Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ವಿದ್ಯಾರ್ಥಿಗಳ ಕುಂಚದಲ್ಲಿ ಅರಳಿದ...

ಉಡುಪಿ: ವಿದ್ಯಾರ್ಥಿಗಳ ಕುಂಚದಲ್ಲಿ ಅರಳಿದ ಪರಿಸರ ಜಾಗೃತಿ

ವಾರ್ತಾಭಾರತಿವಾರ್ತಾಭಾರತಿ1 Jun 2019 9:24 PM IST
share
ಉಡುಪಿ: ವಿದ್ಯಾರ್ಥಿಗಳ ಕುಂಚದಲ್ಲಿ ಅರಳಿದ ಪರಿಸರ ಜಾಗೃತಿ

ಉಡುಪಿ, ಜೂ.1:  ಒಂದು ಚಿತ್ರ ಸಾವಿರ ಪದಗಳು ಹೇಳುವ ಕಥೆಯನ್ನು ಹೇಳುತ್ತದೆ ಎಂಬ ಮಾತೊಂದಿದೆ. ಶನಿವಾರ ಒಳಕಾಡು ಸರಕಾರಿ ಸಂಯುಕ್ತ ಪ್ರೌಢ ಶಾಲೆಯಲ್ಲಿ ನಡೆದ ಚಿತ್ರಕಲಾ ರ್ಸ್ಪೆಈಮಾತನ್ನುಅಕ್ಷರಶಃನಿಜವಾಗಿಸಿತು.ಶಾಲೆಯನಳಂದಾಸಾಂಗಣದಲ್ಲಿ ವಿದ್ಯಾರ್ಥಿಗಳ ವರ್ಣದಲ್ಲಿ ಅದ್ದಿದ ಕುಂಚದಿಂದ ಅರಳಿದ ಚಿತ್ತಾರಗಳು ಪರಿಸರ ಕಾಳಜಿಯ ಸಂದೇಶವನ್ನು ಎತ್ತಿ ಸಾರುತ್ತಿದ್ದವು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಾಯುಮಾಲಿನ್ಯ ಜಾಗೃತಿ ಮೂಡಿಸುವ ಚಿತ್ರಕಲಾ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ 150 ವಿದ್ಯಾರ್ಥಿಗಳು, ‘ಮಾಲಿನ್ಯ ತಡೆಯಿರಿ ದೇಶ ರಕ್ಷಿಸಿ’, ‘ಗೋ ಗ್ರೀನ್’, ‘ವಾಯು ಮಾಲಿನ್ಯ ತಡೆದು ಶುದ್ದ ಗಾಳಿ ಪಡೆಯಿರಿ’ ಎಂಬ ಸಂದೇಶದ ಜೊತೆಗೆ ವಾಯುಮಾಲಿನ್ಯ ತಡೆಗೆ ಗಿಡಗಳನ್ನು ನೆಟ್ಟು ಪೋಷಿಸಿ, ತಾವೂ ಗಿಡ ನೆಟ್ಟು ಇತರರಿಗೂ ಗಿಡ ನೆಡಲು ಪ್ರೋತ್ಸಾಹಿಸಿ ಎಂಬ ಪರಿಸರ ಕಾಳಜಿಯನ್ನು ತಾವು ಬರೆದ ಬಣ್ಣ ಬಣ್ಣ ಚಿತ್ತಾರಗಳ ಮೂಲಕ ಸಾರಿದರು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಾಯುಮಾಲಿನ್ಯ ಜಾಗೃತಿ ಮೂಡಿಸುವ ಚಿತ್ರಕಲಾ ರ್ಸ್ಪೆಯಲ್ಲಿಜಿಲ್ಲೆಯವಿವಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ 150 ವಿದ್ಯಾರ್ಥಿಗಳು, ‘ಮಾಲಿನ್ಯ ತಡೆಯಿರಿ ದೇಶ ರಕ್ಷಿಸಿ’, ‘ಗೋ ಗ್ರೀನ್’, ‘ವಾಯು ಮಾಲಿನ್ಯ ತಡೆದು ಶುದ್ದ ಗಾಳಿ ಪಡೆಯಿರಿ’ ಎಂಬ ಸಂದೇಶದ ಜೊತೆಗೆ ವಾಯುಮಾಲಿನ್ಯ ತಡೆಗೆ ಗಿಡಗಳನ್ನು ನೆಟ್ಟು ಪೋಷಿಸಿ, ತಾವೂ ಗಿಡ ನೆಟ್ಟು ಇತರರಿಗೂ ಗಿಡ ನೆಡಲು ಪ್ರೋತ್ಸಾಹಿಸಿ ಎಂಬ ಪರಿಸರ ಕಾಳಜಿಯನ್ನು ತಾವು ಬರೆದ ಬಣ್ಣ ಬಣ್ಣದ ಚಿತ್ತಾರಗಳ ಮೂಲಕ ಸಾರಿದರು. ಶನಿವಾರ ನಡೆದ ಚಿತ್ರಕಲಾ ಸ್ಪರ್ಧೆಯು 3 ವಿಭಾಗಗಳಲ್ಲಿ ನಡೆದಿದ್ದು, ಪ್ರಾಥಮಿಕ ವಿಭಾಗದಲ್ಲಿ 1ರಿಂದ 4, ಮಾಧ್ಯಮಿಕ ವಿಭಾಗದಲ್ಲಿ 5ರಿಂದ 7 ಹಾಗೂ ಪ್ರೌಢ ಶಾಲಾ ವಿಭಾಗದಲ್ಲಿ 8ರಿಂದ 10ನೇ ತರಗತಿಯ ವಿದ್ಯಾರ್ಥಿ ಗಳು ಭಾಗವಹಿಸಿದ್ದರು. ಜೂ.5ರಂದು ಜಿಲ್ಲಾಡಳಿತ ವತಿಯಿಂದ ಪಡುಬಿದ್ರೆಯ ಬಂಟರ ಭವನದಲ್ಲಿ ನಡೆಯುವ ವಿಶ್ವ ಪರಿಸರ ದಿನಾಚರಣೆಯಂದು ಈ ಚಿತ್ರಕಲಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಗುವುದು.

ಚಿತ್ರಕಲಾ ಸ್ಪರ್ಧೆಯ ಬಗ್ಗೆ ಮಾಹಿತಿ ನೀಡಿದ ಉಡುಪಿ ಜಿಲ್ಲಾ ಪರಿಸರ ಅಧಿಕಾರಿ ಡಾ.ಎಚ್.ಲಕ್ಷ್ಮೀಕಾಂತ್, ಚಿತ್ರಕಲೆ ಮೂಲಕ ಮಕ್ಕಳಲ್ಲಿ ಪರಿಸರ ಕಾಳಜಿ ಮೂಡಿಸುವ ಉದ್ದೇಶದಿಂದ ವಾಯುಮಾಲಿನ್ಯ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕ್ರಮ ಯಶಸ್ವಿಯಾಗಿದೆ. ಜಿಲ್ಲೆಯ ಎಲ್ಲಾ ಮಕ್ಕಳಿಗೂ ಅವಕಾಶ ಸಿಗಬೇಕು ಎನ್ನುವ ಉದ್ದೇಶದಿಂದ ಮುಂದಿನ ದಿನಗಳಲ್ಲಿ ಕಾರ್ಕಳ, ಹೆಬ್ರಿಗಳಲ್ಲಿ ಈ ರೀತಿ ಕಾರ್ಯಕ್ರಮ ನಡೆಸುವ ಉದ್ದೇಶವಿದೆ ಎಂದರು.

ಜೂನ್ 5ರಂದು ನಡೆಯುವ ವಿಶ್ವ ಪರಿಸರ ದಿನಾಚರಣೆಯಂದು ಸ್ವಚ್ಚತೆ ಹಾಗೂ ಇತರ ಪರಿಸರಕ್ಕೆ ಪೂರಕವಾದ ಕೆಲಸಗಳಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಂಡ ಉಡುಪಿ ವ್ಯಕ್ತಿಗಳನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ, ಉಡುಪಿ, ಕುಂದಾಪುರ, ಕಾರ್ಕಳ ತಾಲೂಕಿನ 3 ಗ್ರಾಪಂಗಳಲ್ಲಿರುವ ಪರಿಸರ ಕಾಳಜಿ ಹೊಂದಿರುವ ವ್ಯಕ್ತಿಗಳನ್ನು ಹಾಗೂ ಪರಿಸರ ಕಾಳಿಜಿಗೆ ಪೂರಕವಾಗಿ ಕಾರ್ಯ ನಿರ್ವಹಿಸುವ ಶಾಲೆಗಳನ್ನು ಗೌರವಿಸುವ ಯೋಜನೆಯನ್ನೂ ಹಮ್ಮಿಕೊಳ್ಳಲಾಗಿದೆ ಎಂದು ಲಕ್ಷ್ಮೀಕಾಂತ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X