Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ಸರಕಾರದ 22 ಸಚಿವರ ವಿರುದ್ಧ...

ಮೋದಿ ಸರಕಾರದ 22 ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಗಳು

ವಾರ್ತಾಭಾರತಿವಾರ್ತಾಭಾರತಿ1 Jun 2019 8:46 PM IST
share
ಮೋದಿ ಸರಕಾರದ 22 ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಗಳು

ಹೊಸದಿಲ್ಲಿ, ಜೂ.1: ಗುರುವಾರ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 56 ಸಚಿವರಲ್ಲಿ 51 ಮಂದಿ ಕೋಟ್ಯಾಧೀಶ್ವರರು, 22 ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ ಎಂದು ವರದಿಯೊಂದು ತಿಳಿಸಿದೆ.

58 ಸಚಿವರಲ್ಲಿ ಲೋಕಸಭಾ ಸದಸ್ಯರಾಗಿರುವ 56 ಸಚಿವರ ವಿವರವನ್ನು ಚುನಾವಣಾ ಕಾವಲುಪಡೆ ‘ಅಸೋಸಿಯೇಷನ್ ಫಾರ್ ಡೆಮಾಕ್ರಾಟಿಕ್ ರಿಫಾರ್ಮ್ಸ್(ಎಡಿಆರ್) ಬಿಡುಗಡೆಗೊಳಿಸಿದೆ.

ಈಗ ಸಂಸತ್ತಿನ ಸದಸ್ಯರಾಗಿಲ್ಲದ ರಾಮ್‌ವಿಲಾಸ್ ಪಾಸ್ವಾನ್ ಮತ್ತು ಎಸ್. ಜೈಶಂಕರ್ ಅವರ ಕುರಿತ ವಿವರ ಇದರಲ್ಲಿ ಸೇರಿಲ್ಲ. ಸಚಿವ ಸಂಪುಟದ ಶೇ.91 ಅಂದರೆ 51 ಸಚಿವರು ಕೋಟ್ಯಾಧಿಪತಿಗಳಾಗಿದ್ದು ಇವರು ಸರಾಸರಿ 14.72 ಕೋಟಿ ರೂ. ಆಸ್ತಿಯನ್ನು ಹೊಂದಿದ್ದಾರೆ. ಗೃಹ ಸಚಿವ ಅಮಿತ್ ಶಾ, ರೈಲ್ವೇ ಸಚಿವ ಪಿಯೂಷ್ ಗೋಯಲ್ ಮತ್ತು ಶಿರೋಮಣಿ ಅಕಾಲಿದಳದ ನಾಯಕಿ, ಆಹಾರ ಸಂಸ್ಕರಣೆ ಮತ್ತು ಉದ್ಯಮ ಸಚಿವೆ ಹರ್‌ಸಿಮ್ರತ್ ಕೌರ್ ಬಾದಲ್ ಸಹಿತ ನಾಲ್ವರು 40 ಕೋಟಿ ರೂ.ಗಿಂತಲೂ ಹೆಚ್ಚಿನ ಆಸ್ತಿ ಹೊಂದಿದ್ದಾರೆ.

ಪ್ರತಾಪ್‌ಚಂದ್ರ ಸಾರಂಗಿ, ಕೈಲಾಶ್ ಚೌಧರಿ ಮತ್ತು ರಾಮೇಶ್ವರ್ ತೇಲಿ ಸಹಿತ ಐವರು ಸಚಿವರು ಮಾತ್ರ 1 ಕೋಟಿ ರೂ.ಗಿಂತಲೂ ಕಡಿಮೆ ಆಸ್ತಿ ಹೊಂದಿದ್ದಾರೆ . 11 ಸಚಿವರು 41ರಿಂದ 50 ವರ್ಷದವರಾಗಿದ್ದರೆ 45 ಸಚಿವರು 51ರಿಂದ 70 ವರ್ಷದವರಾಗಿದ್ದಾರೆ. 8 ಸಚಿವರು 10ರಿಂದ 12ನೇ ತರಗತಿವರೆಗಿನ ವಿದ್ಯಾರ್ಹತೆ ಹೊಂದಿದ್ದರೆ, 47 ಸಚಿವರು ಪದವೀಧರರು. ಓರ್ವ ಸಚಿವ ಡಿಪ್ಲೊಮ ಪದವೀಧರ. ಸಚಿವರು ಸಲ್ಲಿಸಿರುವ ಅಫಿದಾವಿತ್‌ನ ಆಧಾರದಲ್ಲಿ ಈ ಮಾಹಿತಿ ನೀಡಲಾಗಿದೆ. 56 ಸಚಿವರಲ್ಲಿ 22 ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದ್ದರೆ, ಇದರಲ್ಲಿ 16 ಸಚಿವರ ವಿರುದ್ಧ ಗಂಭೀರ ಕ್ರಿಮಿನಲ್ ಪ್ರಕರಣ( ಕೊಲೆ ಯತ್ನ, ಕೋಮು ಸೌಹಾರ್ದತೆಗೆ ಧಕ್ಕೆ, ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಇತ್ಯಾದಿ) ದಾಖಲಾಗಿದೆ ಎಂದು ಎಡಿಎಆರ್ ವರದಿ ತಿಳಿಸಿದೆ.

ಕಳೆದ ಲೋಕಸಭೆಗೆ ಹೋಲಿಸಿದರೆ ಈ ಬಾರಿಯ ಸಚಿವ ಸಂಪುಟದಲ್ಲಿ ಕ್ರಿಮಿನಲ್ ಹಿನ್ನಲೆಯುಳ್ಳ ಸಚಿವರ ಪ್ರಮಾಣದಲ್ಲಿ ಶೇ.8 ಮತ್ತು ಗಂಭೀರ ಕ್ರಿಮಿನಲ್ ಹಿನ್ನಲೆಯುಳ್ಳ ಸಚಿವರ ಪ್ರಮಾಣದಲ್ಲಿ ಶೇ.12 ಏರಿಕೆಯಾಗಿದೆ. ಆರು ಸಚಿವರು ಧರ್ಮ, ಜಾತಿ, ಹುಟ್ಟಿದ ಸ್ಥಳ, ಭಾಷೆ ಇತ್ಯಾದಿಗಳ ಆಧಾರದಲ್ಲಿ ವಿವಿಧ ಗುಂಪುಗಳ ಮಧ್ಯೆ ದ್ವೇಷವನ್ನು ಉತ್ತೇಜಿಸಿದ ಪ್ರಕರಣ ಎದುರಿಸುತ್ತಿದ್ದಾರೆ. ಗಿರಿರಾಜ ಸಿಂಗ್ ಮತ್ತು ಅಶ್ವಿನಿ ಕುಮಾರ್ ಚೌಬೆ ಸೇರಿದಂತೆ ಮೂವರ ವಿರುದ್ಧ ಚುನಾವಣಾ ನೀರಿ ಸಂಹಿತೆ ಉಲ್ಲಂಘಿಸಿದ ಆರೋಪವಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X