Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘30 ವರ್ಷ ಸೇನೆಯಲ್ಲಿ ಸೇವೆ...

‘30 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಕ್ಕೆ ಸಿಕ್ಕ ಬಹುಮಾನವಿದು’

ವಿದೇಶಿ ಎಂದು ಬಂಧಿಸಲ್ಪಟ್ಟ ಕಾರ್ಗಿಲ್ ಯೋಧ ಮುಹಮ್ಮದ್ ಸನಾವುಲ್ಲಾ

ವಾರ್ತಾಭಾರತಿವಾರ್ತಾಭಾರತಿ30 May 2019 1:11 PM IST
share
‘30 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಕ್ಕೆ ಸಿಕ್ಕ ಬಹುಮಾನವಿದು’

ಗುವಹಾಟಿ, ಮೇ 30: “ಮೂವತ್ತು ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದಕ್ಕೆ ದೊರೆತ ಬಹುಮಾನವಿದು''…  ಹೀಗೆಂದು ನೋವಿನಿಂದ ಹೇಳಿದವರು ಮುಹಮ್ಮದ್ ಸನಾವುಲ್ಲಾ.

ಐವತ್ತೆರಡು ವರ್ಷದ ಮುಹಮ್ಮದ್ ಅವರು ಕಾರ್ಗಿಲ್ ಯುದ್ಧದಲ್ಲಿ ಹೋರಾಡಿದವರು ಹಾಗೂ ಈಗ ಅಸ್ಸಾಂ ಪೊಲೀಸ್ ಇಲಾಖೆಯ ಗಡಿ ವಿಭಾಗದ ಡೆಪ್ಯುಟಿ ಇನ್‍ಸ್ಪೆಕ್ಟರ್ ಆಗಿದ್ದಾರೆ. ಆದರೆ ವಿಪರ್ಯಾಸವೆಂದರೆ ಅವರನ್ನು ಫಾರಿನರ್ಸ್ ಟ್ರಿಬ್ಯುನಲ್ `ವಿದೇಶಿ' ಎಂದು ಘೋಷಿಸಿದ್ದು ಅವರನ್ನೀಗ ಈ ಆದೇಶದ ಅನುಸಾರ ಅಸ್ಸಾಂನಲ್ಲಿನ ದಿಗ್ಬಂಧನ ಕೇಂದ್ರಕ್ಕೆ ಕಳುಹಿಸಲಾಗಿದೆ. ಅವರನ್ನು ದಿಗ್ಬಂಧನ ಶಿಬಿರಕ್ಕೆ ಕಳುಹಿಸಿರುವುದನ್ನು ಅಸ್ಸಾಂನ ಹಿರಿಯ ಪೊಲೀಸ್ ಅಧಿಕಾರಿ ಮೌಸಮಿ ಕಲಿಟ ದೃಢ ಪಡಿಸಿದ್ದಾರೆ.

“ನಾವು ಕೇವಲ ಟ್ರಿಬ್ಯುನಲ್ ಆದೇಶವನ್ನು ಪಾಲಿಸುತ್ತಿದ್ದೇವೆ. ಆವರನ್ನೇಕೆ ವಿದೇಶಿ ಎಂದು ಘೋಷಿಸಲಾಯಿತೆಂಬುದು ನಮಗೆ ತಿಳಿದಿಲ್ಲ'' ಎಂದು ಅವರು ಹೇಳಿದ್ದಾರೆ.

ಇದರಲ್ಲೇನೋ ಪ್ರಮಾದವಿರಬೇಕೆಂದು ಮುಹಮ್ಮದ್ ಸನಾ ಅವರ ವಕೀಲ ಅಮನ್ ವದೂದ್ ಶಂಕಿಸಿದ್ದಾರೆ. ಆದೇಶದಲ್ಲಿ ತಮ್ಮ ಕಕ್ಷಿಗಾರರನ್ನು ಭಾರತಕ್ಕೆ 1971ರಲ್ಲಿ ಯಾವುದೇ ಕಾನೂನುಬದ್ಧ ದಾಖಲೆಯಿಲ್ಲದೆ ಪ್ರವೇಶಿಸಿದ ಕಾರ್ಮಿಕ ಎಂದು ಗುರುತಿಸಲಾಗಿದೆ ಎಂದು ಅವರು ಹೇಳಿದ್ದಾರೆ. ತಮ್ಮ ಬಳಿ 1935ರ ಅಸ್ಸಾಂ ಭೂ ದಾಖಲೆಗಳಿವೆ ಎಂದು ಮುಹಮ್ಮದ್ ಅವರ ಕುಟುಂಬ ಹೇಳಿದೆ. ಈ ಆದೇಶವನ್ನು ಉನ್ನತ ನ್ಯಾಯಾಲಯದಲ್ಲಿ  ಪ್ರಶ್ನಿಸುವುದಾಗಿ ವಕೀಲರು ತಿಳಿಸಿದ್ದಾರೆ.

ಸದ್ಯ ಮುಹಮ್ಮದ್ ಅವರು  ಗೋಲ್ಪರ ಎಂಬಲ್ಲಿನ ಶಿಬಿರದಲ್ಲಿದ್ದು ತಾವು ತೀವ್ರವಾಗಿ ನೊಂದಿದ್ದಾಗಿ ಅವರು ಹೇಳಿದ್ದಾರೆ. ``ನಾನೊಬ್ಬ ಭಾರತೀಯ ಹಾಗೂ ಯಾವತ್ತೂ ಭಾರತೀಯನಾಗಿರುತ್ತೇನೆ'' ಎಂದು ಶಿಬಿರದೊಳಕ್ಕೆ ಸಾಗಿಸುವ ಮುನ್ನ ಅವರು ಮಾಧ್ಯಮವೊಂದಕ್ಕೆ ನೀಡಿದ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ.

ನ್ಯಾಷನಲ್ ರಿಜಿಸ್ಟರ್ ಆಫ್ ಸಿಟಿಝನ್ಸ್ ಅಸ್ಸಾಂನಲ್ಲಿ ಈಗಾಗಲೇ ಕೋಲಾಹಲ ಸೃಷ್ಟಿಸಿದ್ದರೆ, ಬಿಜೆಪಿ ತಾನು ಮತ್ತೆ ಅಧಿಕಾರಕ್ಕೆ ಬಂದರೆ ಎಲ್ಲಾ ಅಕ್ರಮ ವಲಸಿಗರನ್ನೂ ಗುರುತಿಸಿ ಮುಸ್ಲಿಮೇತರರಿಗೆ ಇಲ್ಲಿನ ಪೌರತ್ವ ನೀಡಿ ಉಳಿದವರನ್ನು ಗಡೀಪಾರು ಮಾಡುವುದಾಗಿ ಹೇಳಿರುವುದು ಸಾಕಷ್ಟು  ಕಳವಳಕ್ಕೆ ಕಾರಣವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X