Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಿರುದ್ಯೋಗ ಪ್ರಮಾಣ 45 ವರ್ಷಗಳಲ್ಲೇ...

ನಿರುದ್ಯೋಗ ಪ್ರಮಾಣ 45 ವರ್ಷಗಳಲ್ಲೇ ಅತ್ಯಧಿಕ: ಕೊನೆಗೂ ಒಪ್ಪಿಕೊಂಡ ಸರಕಾರ

ಜಿಡಿಪಿ ಪ್ರಗತಿಯೂ 5 ವರ್ಷಗಳಲ್ಲಿ ಅತ್ಯಧಿಕ ಕುಸಿತ

ವಾರ್ತಾಭಾರತಿವಾರ್ತಾಭಾರತಿ31 May 2019 6:47 PM IST
share
ನಿರುದ್ಯೋಗ ಪ್ರಮಾಣ 45 ವರ್ಷಗಳಲ್ಲೇ ಅತ್ಯಧಿಕ: ಕೊನೆಗೂ ಒಪ್ಪಿಕೊಂಡ ಸರಕಾರ

ಹೊಸದಿಲ್ಲಿ, ಮೇ.31: 2017-18ರಲ್ಲಿ ಭಾರತದ ನಿರುದ್ಯೋಗ ದರ ಶೇ.6.1 ಆಗಿದೆ ಎಂದು ಸಂಖ್ಯಾ ಸಚಿವಾಲಯ ಶುಕ್ರವಾರ ತಿಳಿಸಿದೆ. ಆಮೂಲಕ ಜನವರಿಯಲ್ಲಿ ಮಾಧ್ಯಮಗಳಿಗೆ ಸೋರಿಕೆಯಾಗಿದ್ದ ಅಂಕಿಅಂಶಗಳನ್ನು ಸರಕಾರ ದೃಢಪಡಿಸಿದೆ.ಪ್ರಧಾನ ಮಂತ್ರಿ ನರೇಂದ್ರ ಮೋದಿ ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ಈ ಅಂಕಿಅಂಶವನ್ನು ಬಿಡುಗಡೆಗೊಳಿಸಲಾಗಿದೆ. ನಿರುದ್ಯೋಗ ಸಮಸ್ಯೆ ಮತ್ತು ಕೃಷಿದರ ಕುಸಿತದ ಬಗ್ಗೆ ಆತಂಕ ವ್ಯಕ್ತವಾಗುತ್ತಿರುವ ಮಧ್ಯೆಯೇ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ದಾಖಲಿಸಿತ್ತು. ನಿರುದ್ಯೋಗ ಪ್ರಮಾಣವನ್ನು ಹೋಲಿಕೆ ಮಾಡಲು ಸಂಖ್ಯೆಗಳನ್ನು ನೀಡಲು ಸರಕಾರ ನಿರಾಕರಿಸಿದೆ. ಸದ್ಯ ನಾವು ಹೊಸ ಸರಕಾರ ಹೊಂದಿದ್ದು ಹಳೆಯದನ್ನು ಹೋಲಿಸುವುದು ಸರಿಯಲ್ಲ ಎಂದು ಮುಖ್ಯ ಸಂಖ್ಯಾಶಾಸ್ತ್ರಜ್ಞ ಪ್ರವೀಣ್ ಶ್ರೀವಾಸ್ತವ ತಿಳಿಸಿದ್ದಾರೆ.

ಜನವರಿಯಲ್ಲಿ ಮೊದಲ ಬಾರಿ ಈ ಬಗ್ಗೆ ವರದಿ ಮಾಡಿದ ಬಿಸಿನೆಸ್ ಸ್ಟಾಂಡರ್ಡ್ಸ್ ಪತ್ರಿಕೆ, ಈ ವರದಿಯನ್ನು ರಾಷ್ಟ್ರೀಯ ಮಾದರಿ ಸಮೀಕ್ಷೆ ಕಚೇರಿ ಜುಲೈ 2017ರಿಂದ ಜೂನ್ 2018ರವರೆಗೆ ನಡೆಸಿದ ಸಮೀಕ್ಷೆಯ ಆಧರಿಸಿದೆ ಎಂದು ತಿಳಿಸಿತ್ತು. 1972-73ರಿಂದೀಚೆಗೆ ಇದೇ ಮೊದಲ ಬಾರಿ ನಿರುದ್ಯೋಗ ದರ ಅತ್ಯಂತ ಗರಿಷ್ಠ ಏರಿಕೆ ಕಂಡಿದೆ ಎಂದು ಆ ಆರ್ಥಿಕ ವರ್ಷದ ಅಂಕಿಅಂಶವನ್ನು ನೀಡದೆ ಪತ್ರಿಕೆ ವರದಿ ಮಾಡಿತ್ತು. ನಗರ ಪ್ರದೇಶಗಳಲ್ಲಿ ಮಹಿಳಾ ಉದ್ಯೋಗಿಗಳ ಪ್ರಮಾಣ 2018ರ ಡಿಸೆಂಬರ್‌ಗೆ ಅಂತ್ಯವಾಗುವ ತ್ರೈಮಾಸಿಕದಲ್ಲಿ ಶೇ.19.5 ಆಗಿದೆ. ಇದೇ ವೇಳೆ ಪುರುಷರ ಪ್ರಮಾಣ ಶೇ.73.6 ಆಗಿದೆ ಎಂದು ಸಚಿವಾಲಯ ತಿಳಿಸಿದೆ.

ಆರ್ಥಿಕ ಬೆಳವಣೆಗೆ ಕುಸಿತ

 ಮಾರ್ಚ್ ತಿಂಗಳಿಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಶೇ.5.8ಕ್ಕೆ ಕುಸಿದಿದ್ದು ಚೀನಾಕ್ಕಿಂತ ಹಿನ್ನಡೆ ಸಾಧಿಸಿದೆ. ಈ ಕುಸಿತದ ಫಲವಾಗಿ ಜೂನ್‌ನಲ್ಲಿ ನಡೆಯಲಿರುವ ನೀತಿ ಪರಿಶೀಲನೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಮತ್ತೊಮ್ಮೆ ಬಡ್ಡಿದರ ಕಡಿತ ಘೋಷಿಸುವ ಸಾಧ್ಯತೆಯಿದೆ ಎಂದು ಅರ್ಥಶಾಸ್ತ್ರಜ್ಞರು ಅಭಿಪ್ರಾಯಿಸಿದ್ದಾರೆ. ಬೆಳವಣಿಗೆ ಕುಂಠಿತಗೊಂಡಿರುವ ಕಾರಣ ಭಾರತ ಕಳೆದ ಒಂದೂವರೆ ವರ್ಷದಿಂದ ಜಗತ್ತಿನ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ ಎಂಬ ಬಿರುದನ್ನು ಚೀನಾಕ್ಕೆ ಬಿಟ್ಟುಕೊಡಬೇಕಾಗಿದೆ. ಮಾರ್ಚ್ ತಿಂಗಳು ಹೊರಬಿದ್ದ ತ್ರೈಮಾಸಿಕದಲ್ಲಿ ಚೀನಾ ಶೇ.6.4 ದರದಲ್ಲಿ ಬೆಳವಣಿಗೆ ಸಾಧಿಸಿದೆ ಎಂದು ತಿಳಿಸಲಾಗಿದೆ. ಆರ್‌ಬಿಐ ಎಪ್ರಿಲ್‌ನ ತನ್ನ ದ್ವೈಮಾಸಿಕ ಆರ್ಥಿಕ ನೀತಿ ಪರಿಶೀಲನೆಯಲ್ಲಿ 2019-20ರ ಜಿಡಿಪಿ ಬೆಳವಣಿಗೆಯನ್ನು ಶೇ.7.4ರಿಂದ ಶೇ.7.2ಕ್ಕೆ ಇಳಿಸಿತ್ತು. ಸಮಾನ ಸಮತೋಲನ ಹೊಂದಿರುವ ಅಪಾಯವನ್ನು ಬೆಟ್ಟು ಮಾಡಿದ್ದ ಆರ್‌ಬಿಐ, ಪ್ರಸಕ್ತ ವಿತ್ತೀಯ ವರ್ಷದ ಮೊದಲಾರ್ಧದಲ್ಲಿ ಜಿಡಿಪಿ ಶೇ.6.8ರಿಂದ ಶೇ.7.1ರ ದರದಲ್ಲಿ ಬೆಳವಣಿಗೆ ಸಾಧಿಸುವ ಮತ್ತು ದ್ವಿತೀಯಾರ್ಧದಲ್ಲಿ ಶೇ.7.3ರಿಂದ ಶೇ.7.4ರ ದರದಲ್ಲಿ ಬೆಳವಣಿಗೆ ಸಾಧಿಸುವ ನಿರೀಕ್ಷೆಯಿದೆ ಎಂದು ತಿಳಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X