Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ:...

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಕಾಂಗ್ರೆಸ್ ಮೇಲುಗೈ, ಬಿಜೆಪಿಗೆ ಹಿನ್ನಡೆ

ವಾರ್ತಾಭಾರತಿವಾರ್ತಾಭಾರತಿ31 May 2019 6:39 PM IST
share
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಕಾಂಗ್ರೆಸ್ ಮೇಲುಗೈ, ಬಿಜೆಪಿಗೆ ಹಿನ್ನಡೆ

ಬೆಂಗಳೂರು, ಮೇ 31: ರಾಜ್ಯದಲ್ಲಿ ಎರಡನೆ ಹಂತದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದು, ಬಿಜೆಪಿಗೆ, ಜೆಡಿಎಸ್‌ಗೂ ಹಿನ್ನಡೆಯಾಗಿದೆ.

ರಾಜ್ಯದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಸೇರಿದಂತೆ 61 ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಮತ ಎಣಿಕೆ ಮುಕ್ತಾಯಗೊಂಡಿದೆ. ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಪಡೆದಿದ್ದ ಬಿಜೆಪಿ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಹಿನ್ನಡೆ ಅನುಭವಿಸಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಚೇತರಿಸಿಕೊಂಡಿವೆ.

ನಗರಸಭೆಯ 248 ಕ್ಷೇತ್ರಗಳ 217, ಪಟ್ಟಣ ಪಂಚಾಯತಿಯ 330 ಸ್ಥಾನಗಳ ಪೈಕಿ 290 ಹಾಗೂ ಪುರಸಭೆಯ 783 ಸ್ಥಾನಗಳ ಪೈಕಿ 714 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಕಾಂಗ್ರೆಸ್ 509, ಬಿಜೆಪಿ 366, ಜೆಡಿಎಸ್ 174, ಬಿಎಸ್ಪಿ 3, ಸಿಪಿಎಂ 2 ಹಾಗೂ ಪಕ್ಷೇತರರು 160 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.

ರಾಜ್ಯದ ಹಲವು ಕಡೆಗಳಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದ್ದು, ಇಂತಹ ಕಡೆ ಮೈತ್ರಿ ಮಾಡಿಕೊಳ್ಳುವುದು, ಇಲ್ಲವೇ ಪಕ್ಷೇತರರ ಬೆಂಬಲ ಪಡೆದು ಅಧಿಕಾರ ರಚಿಸಬೇಕಾದ ಪರಿಸ್ಥಿತಿ ಇದೆ.

ನಗರಸಭೆಯ ಒಟ್ಟು 217 ಸ್ಥಾನಗಳ ಪೈಕಿ ಕಾಂಗ್ರೆಸ್ 90, ಬಿಜೆಪಿ 56, ಜೆಡಿಎಸ್ 38, ಬಿಎಸ್ಪಿ 2, ಪಕ್ಷೇತರರು 25 ಮತ್ತು ಇತರರು 6 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿದ್ದಾರೆ. ಪುರಸಭೆಯ 714 ಸ್ಥಾನಗಳ ಪೈಕಿ ಕಾಂಗ್ರೆಸ್ 322, ಬಿಜೆಪಿ 184, ಜೆಡಿಎಸ್ 102, ಬಿಎಸ್ಪಿ1, ಸಿಪಿಎಂ 2, ಪಕ್ಷೇತರರು 102 ಹಾಗೂ ಇತರರು 1 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದ್ದಾರೆ.

ಪಟ್ಟಣ ಪಂಚಾಯ್ತಿಯ 290 ವಾರ್ಡ್‌ಗಳಲ್ಲಿ ಬಿಜೆಪಿ 126, ಕಾಂಗ್ರೆಸ್ 97, ಜೆಡಿಎಸ್ 34 ಹಾಗೂ ಇತರರು 33 ಸ್ಥಾನಗಳಲ್ಲಿ ಗೆಲುವು ಪಡೆದಿದ್ದಾರೆ.
ನಗರ ಪಾಲಿಕೆ ಚುನಾವಣೆಯಲ್ಲಿ ಕೆಲವು ಕಡೆ ಮತದಾರರು ಒಂದೇ ಪಕ್ಷಕ್ಕೆ ಸ್ಪಷ್ಟವಾದ ಜನಾದೇಶ ನೀಡಿದ್ದರೆ, ಕೆಲವು ಕಡೆಗಳಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದೆ. 8 ನಗರಸಭೆಗಳಿಗೆ ಚುನಾವಣೆ ನಡಿದ್ದು, ಶಹಾಪುರ ಹಾಗೂ ಬಸವಕಲ್ಯಾಣ ಬಿಟ್ಟರೆ ಎಲ್ಲಿಯೂ ಸ್ಪಷ್ಟವಾದ ಬಹುಮತ ಸಿಕ್ಕಿಲ್ಲ. 30 ಪುರಸಭೆಗಳಿಗೆ ನಡೆದ ಚುನಾವಣೆಯಲ್ಲಿ 22 ಕಡೆ ಸ್ಪಷ್ಟ ಬಹುಮತ ಸಿಕ್ಕಿದ್ದು, 8 ಕಡೆಗಳಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಎರಡು ಕಡೆ ಪಕ್ಷೇತರ ಅಭ್ಯರ್ಥಿಗಳು ಸ್ಪಷ್ಟ ಬಹುಮತ ಪಡೆದಿದ್ದು, ಪಕ್ಷಗಳು ಅತಂತ್ರವಾಗಿವೆ.
ಇನ್ನುಳಿದಂತೆ ಪಟ್ಟಣ ಪಂಚಾಯತ್‌ಗಳ 22ಕ್ಕೆ ಚುನಾವಣೆ ನಡೆದಿದ್ದು, 10 ಕಡೆಗಳಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಇದೀಗ ಅತಂತ್ರಗೊಂಡಿರುವ ಕಡೆಗಳಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರದೊಂದಿಗೆ ಆಡಳಿತ ನಡೆಸಲು ತಯಾರಿ ನಡೆಸಿದ್ದರೆ, ಬಿಜೆಪಿಯು ಪಕ್ಷೇತರರೊಂದಿಗೆ ಸೇರಿ ಅಧಿಕಾರದ ಗದ್ದುಗೆ ಹಿಡಿಯಲು ಶತಪ್ರಯತ್ನ ಮಾಡುತ್ತಿದೆ.

ಎಲ್ಲಿ ಎಷ್ಟು ಸ್ಥಾನ:
ಬೆಂಗಳೂರು ನಗರ: ಕಾಂಗ್ರೆಸ್-17, ಬಿಜೆಪಿ-10
ಚಿತ್ರದುರ್ಗ: ಕಾಂಗ್ರೆಸ್-22, ಬಿಜೆಪಿ-20, ಜೆಡಿಎಸ್-3, ಪಕ್ಷೇತರರು-18
ದಾವಣಗೆರೆ: ಕಾಂಗ್ರೆಸ್-10, ಬಿಜೆಪಿ-5, ಜೆಡಿಎಸ್-14, ಪಕ್ಷೇತರರು-2
ಕೋಲಾರ: ಕಾಂಗ್ರೆಸ್-39, ಬಿಜೆಪಿ-11, ಜೆಡಿಎಸ್-14, ಪಕ್ಷೇತರರು-13
ಚಿಕ್ಕಬಳ್ಳಾಪುರ: ಕಾಂಗ್ರೆಸ್-26, ಬಿಜೆಪಿ-2, ಜೆಡಿಎಸ್-11, ಬಿಎಸ್ಪಿ-2, ಸಿಪಿಎಂ-2, ಪಕ್ಷೇತರರು-11
ತುಮಕೂರು: ಕಾಂಗ್ರೆಸ್-45, ಬಿಜೆಪಿ-21, ಜೆಡಿಎಸ್-15, ಪಕ್ಷೇತರರು-10
ಮೈಸೂರು: ಕಾಂಗ್ರೆಸ್-31, ಬಿಜೆಪಿ-18, ಜೆಡಿಎಸ್-23, ಪಕ್ಷೇತರರು-5
ಚಿಕ್ಕಮಗಳೂರು:ಕಾಂಗ್ರೆಸ್-27, ಬಿಜೆಪಿ-27, ಜೆಡಿಎಸ್-7, ಪಕ್ಷೇತರರು-6
ದಕ್ಷಿಣ ಕನ್ನಡ: ಕಾಂಗ್ರೆಸ್-24, ಬಿಜೆಪಿ-34, ಜೆಡಿಎಸ್-1, ಪಕ್ಷೇತರರು-2
ಹಾಸನ: ಕಾಂಗ್ರೆಸ್-6, ಬಿಜೆಪಿ-8, ಜೆಡಿಎಸ್-11, ಪಕ್ಷೇತರರು- 3
ಮಂಡ್ಯ: ಕಾಂಗ್ರೆಸ್-23, ಬಿಜೆಪಿ-4, ಜೆಡಿಎಸ್-32, ಪಕ್ಷೇತರರು-10
ಚಾಮರಾಜನಗರ: ಕಾಂಗ್ರೆಸ್-22, ಬಿಜೆಪಿ-17, ಜೆಡಿಎಸ್-6, ಪಕ್ಷೇತರರು-1, ಇತರರು-1
ವಿಜಯಪುರ: ಕಾಂಗ್ರೆಸ್-24, ಬಿಜೆಪಿ-20, ಜೆಡಿಎಸ್-3, ಪಕ್ಷೇತರರು-22
ಧಾರವಾಡ: ಕಾಂಗ್ರೆಸ್-18, ಬಿಜೆಪಿ-18, ಜೆಡಿಎಸ್-17, ಪಕ್ಷೇತರರು-5
ಗದಗ: ಕಾಂಗ್ರೆಸ್-12, ಬಿಜೆಪಿ-29, ಜೆಡಿಎಸ್-1, ಪಕ್ಷೇತರರು-4
ಹಾವೇರಿ: ಕಾಂಗ್ರೆಸ್-12, ಬಿಜೆಪಿ-22, ಪಕ್ಷೇತರರು-12
ಉತ್ತರ ಕನ್ನಡ: ಕಾಂಗ್ರೆಸ್-6, ಬಿಜೆಪಿ-27, ಜೆಡಿಎಸ್-2, ಪಕ್ಷೇತರರು-23
ಬೀದರ್: ಕಾಂಗ್ರೆಸ್-75, ಬಿಜೆಪಿ-31, ಜೆಡಿಎಸ್-13, ಬಿಎಸ್ಪಿ-1, ಪಕ್ಷೇತರರು 4, ಇತರರು 4
ಬಳ್ಳಾರಿ: ಕಾಂಗ್ರೆಸ್-54, ಬಿಜೆಪಿ-30, ಜೆಡಿಎಸ್-1, ಪಕ್ಷೇತರರು-8
ಯಾದಗಿರಿ: ಕಾಂಗ್ರೆಸ್-16, ಬಿಜೆಪಿ-12, ಪಕ್ಷೇತರರು-1, ಇತರರು-2

share
ವಾರ್ತಾಭಾರತಿ
ವಾರ್ತಾಭಾರತಿ
Next Story
X