Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೂತನ ಶಿಕ್ಷಣ ಸಚಿವ ರಮೇಶ ಪೋಖ್ರಿಯಾಲ್...

ನೂತನ ಶಿಕ್ಷಣ ಸಚಿವ ರಮೇಶ ಪೋಖ್ರಿಯಾಲ್ ಪದವಿ ನಕಲಿಯೇ?

ಡಾಕ್ಟರೇಟ್ ನೀಡಿದ ವಿವಿ ನೋಂದಣೆಯನ್ನೇ ಹೊಂದಿಲ್ಲ ಎಂದ ವರದಿ

ವಾರ್ತಾಭಾರತಿವಾರ್ತಾಭಾರತಿ1 Jun 2019 8:08 PM IST
share
ನೂತನ ಶಿಕ್ಷಣ ಸಚಿವ ರಮೇಶ ಪೋಖ್ರಿಯಾಲ್ ಪದವಿ ನಕಲಿಯೇ?

ದುಬೈ,ಜೂ.1: ಪ್ರಧಾನಿ ನರೇಂದ್ರ ಮೋದಿ ಅವರ ನೂತನ ಸರಕಾರದಲ್ಲಿ ಶಿಕ್ಷಣ ಸಚಿವರಾಗಿರುವ ರಮೇಶ ಪೋಖ್ರಿಯಾಲ್ ಅವರು ಎರಡು ನಕಲಿ ಪದವಿಗಳನ್ನು ಹೊಂದಿದ್ದಾರೆ ಎಂದು indiatoday.in ವರದಿ ಮಾಡಿದ ಬಳಿಕ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಟೀಕೆಗಳಿಗೆ ಗುರಿಯಾಗಿದ್ದಾರೆ.

ಪೋಖ್ರಿಯಾಲ್ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಿಗೇ ಅವರು ಶ್ರೀಲಂಕಾದ ವಿವಿಯೊಂದರಿಂದ ಪಡೆದಿರುವ ಎರಡು ಡಾಕ್ಟರೇಟ್ ಪದವಿಗಳ ಮೇಲೆ ಮಾಧ್ಯಮ ವರದಿಯೊಂದು ಬೆಳಕು ಚೆಲ್ಲಿದೆ.

ಸುದ್ದಿ ಜಾಲತಾಣವು ವರದಿ ಮಾಡಿರುವಂತೆ 1990ರ ದಶಕದಲ್ಲಿ ಕೊಲಂಬೋದ ಮುಕ್ತ ಅಂತರರಾಷ್ಟ್ರೀಯ ವಿವಿ(ಒಐಯು)ಯು ಸಾಹಿತ್ಯ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಕೊಡುಗೆಗಾಗಿ ಪೋಖ್ರಿಯಾಲ್ ಅವರಿಗೆ ಎರಡು ಡಾಕ್ಟರೇಟ್ ಪದವಿಗಳನ್ನು ಪ್ರದಾನಿಸಿತ್ತು. ಆದರೆ ಒಐಯು ಶ್ರೀಲಂಕಾದಲ್ಲಿ ವಿದೇಶಿ ವಿವಿ ಅಥವಾ ದೇಶಿಯ ವಿವಿಯಾಗಿ ನೋಂದಣಿಯನ್ನು ಹೊಂದಿಲ್ಲ ಎಂದು ಶ್ರೀಲಂಕಾ ಯುಸಿಸಿಯು ದೃಢಪಡಿಸಿದೆ ಎಂದು ವರದಿಯು ತಿಳಿಸಿದೆ.

ದೇಶದಲ್ಲಿ ಶಿಕ್ಷಣದ ಮಟ್ಟವನ್ನು ಎತ್ತರಿಸುವ ಜವಾಬ್ದಾರಿಯನ್ನು ಹೊಂದಿರುವ ವ್ಯಕ್ತಿ ಪ್ರಶ್ನಾರ್ಹ ದಾಖಲೆಗಳನ್ನು ಹೊಂದಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಲವರು ಅಚ್ಚರಿಯನ್ನು ವ್ಯಕ್ತಪಡಿಸಿದ್ದಾರೆ. ಪೋಖ್ರಿಯಾಲ್‌ರ ದಾಖಲೆಗಳಲ್ಲಿ ಎರಡು ಜನ್ಮ ದಿನಾಂಕಗಳಿರುವುದನ್ನೂ ಬಹಳಷ್ಟು ಜನರು ಬೆಟ್ಟು ಮಾಡಿದ್ದಾರೆ.

‘ಭಾರತದ ನೂತನ ಶಿಕ್ಷಣ ಸಚಿವರು ಶ್ರೀಲಂಕಾದ ನಕಲಿ ವಿವಿಯಿಂದ ಎರಡು ನಕಲಿ ಪದವಿಗಳನ್ನು ಹೊಂದಿದ್ದಾರೆ, ಇದಕ್ಕೂ ಮಿಗಿಲಾಗಿ ಅವರು ಎರಡು ಜನ್ಮ ದಿನಾಂಕಗಳನ್ನು ಹೊಂದಿದ್ದಾರೆ ’ಎಂದು ಟ್ವೀಟೊಂದು ಕುಟುಕಿದೆ.

ಆದರೆ ಪೋಖ್ರಿಯಾಲ್ ಅವರು ಜನ್ಮ ದಿನಾಂಕ ವಿವಾದದ ಬಗ್ಗೆ ಹೇಳಿಕೆಯನ್ನು ಹೊರಡಿಸಿ,ಹಿಂದು ಜಾತಕದಿಂದಾಗಿ ಜನ್ಮ ದಿನಾಂಕಗಳು ಬೇರೆಯಾಗಿವೆ ಎಂದು ಸಮಜಾಯಿಷಿ ನೀಡಿದ್ದಾರೆ.

ಸ್ಮೃತಿ ಇರಾನಿ ಬಳಿಕ ಪೋಖ್ರಿಯಾಲ್ ಅವರು ನಕಲಿ ಪದವಿಗಳ ಆರೋಪ ಹೊತ್ತ ಎರಡನೇ ಶಿಕ್ಷಣ ಸಚಿವರಾಗಿದ್ದಾರೆ ಎಂದು ಹಲವರು ಬೇಗುದಿಯನ್ನು ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ಶಿಕ್ಷಣವಿಲ್ಲದಿದ್ದರೂ ಆಡಳಿತದ ಉತ್ತಮ ಅನುಭವವಿರುವ ಯಾರೇ ಆದರೂ ಮಾನವ ಸಂಪನ್ಮೂಲ ಸಚಿವಾಲಯವನ್ನು ನಿರ್ವಹಿಸಬಲ್ಲರು. ಆದರೆ ಖಂಡಿತವಾಗಿಯೂ ನಕಲಿ ಪದವಿ ಹೊಂದಿರುವ ವ್ಯಕ್ತಿಯಲ್ಲ,ಇದು ವಿವಿಗಳಲ್ಲಿ ವ್ಯಾಸಂಗ ಮಾಡುವವರನ್ನು ಅಣಕಿಸುತ್ತದೆೆ ಎಂದೂ ಟ್ವೀಟ್‌ಗಳು ಹರಿದಾಡಿವೆ.

ಪೋಖ್ರಿಯಾಲ್ ಹಿಂದೆಯೂ ತನ್ನ ಅವೈಜ್ಞಾನಿಕ ಹೇಳಿಕೆಗಳಿಂದಾಗಿ ಸುದ್ದಿಯಾಗಿದ್ದರು. ಜ್ಯೋತಿಷ್ಯ ಶಾಸ್ತ್ರವು ವಿಜ್ಞಾನಕ್ಕಿಂತ ಹೆಚ್ಚಿನ ಸ್ಥಾನದಲ್ಲಿರಬೇಕು. ಜ್ಯೋತಿಷ್ಯ ಶಾಸ್ತ್ರದ ಎದುರು ವಿಜ್ಞಾನವು ಕುಬ್ಜವಾಗಿದೆ. ನಾವಿಂದು ಪರಮಾಣು ವಿಜ್ಞಾನದ ಬಗ್ಗೆ ಮಾತನಾಡುತ್ತಿದ್ದೇವೆ, ಆದರೆ ಕಣಾದ ಋಷಿಗಳು ಒಂದು ಲಕ್ಷ ವರ್ಷಗಳ ಹಿಂದೆಯೇ ಪರಮಾಣು ಪರೀಕ್ಷೆಯನ್ನು ನಡೆಸಿದ್ದರು ಎಂದು 2014ರಲ್ಲಿ ಹೇಳುವ ಮೂಲಕ ಅವರು ಎಲ್ಲರನ್ನೂ ದಂಗು ಬಡಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X