Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೇನಾ ಅಧಿಕಾರಿಗಳು ಇನ್ನು ದುಬಾರಿ ಕಾರು...

ಸೇನಾ ಅಧಿಕಾರಿಗಳು ಇನ್ನು ದುಬಾರಿ ಕಾರು ಖರೀದಿಸುವಂತಿಲ್ಲ..

ವಾರ್ತಾಭಾರತಿವಾರ್ತಾಭಾರತಿ30 May 2019 9:22 AM IST
share
ಸೇನಾ ಅಧಿಕಾರಿಗಳು ಇನ್ನು ದುಬಾರಿ ಕಾರು ಖರೀದಿಸುವಂತಿಲ್ಲ..

ಹೊಸದಿಲ್ಲಿ: ಸೇನೆಯ ಅಧಿಕಾರಿಗಳು ಇನ್ನು ಹೈಫೈ ಎಸ್‌ಯುವಿಗಳನ್ನು ಮಿಲಿಟರಿ ಕ್ಯಾಂಟಿನ್‌ಗಳಲ್ಲಿ ರಿಯಾಯಿತಿ ದರದಲ್ಲಿ ಖರೀದಿಸುವಂತಿಲ್ಲ. ಸೇನೆಯ ಕ್ಯಾಂಟಿನ್ ವಿಭಾಗದಿಂದ ಖರೀದಿಸಬಹುದಾದ ಚತುಶ್ಚಕ್ರ ವಾಹನಗಳ ಮೇಲೆ 12 ಲಕ್ಷ ರೂಪಾಯಿ ಗರಿಷ್ಠ ಮಿತಿ ನಿಗದಿಪಡಿಸಲಾಗಿದ್ದು, ಈ ಸಂಬಂಧ ಆದೇಶ ಹೊರಡಿಸಲಾಗಿದೆ.

ಇದರಿಂದಾಗಿ ಸಶಸ್ತ್ರ ಪಡೆಗಳಿಗೆ ನೀಡಿದ ಮತ್ತೊಂದು ಸೌಲಭ್ಯವನ್ನು ಕಿತ್ತುಕೊಂಡಂತಾಗಿದೆ. ಸೇವೆಯಲ್ಲಿರುವವರು ಹಾಗೂ ನಿವೃತ್ತರು ಎಂಟು ವರ್ಷಗಳಿಗೊಮ್ಮೆ ಮಾತ್ರ ವಾಹನ ಖರೀದಿಸಬಹುದಾಗಿದೆ.

ಸೇನೆಯ ಕ್ವಾರ್ಟರ್ ಮಾಸ್ಟರ್ ಜನರಲ್ ಶಾಖೆ ಮೇ 24ರಂದು ಎಲ್ಲ ಕಚೇರಿಗಳಿಗೆ ಈ ಸಂಬಂಧ ನಿರ್ದೇಶನ ನೀಡಿದೆ. ಅಧಿಕಾರಿಗಳು ಜಿಎಸ್‌ಟಿ ಹೊರತುಪಡಿಸಿ 12 ಲಕ್ಷ ರೂ. ವರೆಗಿನ ಕಾರುಗಳನ್ನಷ್ಟೇ ಖರೀದಿಸಲು ಅವಕಾಶವಿದೆ. ಜೂನ್ 1ರಿಂದ ಹೊಸ ಆದೇಶ ಜಾರಿಗೆ ಬರಲಿದ್ದು, 2500 ಸಿಸಿ ಸಾಮರ್ಥ್ಯದ ವಾಹನಗಳನ್ನಷ್ಟೇ ಖರೀದಿಸಬಹುದು.

ರಕ್ಷಣಾ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುವ ನಾಗರಿಕ ಅಧಿಕಾರಿಗಳಿಗೂ ಇಂಥದ್ದೇ ಮಾನದಂಡ ಅನುಸರಿಸಲಾಗುತ್ತದೆ. ಜವಾನರು 1400 ಸಿಸಿ ವರೆಗಿನ ಮತ್ತು ಜಿಎಸ್‌ಟಿ ಹೊರತುಪಡಿಸಿ 5 ಲಕ್ಷ ರೂಪಾಯಿ ಮೀರದ ವಾಹನಗಳನ್ನಷ್ಟೇ ಸೇವಾ ಅವಧಿಯಲ್ಲಿ ಒಂದು ಬಾರಿ ಮಾತ್ರ ಖರೀದಿಸಬಹುದು. ನಿವೃತ್ತಿಯ ಬಳಿಕ ಮತ್ತೊಮ್ಮೆ ಖರೀದಿಸಲು ಅವಕಾಶವಿದೆ.

ಸಿಎಸ್‌ಡಿಯಿಂದ ವಾಹನ ಖರೀದಿಸಿದಲ್ಲಿ 50 ಸಾವಿರದಿಂದ 1.5 ಲಕ್ಷ ರೂಪಾಯಿಯವರೆಗೂ ಉಳಿಸಬಹುದಾಗಿದೆ. ಉತ್ಪಾದಕರ ಜತೆ ಕಡಿಮೆ ದರಕ್ಕೆ ಒಪ್ಪಂದ ಮಾಡಿಕೊಳ್ಳುವ ಜತೆಗೆ ಸರ್ಕಾರದ ಜಿಎಸ್‌ಟಿ ದರದಲ್ಲಿ ಶೇಕಡ 50ರಷ್ಟು ರಿಯಾಯಿತಿ ಇರುತ್ತದೆ.

ಸರ್ಕಾರದ ಈ ಕ್ರಮದ ವಿರುದ್ಧ ಯುವ ಅಧಿಕಾರಿಗಳು ಹಾಗೂ ನಿವೃತ್ತರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಹಳಷ್ಟು ಹಿರಿಯ ಅಧಿಕಾರಿಗಳಂತೆ 15-16 ಲಕ್ಷ ರೂಪಾಯಿ ಆರಂಭಿಕ ಬೆಲೆ ಇರುವ ಜೀಪ್ ಕಾಂಪಾಸ್‌ಗಳನ್ನು ನಾವೇಕೆ ಖರೀದಿಸಬಾರದು ಎಂದು ಮೇಜರ್ ಒಬ್ಬರು ಪ್ರಶ್ನಿಸಿದ್ದಾರೆ. ಹೊಸ ಆದೇಶ ಅತಾರ್ಕಿಕ; ಇದುವರೆಗೆ ಬೆಲೆ ಅಥವಾ ಎಂಜಿನ್ ಸಾಮರ್ಥ್ಯಕ್ಕೆ ನಿರ್ಬಂಧವೂ ಇರಲಿಲ್ಲ. ಅಧಿಕಾರಿಗಳು ನಾಲ್ಕರಿಂದ ಐದು ವರ್ಷಕ್ಕೆ ಹೊಸ ಕಾರು ಖರೀದಿಸಲು ಅವಕಾಶವಿದೆ. ಕೆಲವೊಂದು ದುರ್ಬಳಕೆ ಪ್ರಕರಣಗಳು ಪತ್ತೆಯಾಗಿವೆ ನಿಜ; ಆದರೆ ಕಣ್ಗಾವಲು ವ್ಯವಸ್ಥೆಯನ್ನು ಬಲಪಡಿಸಬೇಕೇ ವಿನಃ ಇಂಥ ಆದೇಶ ಸರಿಯಲ್ಲ ಎಂದು ಬ್ರಿಗೇಡಿಯರ್ ಒಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X