗ ಅಧಿಕಾರ ವಹಿಸುವ ಮುನ್ನವೇ ಪರೀಶೀಲನೆ ನಡೆಸುತ್ತಿದ್ದೇನೆ ಎಂದು ಹೇಳಿದರು.

ತೊಕ್ಕೊಟ್ಟು ಮೇಲ್ಸೇತುವೆ ಕಾಮಗಾರಿ ಮುಕ್ತಾಯ ಹಂತದಲ್ಲಿದೆ. ಜೂ.10ರಂದು ಸಂಚಾರಕ್ಕೆ ಮುಕ್ತವಾಗಲಿದೆ. ಉಳ್ಳಾಲಕ್ಕೆ ತೆರಳುವ ವಾಹನಗಳಿಗೆ ಸರಿಯಾದ ವ್ಯವಸ್ಥೆ ಕಲ್ಪಿಸುವಂತೆ ಹೆದ್ದಾರಿ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದ್ದೇನೆ. ಮೇಲ್ಸೇತುವೆ ಕಾಮಗಾರಿ ಸಂಪೂರ್ಣ ಗೊಂಡತೆಯೇ ಸರ್ವಿಸ್ ರಸ್ತೆಗಳ ಅಗಲೀಕರಣ ನಡೆಸಿ ಇತರ ಸಣ್ಣ ಪುಟ್ಟ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದರು.

ಪಂಪ್‌ವೆಲ್ ಬಳಿಯ ಅಂಡರ್‌ಪಾಸ್ ಕಾಮಗಾರಿ ಕೈಗೆತ್ತಿಕೊಂಡಿದ್ದು, ಒಂದು ಮುಗಿಸುತ್ತೇವೆ. ವಾರದಲ್ಲಿ ಸರ್ವಿಸ್ ರಸ್ತೆ ಮುಗಿಸಿ ಕೊಡುತ್ತೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಜುಲೈ ಅಂತ್ಯಕ್ಕೆ ಎಲ್ಲ ಕಾಮಗಾರಿ ಮುಗಿಸಿ, ಆಗಸ್ಟ್‌ಗೆ ಬಿಟ್ಟು ಕೊಡುವ ಎಲ್ಲ ಪ್ರಯತ್ನ ನಡೆಯುತ್ತಿದೆ. ಮುಂದೆ 10 ದಿನಕ್ಕೊಮ್ಮೆ ತಾನು ಪರಿಶೀಲನೆ ನಡೆಸುತ್ತೇನೆ ಎಂದು ಹೇಳಿದರು.

ಹೆದ್ದಾರಿ ಪ್ರಾಧಿಕಾರದ ಎಂಜಿನಿಯರ್ ಅಜಿತ್, ನವಯುಗ ಕಂಪನಿಯ ಮುಖ್ಯ ಯೋಜನಾ ನಿರ್ದೇಶಕ ಶಂಕರ್ ರಾವ್, ಮಾಜಿ ಕಾರ್ಪೊರೇಟರ್ ಸುಧೀರ್ ಶೆಟ್ಟಿ ಕಣ್ಣೂರು, ಪ್ರಭಾಮಾಲಿನಿ, ಜಗದೀಶ ಶೇಣವ, ಶರಣ್ ಪಂಪ್‌ವೆಲ್, ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಸಂತೋಷ್ ಕುಮಾರ್ ಬೋಳಿಯಾರು, ಚಂದ್ರಹಾಸ್ ಉಳ್ಳಾಲ್ ಮತ್ತಿತರರಿದ್ದರು.

ಹೋರಾಟಗಾರರು ಮನೆಗೆ: ಸಂಸದ

ಎಂಟು ವರ್ಷಗಳಿಂದ ಕಾಮಗಾರಿ ನಡೆಯುತ್ತಿದ್ದರೂ ಮಾತನಾಡದವರು ಚುನಾವಣೆ ಸಂದರ್ಭ ಭಾರೀ ಹೋರಾಟ ಮಾಡಿದರು. ಪಾಪ ಅವರಿಗೆ ಚುನಾವಣೆಯಲ್ಲಿ ಕೆಲಸ ಮಾಡಲು ಸಮಯ ಸಿಗಲಿಲ್ಲ. ಅವರನ್ನು ಜನರು ಮನೆಗೆ ಕಳುಹಿಸಿದ್ದು, ಈಗ ಮನೆಯಿಂದ ಹೊರಗೆ ಬರಲಾರದ ಸ್ಥಿತಿಯಲ್ಲಿ ಇದ್ದಾರೆ ಎಂದು ನಳಿನ್‌ಕುಮಾರ್ ಕಟೀಲ್ ಟೀಕಿಸಿದರು.

ರಾಜ್ಯದ ಸಮ್ಮಿಶ್ರ ಸರಕಾರ ಕಚ್ಚಾಟದಲ್ಲಿ ತೊಡಗಿದ್ದು, ರಾಜ್ಯದ ಅಭಿವೃದ್ಧಿಯನ್ನು ಸಂಪೂರ್ಣ ಮರೆತಿದೆ. ಇದರ ಪರಿಣಾಮಕಾರಿ ಶಿರಾಡಿ, ಚಾರ್ಮಾಡಿ, ಆಗುಂಬೆ ಘಾಟ್ ರಸ್ತೆಗಳು ಅಪಾಯದ ಸ್ಥಿತಿಯಲ್ಲಿದೆ ಎಂದರು.

ಮಂಗಳೂರಿನ ಜನರು ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರಕಾರ ಮಾತ್ರ ನೀರಿಲ್ಲದ ನದಿಯ ಮೂಲದಿಂದ ಎತ್ತಿನಹೊಳೆ ಯೋಜನೆ ಮಾಡಿ ಬಯಲು ಸೀಮೆಗೆ ನೀರು ತೆಗೆದುಕೊಂಡು ಹೋಗಲು ವ್ಯರ್ಥ ಹಣ ಸುರಿಯುತ್ತಿದ್ದಾರೆ. ಹಿಂದಿನ ಸರಕಾರವೇ ಶಿಲಾನ್ಯಾಸ ಮಾಡಿದ್ದರೂ ಇನ್ನೂ ಕೂಡ ಪೈಪ್ ಹಾಕಲು ಸಾಧ್ಯವಾಗಿಲ್ಲ. ಈಗಲೇ ಸಾವಿರಾರು ಕೋಟಿ ರೂ. ಮುಗಿಸಿದ ರಾಜ್ಯ ಸರಕಾರ ಹಣ ಖಾಲಿ ಮಾಡುತ್ತಿದೆಯೇ ಹೊರತು ಏನೂ ಆಗಿಲ್ಲ. ಆಗುವುದೂ ಇಲ್ಲ. ಇದು ಹಣ ದೋಚುವ ಯೋಜನೆ ಎಂದು ನಳಿನ್ ಹೇಳಿದರು.

ಬಯಲುಸೀಮೆಗೆ ನೀರು ಕೊಡುವುದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ನಮ್ಮ ನೇತ್ರಾವತಿ ಹಾಗೂ ಪಶ್ಚಿಮಘಟ್ಟವನ್ನು ಹಾಳು ಮಾಡಿ ಯೋಜನೆ ಮಾಡುವುದಕ್ಕೆ ನನ್ನ ವಿರೋಧವಿದೆ. ಇದಕ್ಕಾಗಿ ಮತ್ತೊಮ್ಮೆ ಈ ಭಾಗದ ಹೋರಾಟಗಾರರೊಂದಿಗೆ ಕುಳಿತುಕೊಂಡು ಯೋಜನೆ ವಿರೋಧಿಸಿ ಮಾಡುವ ಎಲ್ಲ ಹೋರಾಟಗಳಿಗೂ ನನ್ನ ಬೆಂಬಲವನ್ನು ಸೂಚಿಸಲಾಗುವುದು ಎಂದರು.

‘ಖಾದರ್ ತಾಕತ್ತು ಪ್ರದರ್ಶಿಸಲಿ’

ಪ್ರಧಾನಿ ಮೋದಿ ಅವರು ಈ ಬಾರಿ 15 ಲಕ್ಷ ರೂ. ಜನರ ಖಾತೆಗೆ ಹಾಕಲಿ ಎಂಬ ಸಚಿವ ಖಾದರ್ ಹೇಳಿಕೆ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ನಳಿನ್, ‘ಮೋದಿ ಅವರು ಏನು ಮಾಡಿದ್ದಾರೆ ಎಂಬುದಕ್ಕೆ ಸ್ಪಷ್ಟ ತೀರ್ಪು ಜನರು ನೀಡಿದ್ದಾರೆ. ಖಾದರ್ ಅವರು ದೇಶದ, ರಾಜ್ಯದ ವಿಷಯ ಮಾತನಾಡುವ ಮುನ್ನ ಮಂಗಳೂರಿನಲ್ಲಿ ಜನರು ನೀರಿಲ್ಲದೆ ಸಮಸ್ಯೆ ಅನುಭವಿಸುವ ಈ ಕಾಲದಲ್ಲಿ ಹೆಚ್ಚುವರಿಯಾಗಿ 10 ಟ್ಯಾಂಕರ್ ನೀರು ಕೊಡುವ ತಾಕತ್ತು ಪ್ರದರ್ಶಿಸಲಿ. ನೀರಿನ ಸಮಸ್ಯೆ ಮುಗಿದ ಬಳಿಕ 15 ಲಕ್ಷದ ಬಗ್ಗೆ ನೋಡೋಣ’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X