Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯಕ್ಕೆ...

ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ1 Jun 2019 9:44 PM IST
share
ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ಸಲ್ಲಿಕೆ

ಹೊಸದಿಲ್ಲಿ,ಜೂ 1: ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ರಾಷ್ಟ್ರಿಯ ಶಿಕ್ಷಣ ನೀತಿ 2019ರ ಕರಡನ್ನು ಬಿಡುಗಡೆಗೊಳಿಸಿದೆ. ಮಾಜಿ ಇಸ್ರೋ ಅಧ್ಯಕ್ಷ ಕೆ.ಕಸ್ತೂರಿ ರಂಗನ್ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ಸಮಿತಿಯು ಶುಕ್ರವಾರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ ಪೋಖ್ರಿಯಾಲ್ ಮತ್ತು ಸಹಾಯಕ ಸಚಿವ ಸಂಜಯ ಶಾಮರಾವ ಧೋತ್ರೆ ಅವರಿಗೆ ಕರಡು ವರದಿಯನ್ನು ಸಲ್ಲಿಸಿತ್ತು. ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವನ್ನು ಶಿಕ್ಷಣ ಸಚಿವಾಲಯ ಎಂದು ಮರುನಾಮಕರಣಗೊಳಿಸುವಂತೆ ಸಮಿತಿಯು ತನ್ನ ವರದಿಯಲ್ಲಿ ಪ್ರಸ್ತಾಪಿಸಿದೆ.

ಮಕ್ಕಳ ಕಾಳಜಿ ಮತ್ತು ಶಿಕ್ಷಣವನ್ನು ಶಾಲಾ ಶಿಕ್ಷಣದ ಅಖಂಡ ಭಾಗವನ್ನಾಗಿಸಿಕೊಂಡು ಪಠ್ಯಕ್ರಮ ಮತ್ತು ಬೋಧನ ಕ್ರಮದಲ್ಲಿ ಆಮೂಲಾಗ್ರ ಬದಲಾವಣೆಗೆ ಸಮಿತಿಯು ಶಿಫಾರಸು ಮಾಡಿದೆ. 2009ರ ಶಿಕ್ಷಣ ಹಕ್ಕು ಕಾಯ್ದೆಯನ್ನು 3ರಿಂದ 18 ವರ್ಷದವರೆಗಿನ ಮಕ್ಕಳಿಗೆ ಅನ್ವಯವಾಗುವಂತೆ ವಿಸ್ತರಿಸಬೇಕು ಎಂದೂ ಸಮಿತಿಯು ಶಿಫಾರಸು ಮಾಡಿದೆ.

ಶಾಲಾ ಶಿಕ್ಷಣ ವ್ಯವಸ್ಥೆಯನ್ನು ಈಗಿನ 10+2ರ ಬದಲಿಗೆ 5+3+3+4ರ ವಿನ್ಯಾಸದಲ್ಲಿ ಬದಲಿಸಿ ಶಾಲಾ ಪಠ್ಯಕ್ರಮ ಮತ್ತು ಬೋಧನ ಕ್ರಮವನ್ನು ಪುನರ್‌ರೂಪಿಸುವಂತೆ ಸಮಿತಿಯು ಸಲಹೆ ನೀಡಿದೆ. ಅದು ತನ್ನ ವರದಿಯಲ್ಲಿ ಹೇಳಿರುವಂತೆ ಐದು ವರ್ಷಗಳು ಪ್ರಾಥಮಿಕ ಪೂರ್ವ,ಗ್ರೇಡ್ 1 ಮತ್ತು ಗ್ರೇಡ್ 2 ಸೇರಿದಂತೆ ಬುನಾದಿ ಹಂತವಾಗಿದ್ದು, ನಂತರದ ಮೂರು ವರ್ಷ ಗ್ರೇಡ್ 3,4 ಮತ್ತು 5 ಸೇರಿದಂತೆ ಸಿದ್ಧತಾ ಹಂತವಾಗಿರುತ್ತದೆ. ನಂತರದ ಮೂರು ವರ್ಷ ಗ್ರೇಡ್ 6,7 ಮತ್ತು 8ರೊಂದಿಗೆ ಮಧ್ಯದ ಹಂತವಾಗಿರುತ್ತದೆ ಮತ್ತು ಗ್ರೇಡ್ 9ರಿಂದ ಗ್ರೇಡ್ 12ರ ವರೆಗಿನ ನಾಲ್ಕು ವರ್ಷ ಉನ್ನತ ಹಂತವಾಗಿರುತ್ತದೆ.

ಶಾಲಾ ಶಿಕ್ಷಣ ಪಠ್ಯಕ್ರಮದಲ್ಲಿ ವಿಷಯಗಳ ಹೊರೆಯನ್ನು ಕಡಿಮೆ ಮಾಡುವಂತೆಯೂ ವರದಿಯು ಶಿಫಾರಸು ಮಾಡಿದೆ.

ಬೋಧನ ಶಿಕ್ಷಣದಲ್ಲಿ ಬೃಹತ್ ಪರಿವರ್ತನೆಗೆ ಶಿಫಾರಸು ಮಾಡಿರುವ ನೂತನ ನೀತಿಯು ಕಳಪೆ ಗುಣಮಟ್ಟದ ಶಿಕ್ಷಕ ಶಿಕ್ಷಣ ತರಬೇತಿ ಸಂಸ್ಥೆಗಳನ್ನು ಮುಚ್ಚುವಂತೆ ಮತ್ತು ಎಲ್ಲ ಬೋಧನ ಶಿಕ್ಷಣ ಕಾರ್ಯಕ್ರಮಗಳನ್ನು ಬೃಹತ್ ಬಹುವಿಭಾಗೀಯ ವಿವಿಗಳು ಮತ್ತು ಕಾಲೇಜುಗಳಿಗೆ ವರ್ಗಾಯಿಸುವಂತೆ ಸೂಚಿಸಿದೆ. ನಾಲ್ಕು ವರ್ಷಗಳ ಸಮಗ್ರ ಹಂತ-ನಿದಿರ್ಷ್ಟ ಬಿ.ಎಡ್ ಕಾರ್ಯಕ್ರಮವು ಅಂತಿಮವಾಗಿ ಶಿಕ್ಷಕರಿಗೆ ಕನಿಷ್ಠ ಪದವಿ ವಿದ್ಯಾರ್ಹತೆಯಾಗಲಿದೆ.

ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಮೂರು ವಿಧಗಳಲ್ಲಿ ಪುನರ್‌ರಚಿಸುವಂತೆ ವರದಿಯು ಪ್ರಸ್ತಾಪಿಸಿದೆ. ಈ ಪುನರ್‌ರಚನೆಗೆ ಮಿಷನ್ ನಲಂದಾ ಮತ್ತು ಮಿಷನ್ ತಕ್ಷಶಿಲಾ ಚಾಲಕ ಶಕ್ತಿಯಾಗಲಿವೆ.

ಎಲ್ಲ ಶೈಕ್ಷಣಿಕ ಉಪಕ್ರಮಗಳ ಸಮಗ್ರಅನುಷ್ಠಾನಕ್ಕಾಗಿ ಮತ್ತು ಕೇಂದ್ರ ಹಾಗೂ ರಾಜ್ಯಗಳ ನಡುವೆ ಪ್ರಯತ್ನಗಳ ಸಮನ್ವಯಕ್ಕಾಗಿ ರಾಷ್ಟ್ರೀಯ ಶಿಕ್ಷಣ ಆಯೋಗದ ಸ್ಥಾಪನೆಯನ್ನೂ ವರದಿಯು ಶಿಫಾರಸು ಮಾಡಿದೆ. ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಸದೃಢ ಸಂಶೋಧನಾ ಸಂಸ್ಕೃತಿಯನ್ನು ಸೃಷ್ಟಿಸಲು ಮತ್ತು ಸಂಶೋಧನಾ ಸಾಮರ್ಥ್ಯವನ್ನು ಬೆಳೆಸಲು ರಾಷ್ಟ್ರೀಯ ಸಂಶೋಧನಾ ಪ್ರತಿಷ್ಠಾನದ ಸ್ಥಾಪನೆಯನ್ನೂ ಪ್ರಸ್ತಾಪಿಸಲಾಗಿದೆ.

ಉನ್ನತ ಶಿಕ್ಷಣ ನಿಯಂತ್ರಣ ವ್ಯವಸ್ಥೆಯಲ್ಲ್ಲಿ ಪ್ರಮುಖ ಬದಲಾವಣೆಗಳನ್ನು ಸೂಚಿಸಿರುವ ವರದಿಯು,ವೃತ್ತಿಪರ ಶಿಕ್ಷಣ ಸೇರಿದಂತೆ ಉನ್ನತ ಶಿಕ್ಷಣದ ಏಕೈಕ ನಿಯಂತ್ರಣ ಸಂಸ್ಥೆಯಾಗಿ ರಾಷ್ಟ್ರೀಯ ಉನ್ನತ ಶಿಕ್ಷಣ ನಿಯಂತ್ರಣ ಪ್ರಾಧಿಕಾರವನ್ನು ಸ್ಥಾಪಿಸುವಂತೆಯೂ ಶಿಫಾರಸು ಮಾಡಿದೆ.

ವೃತ್ತಿಪರ ಶಿಕ್ಷಣ ಸೇರಿದಂತೆ ಇಡೀ ಉನ್ನತ ಶಿಕ್ಷಣ ಕ್ಷೇತ್ರದಾದ್ಯಂತ ಅಭಿವೃದ್ಧಿ ಅನುದಾನಗಳು ಮತ್ತ್ತು ಫೆಲೋಷಿಪ್‌ಗಳನ್ನು ವಿತರಿಸಲು ವಿಶ್ವವಿದ್ಯಾನಿಲಯ ಅನುದಾನ ಆಯೋಗ(ಯುಜಿಸಿ)ವನ್ನು ಉನ್ನತ ಶಿಕ್ಷಣ ಅನುದಾನ ಮಂಡಳಿಯನ್ನಾಗಿ ಪರಿವರ್ತಿಸುವಂತೆ ನೂತನ ನೀತಿಯಲ್ಲಿ ಸೂಚಿಸಲಾಗಿದೆ.

ಖಾಸಗಿ ಮತ್ತು ಸರಕಾರಿ ಶಿಕ್ಷಣ ಸಂಸ್ಥೆಗಳನ್ನು ಸಮಾನವಾಗಿ ಪರಿಗಣಿಸಲಾಗುವುದು ಮತ್ತು ಶಿಕ್ಷಣವು ಲಾಭರಹಿತ ಚಟುವಟಿಕೆಯಾಗಿ ಉಳಿಯಲಿದೆ ಎಂದೂ ವರದಿಯು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X