Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರಕಾರದಿಂದ ದಾಸಸಾಹಿತ್ಯ ನಿರ್ಲಕ್ಷ:...

ಸರಕಾರದಿಂದ ದಾಸಸಾಹಿತ್ಯ ನಿರ್ಲಕ್ಷ: ಪ್ರೊ.ಎ.ವಿ.ನಾವಡ

ವಾರ್ತಾಭಾರತಿವಾರ್ತಾಭಾರತಿ1 Jun 2019 9:54 PM IST
share
ಸರಕಾರದಿಂದ ದಾಸಸಾಹಿತ್ಯ ನಿರ್ಲಕ್ಷ: ಪ್ರೊ.ಎ.ವಿ.ನಾವಡ

ಉಡುಪಿ, ಜೂ.1: ಶರಣ ವಚನ ಸಾಹಿತ್ಯ ಸರಕಾರದ ಬೆಂಬಲದಿಂದ ನಾಡಿನ ವಿದ್ವಾಂಸರಿಂದ ಅಧ್ಯಯನಕ್ಕೆ ಒಳಪಟ್ಟಿದೆ. ಆದರೆ ದಾಸ ಸಾಹಿತ್ಯ ನಿರ್ಲಕ್ಷಕ್ಕೆ ಒಳಗಾಗಿದ್ದು, ಪ್ರಚಾರಕ್ಕೆ ಆದ್ಯತೆ ನೀಡದ ಕಾರಣ ಪಾರಂಪರಿಕ ಹಾಡುಗಾರಿಕೆ ನಷ್ಟವಾಗುತ್ತಿದೆ ಎಂದು ಹಂಪಿ ವಿವಿ ನಿವೃತ್ತ ಪ್ರಾಧ್ಯಾಪಕ ಪ್ರೊ. ಎ.ವಿ. ನಾವಡ ಅಭಿಪ್ರಾಯಪಟ್ಟಿದ್ದಾರೆ.

ಪರ್ಯಾಯ ಪಲಿಮಾರು ಮಠದ ವತಿಯಿಂದ ಮಠದ ಗರ್ಭಗುಡಿಗೆ ನಿರ್ಮಾಣಗೊಂಡ ಸುವರ್ಣ ಗೋಪುರ ಸಮರ್ಪಣೋತ್ಸವ ಅಂಗವಾಗಿ ರಾಜಾಂಗಣದಲ್ಲಿ ಶುಕ್ರವಾರ ನಡೆದ ದಾಸ ಸಾಹಿತ್ಯ ಗೋಪುರಮ್ ಚಿಂತನಾ ಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಮನೆಗಳಲ್ಲಿರುವ ಹಸ್ತಪ್ರತಿಗಳ ಸಂಗ್ರಹ, ದಾಸ ಸಾಹಿತ್ಯಕ್ಷೇತ್ರದಲ್ಲಿ ಸವಾಲಿನ ಕಾರ್ಯವಾಗಿದೆ. ಸ್ವಾತಂತ್ರ ಪೂರ್ವದಲ್ಲಿ ಉಡುಪಿಯಲ್ಲಿ ಪಾವಂಜೆ ಗುರುರಾಯರು ಈ ಕಾರ್ಯವನ್ನು ಮಾಡಿ, ಅನೇಕ ದಾಸರ ಪದಗಳನ್ನು ಸಂಗ್ರಹಿಸಿ ಪ್ರಕಟಿಸಿದ್ದಾರೆ. ಅವರ ಬಳಿಕ ಈ ಕೆಲಸ ಸ್ಥಗಿತವಾಗಿದೆ. ಸರಕಾರ ಕನಕದಾಸ ಸಂಶೋಧನ ಪೀಠಗಳನ್ನು ಅನೇಕ ವಿವಿಗಳಲ್ಲಿ ಸ್ಥಾಪಿಸಿದೆ. ಆದರೆ ಸಮಗ್ರ ದಾಸ ಸಾಹಿತ್ಯ ಸಂಶೋಧನೆಯತ್ತ ಗಮನಹರಿಸಿಲ್ಲ ಎಂದವರು ನುಡಿದರು.

ಹಂಪಿ ವಿವಿಯಲ್ಲಿ ಅನೇಕ ಸಂಶೋಧನಾ ಪೀಠಗಳಿಗೆ ಸರಕಾರ ಕೋಟಿ ಕೋಟಿ ರೂ. ಅನುದಾನ ನೀಡುತ್ತಿದೆ. ಪುರಂದರ ಪೀಠಕ್ಕೆ ಮಾತ್ರ 10 ಲಕ್ಷ ರೂ. ನೀಡಿದೆ. ಇದರಿಂದ ಹೆಚ್ಚಿನ ಪ್ರಯೋಜನವಿಲ್ಲ. ಈ ಬಗ್ಗೆ ಸರಕಾರದಿಂದ ಹೆಚ್ಚಿನ ನಿರೀಕ್ಷೆಯೂ ಇಲ್ಲ. ಹೀಗಾಗಿ ದಾಸ ಸಾಹಿತ್ಯ ಅಧ್ಯಯನಕ್ಕೆ ಮಾಧ್ವ ಮಠಗಳು ಮುಂದಾಗಬೇಕು. ಇದಕ್ಕೆ ಪಾರಂಪರಿಕ ಪಂಡಿತರೂ, ಆಧುನಿಕ ಶಾಸ್ತ್ರ ಪರಿಣತರೂ ಅಗತ್ಯವಿದೆ ಎಂದರು.

ಡಾ.ಕಬ್ಬಿನಾಲೆ ವಸಂತ ಭಾರದ್ವಾಜ್ ತಮ್ಮ ಆಶಯ ಭಾಷಣದಲ್ಲಿ ದಾಸ ಸಾಹಿತ್ಯ ಸರಳ ವ್ಯಾಖ್ಯಾನ, ಅನುಸಂಧಾನವನ್ನು ಜನಮನಕ್ಕೆ ತಿಳಿಸುವ ಕಾರ್ಯ ಮಾಡುತ್ತಿದೆ. ಸಾಹಿತ್ಯದ ಬೇರೆ ಬೇರೆ ಭಾವಗಳನ್ನು ಮೂಡಿಸುವ ಕಾರ್ಯವನ್ನು ಹರಿದಾಸರು ಮಾಡಿದ್ದಾರೆ. ಜನರಿಗೆ ಸರಳವಾಗಿ ಅಧ್ಯಾತ್ಮವನ್ನು ತಿಳಿಸಿದ್ದಾರೆ. ಹೀಗಾಗಿ ವಿಜಯನಗರ ವೈಭವದ ಕಾಲದಲ್ಲಿಯೂ ಪುರಂದರ ದಾಸರು ಉತ್ತಮ ಪ್ರಭುತ್ವ ಲೊಳಲೊಟ್ಟೆ ಎಂದು ಹಾಡಿದ್ದಾರೆ ಎಂದರು.

ಅದಮಾರು ಕಿರಿಯ ಯತಿಗಳಾದ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ಮಾತನಾಡಿ, ದಾಸ ಸಾಹಿತ್ಯದ ಜತೆಗೆ ವ್ಯಾಸ ಸಾಹಿತ್ಯವನ್ನೂ ಅಧ್ಯಯನ ಮಾಡಿದರೆ ಮಾತ್ರ ಶಾಸ್ತ್ರಗಳ ಅರಿವು ಲಭಿಸುತ್ತದೆ. ವಾದಿರಾಜ ಕೃತಿಗಳ ಬಗ್ಗೆ ಸಂಶೋಧನೆ ಮತ್ತು ಪ್ರಕಟಣೆಗೆ ಅದಮಾರು ಮಠ ಮತ್ತು ಪಲಿಮಾರು ಮಠ ಸದಾ ಸಿದ್ಧವಿದೆ ಎಂದರು.

ಅದಮಾರು ಕಿರಿಯ ಯತಿಗಳಾದ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ಮಾತನಾಡಿ, ದಾಸ ಸಾಹಿತ್ಯದ ಜತೆಗೆ ವ್ಯಾಸ ಸಾಹಿತ್ಯವನ್ನೂ ಅ್ಯಯನಮಾಡಿದರೆಮಾತ್ರಶಾಸ್ತ್ರಗಳಅರಿವುಲಭಿಸುತ್ತದೆ.ವಾದಿರಾಜಕೃತಿಗಳಬಗ್ಗೆಸಂಶೋನೆ ಮತ್ತು ಪ್ರಕಟಣೆಗೆ ಅದಮಾರು ಮಠ ಮತ್ತು ಪಲಿಮಾರು ಮಠ ಸದಾ ಸಿದ್ಧವಿದೆ ಎಂದರು. ಹಿರಿಯ ವಿದ್ವಾಂಸರಾದ ಬೆಂಗಳೂರಿನ ಡಾ. ಮುರಳೀಧರ ಎಚ್.ಎನ್., ಮೈಸೂರಿನ ಡಾ.ಎನ್.ಕೆ. ರಾಮಶೇಷನ್, ಡಾ.ಎಂ. ಶ್ರೀನಿವಾಸಾಚಾರ್ಯ, ಪ್ರಾಧ್ಯಾಪಕ ಡಾ. ಧನಂಜಯ ಕುಂಬ್ಳೆ ಮಂಗಳೂರು ಪ್ರಬಂಧ ಮಂಡಿಸಿದರು.

ಡಾ. ಕೊರ್ಲಹಳ್ಳಿ ವೆಂಕಟೇಶ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X