ಸಿಇಟಿ ಸೀಟು ಹಂಚಿಕೆ: ಉಡುಪಿ ಜಿಲ್ಲೆಯಲ್ಲಿ ದಾಖಲೆ ಪರಿಶೀಲನೆ ಕೇಂದ್ರ ಸ್ಥಾಪನೆ
ಉಡುಪಿ, ಮೇ 31: ಈ ಸಾಲಿನ ವೃತ್ತಿ ಶಿಕ್ಷಣ ಕೋರ್ಸುಗಳಿಗೆ ಅ್ಯರ್ಥಿಗಳ ಇಚ್ಛೆಯ ಅನುಸಾರ, ಆನ್ಲೈನ್ ಮೂಲಕ ಸೀಟು ಹಂಚಿಕೆ ಮಾಡಲು ಹಾಗೂ ಅ್ಯರ್ಥಿಗಳ ದಾಖಲೆಯನ್ನು ಪರಿಶೀಲನೆ ಮಾಡಲು ಜಿಲ್ಲೆಯ ಉಡುಪಿ ತಾಲೂಕಿನ ಉದ್ಯಾವರ ಎಸ್.ಡಿ.ಎಂ ಆಯುರ್ವೇದಿಕ್ ಕಾಲೇಜಿನಲ್ಲಿ 2019-20ನೇ ಸಾಲಿನ ಸಹಾಯಕ ಕೇಂದ್ರವನ್ನು ಪ್ರಾರಂಭಿಸಲಾಗಿದೆ.
ಈ ಕೇಂದ್ರದಲ್ಲಿ ಅ್ಯರ್ಥಿಗಳ ದಾಖಲೆ ಪರಿಶೀಲನೆ ಮಾಡಲು ಇಬ್ಬರು ನೋಡೆಲ್ ಅಧಿಕಾರಿಗಳನ್ನು ಬೆಂಗಳೂರಿನ ಕರ್ನಾಟಕ ಪ ರೀಕ್ಷಾ ಪ್ರಾಧಿಕಾರ ನೇಮಕ ಮಾಡಿದೆ.
ಈ ಕೇಂದ್ರದಲ್ಲಿ ಅ್ಯರ್ಥಿಗಳ ದಾಖಲೆ ಪರಿಶೀಲನೆ ಮಾಡಲು ಇಬ್ಬರು ನೋಡೆಲ್ ಅಧಿಕಾರಿಗಳನ್ನು ಬೆಂಗಳೂರಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕ ಮಾಡಿದೆ. ಎಸ್ಡಿಎಂ ಆಯುರ್ವೇದ ಮೆಡಿಕಲ್ ಕಾಲೇಜ್, ಲಕ್ಷ್ಮೀನಾರಾಯಣ ನಗರ, ಕುತ್ಪಾಡಿ ಇಲ್ಲಿ ಈ ಕೇಂದ್ರವನ್ನು ತೆರೆಯಲಾಗಿದ್ದು, ನೋಡೆಲ್ ಅಧಿಕಾರಿ ಯಾಗಿ ಕಾಪು ಪೊಲಿಪುವಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಂಡರಿನಾಥ ಎಸ್. (ಮೊಬೈಲ್:9481963630) ಇವರನ್ನು ಸರಕಾರ ನೇಮಿಸಿದೆ.
ಅಲ್ಲದೇ ಹೆಚ್ಚುವರಿ ನೋಡೆಲ್ ಅಧಿಕಾರಿಯಾಗಿ ಉಡುಪಿ ಪಾಲಿಟೆಕ್ನಿಕ್ನ ಉಪನ್ಯಾಸಕರಾದ ರಾಘವೇಂದ್ರ ಎನ್.ಆರ್. (ಮೊಬೈಲ್: 9972511122) ಇವರನ್ನು ನೇಮಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಇವರನ್ನು ಸಂಪರ್ಕಿಸುವಂತೆ ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.





