Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೈತರ ಭೂಮಿ ಸ್ವಾಧೀನ ವಿಚಾರ: ಸತೀಶ್...

ರೈತರ ಭೂಮಿ ಸ್ವಾಧೀನ ವಿಚಾರ: ಸತೀಶ್ ಜಾರಕಿಹೊಳಿ-ಲಕ್ಷ್ಮಿ ಹೆಬ್ಬಾಳ್ಕರ್ ವಾಕ್ಸಮರ

ವಾರ್ತಾಭಾರತಿವಾರ್ತಾಭಾರತಿ1 Jun 2019 6:14 PM IST
share
ರೈತರ ಭೂಮಿ ಸ್ವಾಧೀನ ವಿಚಾರ: ಸತೀಶ್ ಜಾರಕಿಹೊಳಿ-ಲಕ್ಷ್ಮಿ ಹೆಬ್ಬಾಳ್ಕರ್ ವಾಕ್ಸಮರ

ಬೆಳಗಾವಿ, ಜೂ.1: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಹಲಗಾ ಗ್ರಾಮದಲ್ಲಿ ನೀರು ಶುದ್ಧೀಕರಣ ಘಟಕ ಸ್ಥಾಪನೆಗೆ ರೈತರ ಫಲವತ್ತಾದ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ಜಿಲ್ಲಾಡಳಿತದ ಕ್ರಮಕ್ಕೆ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಜಿಲ್ಲಾಡಳಿತದ ಪರವಾಗಿ ನಿಂತಿದ್ದರೆ, ಸ್ಥಳೀಯ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ರೈತರ ಪರವಾಗಿ ಧ್ವನಿ ಎತ್ತಿದ್ದಾರೆ. ಇದೇ ವಿಚಾರ ಈಗ ಉಭಯ ನಾಯಕರ ನಡುವೆ ಮತ್ತೊಂದು ವಾಕ್ಸಮರಕ್ಕೆ ಎಡೆ ಮಾಡಿಕೊಟ್ಟಿದೆ.

ಅಭಿವೃದ್ಧಿಗೆ ನಾನು ಎಂದು ವಿರೋಧ ವ್ಯಕ್ತಪಡಿಸಿಲ್ಲ. ಆದರೆ ರೈತರು ಬೆಳೆ ಬೆಳೆಯುವಂತಹ ಫಲವತ್ತಾದ ಜಮೀನನ್ನು ಸ್ವಾಧೀನಪಡಿಸಿಕೊಂಡು, ಯೋಜನೆ ಅನುಷ್ಠಾನಕ್ಕೆ ತರುವುದು ಸರಿಯಲ್ಲ. ಈ ಬಗ್ಗೆ ಕಳೆದ 4 ವರ್ಷದಿಂದ ನಾನು ರೈತರ ಪರವಾಗಿ ಹೋರಾಡುತ್ತಿದ್ದೇನೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಕರುಣೆ ಇಲ್ಲದೆ, ಯವುದೋ ಕಾಣದ ಕೈಗಳ ಕೈವಾಡದಿಂದ ಜಿಲ್ಲಾಡಳಿತ ಈ ರೀತಿ ವರ್ತಿಸಿದೆ. ನಾನು ಇಲ್ಲಿಯ ಶಾಸಕಿಯಾಗಿ ಜನರಿಗೆ ಉತ್ತರ ಕೊಡುವುದು ಕಷ್ಟವಾಗಿದೆ. ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗಲು ಅವಕಾಶ ಕೊಡುವುದಿಲ್ಲ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಜಿಲ್ಲಾಡಳಿತದ ಈ ವರ್ತನೆಯಿಂದ ಬೇಸತ್ತು ಯಾರಾದರೂ ರೈತರು ಆತ್ಮಹತ್ಯೆ ಮಾಡಿಕೊಂಡರೆ, ಸರಕಾರ, ಪಕ್ಷ ಹಾಗೂ ಜನಪ್ರತಿನಿಧಿಗಳಾದ ನಮಗೆ ಕಪ್ಪು ಚುಕ್ಕೆಯಾಗುತ್ತದೆ. ರೈತರು ಹಾಗೂ ಜಿಲ್ಲಾಡಳಿತದ ಜೊತೆ ಮಾತುಕತೆ ನಡೆಸಲು ನಾನು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಅವರು ಹೇಳಿದರು.

ಪ್ರಯೋಜನವಿಲ್ಲ: ನೀರು ಶುದ್ಧೀಕರಣ ಘಟಕದ ಯೋಜನೆಗೆ ಬೇಕಾದ ಭೂಮಿಯನ್ನು ಸರಕಾರ ವಶಕ್ಕೆ ಪಡೆದಿದ್ದು, ಕಾನೂನು ಪ್ರಕ್ರಿಯೆ ಪೂರ್ಣಗೊಂಡಿದೆ. ಆದುದರಿಂದ, ಈಗ ಯೋಜನೆಗೆ ವಿರೋಧ ವ್ಯಕ್ತಪಡಿಸುವುದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರಿಗೆ ನಷ್ಟ ಆಗದಂತೆ ಮಾತ್ರ ಕ್ರಮಕೈಗೊಳ್ಳಲು ಸಾಧ್ಯ. ಈ ಜವಾಬ್ದಾರಿಯನ್ನು ತಾನೇ ನಿರ್ವಹಿಸುತ್ತೇನೆ. ಈಗಾಗಲೇ ನಾನು ಸ್ಥಳೀಯ ಶಾಸಕರಿಗೆ ಮಾಹಿತಿ ನೀಡಿದ್ದೇನೆ. 2 ವರ್ಷಗಳ ಹಿಂದೆಯೇ ಯೋಜನೆ ಕಾರ್ಯರೂಪಕ್ಕೆ ಬಂದಿದ್ದು, ಬೆಳಗಾವಿ ನಗರಕ್ಕೆ ಈ ಯೋಜನೆ ಅನಿವಾರ್ಯ ಆಗಿದೆ ಎಂದರು.

ರೈತರಿಗೆ ನಷ್ಟ ಆಗದಂತೆ ಈ ಯೋಜನೆಯನ್ನು ಜಾರಿ ಮಾಡಿ, ವಿಶೇಷ ಪ್ರಕರಣದ ಅಡಿಯಲ್ಲಿ ರೈತರಿಗೆ 30 ಲಕ್ಷ ರೂ. ಕೊಡಿಸುವ ಬಗ್ಗೆ ಪ್ರಸ್ತಾವನೆ ಇದೆ. ಈಗಾಗಲೇ ಸರಕಾರದ ಹಣ ಬಿಡುಗಡೆಯಾಗಿ ಮತ್ತೆ ವಾಪಸ್ ಹೋಗಿದ್ದು, 2ನೇ ಬಾರಿಗೆ ಹಣ ವಾಪಸ್ ಹೋದರೆ ಮತ್ತೆ ರೈತರಿಗೆ ಪರಿಹಾರ ನೀಡುವುದು ಕಷ್ಟವಾಗುತ್ತದೆ. ಇದನ್ನು ಸ್ಥಳೀಯ ಶಾಸಕರು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.

ಜಿಲ್ಲಾಧಿಕಾರಿಗಳು ಬದಲಾವಣೆಯಾದರೆ ರೈತರಿಗೆ ನ್ಯಾಯ ಕೊಡಿಸುವುದಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಯಾವ ಜಿಲ್ಲಾಧಿಕಾರಿ ಬಂದರೂ ಈಗ ಏನು ಮಾಡಲು ಆಗುವುದಿಲ್ಲ. ಈ ಹಿಂದೆ ಮಾನವೀಯ ದೃಷ್ಟಿಯಿಂದ ಜಿಲ್ಲಾಧಿಕಾರಿ ಕಾಲಾವಕಾಶ ಕೊಟ್ಟಿದ್ದರು. ಈಗ ಯಾರೇ ಜಿಲ್ಲಾಧಿಕಾರಿ ಬಂದರೂ ಯೋಜನೆಗೆ ಜಮೀನು ಕೊಡಿಸುವುದು ಅವರ ಜವಾಬ್ದಾರಿ. ಈ ಸಂಬಂಧ ನ್ಯಾಯಾಲಯದ ನಿರ್ದೇಶನವಿದೆ ಎಂದರು.

ರೈತರಿಗೆ ಸುಳ್ಳು ಭರವಸೆ ನೀಡಲು ಸಾಧ್ಯವಿಲ್ಲ. ಇದನ್ನು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅರ್ಥ ಮಾಡಿಕೊಳ್ಳಬೇಕು. ಅವರಿಗೆ ಅನ್ಯಾಯ, ತೊಂದರೆ ಆದರೆ ಸಹಿಸಿಕೊಳ್ಳಬೇಕು. ಶಾಸಕರು ಸರಕಾರದ ಒಂದು ಭಾಗ, ರೈತರಿಗೆ ತಿಳಿ ಹೇಳುವುದು ಅವರ ಕರ್ತವ್ಯ. ಯೋಜನೆಯ ಬಗ್ಗೆ ಇಬ್ಬರ ನಡುವೆ ಯಾವುದೇ ಮುಸುಕಿನ ಗುದ್ದಾಟ ಇಲ್ಲ ಎಂದು ಅವರು ಸ್ಪಷ್ಟಣೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X