Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನವ ಭಾರತ ನಿರ್ಮಾಣಕ್ಕಾಗಿ ಮೋದಿ ಅವರಿಗೆ...

ನವ ಭಾರತ ನಿರ್ಮಾಣಕ್ಕಾಗಿ ಮೋದಿ ಅವರಿಗೆ ನಿರ್ಣಾಯಕ ಜನಾದೇಶ: ರಾಷ್ಟ್ರಪತಿ ರಾಮನಾಥ್ ಕೋವಿಂದ್

ವಾರ್ತಾಭಾರತಿವಾರ್ತಾಭಾರತಿ31 May 2019 10:43 PM IST
share
ನವ ಭಾರತ ನಿರ್ಮಾಣಕ್ಕಾಗಿ ಮೋದಿ ಅವರಿಗೆ ನಿರ್ಣಾಯಕ ಜನಾದೇಶ: ರಾಷ್ಟ್ರಪತಿ ರಾಮನಾಥ್ ಕೋವಿಂದ್

ಹೊಸದಿಲ್ಲಿ,ಮೇ 31: ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೊರಕಿರುವ ನಿರ್ಣಾಯಕ ಜನಾದೇಶವು ಎಲ್ಲರ ಪ್ರಗತಿಯನ್ನು ಒಳಗೊಂಡಿರುವ ಮತ್ತು ದೇಶವು ಜಾಗತಿಕ ಬೆಳವಣಿಗೆಯ ನೇತಾರನಾಗಿ ಪರಿವರ್ತನೆಗೊಳ್ಳುವ ನವ ಭಾರತದ ನಿರ್ಮಾಣಕ್ಕಾಗಿ ಜನತೆಯ ಕರೆಯಾಗಿದೆ ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಹೇಳಿದ್ದಾರೆ.

ಗುರುವಾರ ರಾಷ್ಟ್ರಪತಿ ಭವನದಲ್ಲಿ ಮೋದಿ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದ ವಿದೇಶಿ ಸರಕಾರಗಳ ಮುಖ್ಯಸ್ಥರು ಮತ್ತು ಪ್ರತಿನಿಧಿಗಳಿಗಾಗಿ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಮಾತನಾಡುತ್ತಿದ್ದ ರಾಷ್ಟ್ರಪತಿಗಳು, ಜನತೆಯ ತೀರ್ಪು ಸದ್ಯೋಭವಿಷ್ಯದಲ್ಲಿ ನವ ಭಾರತವನ್ನು ನಿರ್ಮಿಸಲು ಮೋದಿಯವರ ದೂರದರ್ಶಿತ್ವದ ನಾಯಕತ್ವವನ್ನು ದೃಢೀಕರಿಸುತ್ತದೆ ಎಂದರು. ಈ ಜನಾದೇಶವು ಎಲ್ಲರೂ ಪ್ರಗತಿ ಹೊಂದುವ ಮತ್ತು ಯಾರೂ ಹಿಂದುಳಿಯದಿರುವ,ಮುಂಬರುವ ದಶಕದಲ್ಲಿ ಕಡುಬಡತನವನ್ನು ನಿವಾರಿಸುವ ಹಾದಿಯಲ್ಲಿರುವ,ಪ್ರತಿ ಹೆಣ್ಣುಮಗುವಿನ ಸಾಮರ್ಥ್ಯವನ್ನು ಸಾಕಾರಗೊಳಿಸುವ, ಆಧುನಿಕ ತಂತ್ರಜ್ಞಾನ ಮತ್ತು ಮಿತಿಯಿಲ್ಲದ ತನ್ನ ಯುವಜನತೆಯ ಲಾಭವನ್ನು ಪಡೆದುಕೊಳ್ಳಲು ಶ್ರಮಿಸುವ ನವಭಾರತ ನಿರ್ಮಾಣಕ್ಕಾಗಿ ಆಹ್ವಾನವಾಗಿದೆ ಎಂದರು.

ಜನತೆಯ ನಿರೀಕ್ಷೆಗಳು ಉತ್ತುಂಗದಲ್ಲಿವೆ ಎಂದ ರಾಷ್ಟ್ರಪತಿಗಳು,ಅವರು ತಮಗಾಗಿ ಮತ್ತು ತಮ್ಮ ಮಕ್ಕಳಿಗೆ ಉತ್ತಮ ಬದುಕಿಗಾಗಿ ನಿರಂತರವಾಗಿ ಹಂಬಲಿಸುತ್ತಿದ್ದಾರೆ. ಉತ್ತಮ ಆಡಳಿತ,ಸಮಾನ ಅವಕಾಶಗಳು ಹಾಗೂ ಸಾರ್ವಜನಿಕ ಬಳಕೆಯ ವಸ್ತುಗಳು ಮತ್ತು ಸೇವೆಗಳ ದಕ್ಷ ಮತ್ತು ನ್ಯಾಯಸಮ್ಮತ ವಿತರಣೆಗಾಗಿ ಅವರ ಬೇಡಿಕೆಯಲ್ಲಿ ಯಾವುದೇ ಸಡಿಲಿಕೆಯಿಲ್ಲ ಎಂದರು.

ಮೋದಿಯವರು ಈ ನಿರೀಕ್ಷೆಗಳನ್ನು ಈಡೇರಿಸಲು ಹಾಗೂ ನಮ್ಮ ಪ್ರಜೆಗಳಿಗೆ ಘನತೆ ಮತ್ತು ಗೌರವದ ಬದುಕನ್ನು ಸಾಧ್ಯವಾಗಿಸಲು ನಿಸ್ವಾರ್ಥದಿಂದ ಮತ್ತು ಅವಿಶ್ರಾಂತವಾಗಿ ಶ್ರಮಿಸುವ ಸರಕಾರವನ್ನು ಮುನ್ನಡೆಸುತ್ತಾರೆ ಎಂದರು.

ಬಾಂಗ್ಲಾದೇಶದ ಅಧ್ಯಕ್ಷ ಮುಹಮ್ಮದ್ ಅಬ್ದುಲ್ ಹಾಮಿದ್,ಶ್ರೀಲಂಕಾದ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ,ಕಿರ್ಗಿಝ್ ಗಣರಾಜ್ಯದ ಅಧ್ಯಕ್ಷ ಸೂರೋಂಬೈ ಝೀಂಬೆಕೊವ್,ಮ್ಯಾನ್ಮಾರ್ ಅಧ್ಯಕ್ಷ ಯು ವಿನ್ ಮಿಂಟ್,ಮಾರಿಷಿಯಸ್ ಪ್ರಧಾನಿ ಪ್ರವಿಂದ ಕುಮಾರ ಜಗನ್ನಾಥ್,ನೇಪಾಳದ ಪ್ರಧಾನಿ ಕೆ.ಪಿ.ಒಲಿ,ಭೂತಾನದ ಪ್ರಧಾನಿ ಲೋತೆ ಶೆರಿಂಗ್ ಮತ್ತು ಥೈಲಂಡ್ ಪ್ರಧಾನಿಯ ವಿಶೇಷ ಪ್ರತಿನಿಧಿ ಗ್ರಿಸಡಾ ಬೂನರ್ಯಾಚ್ ಅವರು ಭೋಜನ ಕೂಟದಲ್ಲಿ ಭಾಗಿಯಾಗಿದ್ದರು.

ದಾಲ್ ರೈಸಿನಾ ಸವಿದ ಅತಿಥಿಗಳು

ರಾಷ್ಟ್ರಪತಿ ಭವನದ ಪಾಕಶಾಲೆಯ ವಿಶೇಷ ಖಾದ್ಯ ‘ದಾಲ್ ರೈಸಿನಾ’ವನ್ನು ಗಣ್ಯರಿಗೆ ಉಣಬಡಿಸಲಾಗಿತ್ತು. ದಾಲ್ ರೈಸಿನಾದ ತಯಾರಿಕೆಗಾಗಿ 48 ಗಂಟೆಗಳು ಬೇಕಾಗುತ್ತವೆ ಮತ್ತು ಅದಕ್ಕಾಗಿ ಅಗತ್ಯ ಮುಖ್ಯ ಸಾಮಗ್ರಿಗಳನ್ನು ಲಕ್ನೋದಿಂದ ತರಿಸಲಾಗುತ್ತದೆ. ಗಣ್ಯರಿಗಾಗಿ ದಾಲ್ ರೈಸಿನಾದ ತಯಾರಿಕೆ ಮಂಗಳವಾರವೇ ಆರಂಭಗೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X