Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆದ್ಯತಾ ವ್ಯಾಪಾರ ಸ್ಥಾನಮಾನ...

ಆದ್ಯತಾ ವ್ಯಾಪಾರ ಸ್ಥಾನಮಾನ ರದ್ದುಗೊಳಿಸಿದ ಅಮೆರಿಕದ ಕ್ರಮ ದುರದೃಷ್ಟಕರ: ಭಾರತ

ವಾರ್ತಾಭಾರತಿವಾರ್ತಾಭಾರತಿ1 Jun 2019 9:56 PM IST
share

ಹೊಸದಿಲ್ಲಿ,ಜೂ.1: ಪ್ರಮುಖ ಆದ್ಯತಾ ವ್ಯಾಪಾರ ಯೋಜನೆಯಡಿ ಫಲಾನುಭವಿ ದೇಶವಾಗಿ ಭಾರತದ ಮಾನ್ಯತೆಯನ್ನು ಅಂತ್ಯಗೊಳಿಸಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕ್ರಮಕ್ಕೆ ಶುಕ್ರವಾರ ಪ್ರತಿಕ್ರಿಯಿಸಿರುವ ಸರಕಾರವು ‘ನಮ್ಮ ಜನರೂ ಉತ್ತಮ ಜೀವನ ಮಟ್ಟಕ್ಕಾಗಿ ಹಂಬಲಿಸುತ್ತಿರುವುದರಿಂದ ಭಾರತವು ವ್ಯಾಪಾರ ವಿಷಯಗಳಲ್ಲಿ ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ಸದಾ ಎತ್ತಿ ಹಿಡಿಯುತ್ತದೆ ’ ಎಂದು ಹೇಳಿದೆ.

ನಮ್ಮ ದ್ವಿಪಕ್ಷೀಯ ವ್ಯಾಪಾರ ಚರ್ಚೆಗಳ ಭಾಗವಾಗಿ ಪರಸ್ಪರ ಸ್ವೀಕಾರಾರ್ಹ ಮಾರ್ಗವನ್ನು ಕಂಡುಕೊಳ್ಳುವ ಪ್ರಯತ್ನವಾಗಿ ಅಮೆರಿಕದ ಮಹತ್ವದ ಕೋರಿಕೆಗಳ ಕುರಿತಂತೆ ಭಾರತವು ಪರಿಹಾರವೊಂದನ್ನು ಮುಂದಿರಿಸಿತ್ತು. ಇದನ್ನು ಅಮೆರಿಕವು ಒಪ್ಪಿಕೊಳ್ಳದಿದ್ದುದು ದುರದೃಷ್ಟಕರವಾಗಿದೆ ಎಂದು ಸರಕಾರವು ಹೇಳಿಕೆಯಲ್ಲಿ ತಿಳಿಸಿದೆ.

‘ದಿ ಜನರಲೈಸ್ಡ್ ಸಿಸ್ಟಮ್ ಆಫ್ ಪ್ರಿಫರನ್ಸ್(ಜಿಎಸ್‌ಪಿ)’ ಅಮೆರಿಕದ ಬೃಹತ್ ಮತ್ತು ಅತ್ಯಂತ ಹಳೆಯ ವ್ಯಾಪಾರ ಆದ್ಯತೆ ಯೋಜನೆಯಾಗಿದ್ದು,ಮಾನ್ಯತೆ ಹೊಂದಿದ ಫಲಾನುಭವಿ ದೇಶಗಳಿಂದ ಸಾವಿರಾರು ವಸ್ತುಗಳ ಸುಂಕಮುಕ್ತ ಆಮದಿಗೆ ಅವಕಾಶ ನೀಡುವ ಮೂಲಕ ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸಲು ರೂಪಿಸಲ್ಪಟ್ಟಿದೆ.

ಅಮೆರಿಕದ ಸರಕುಗಳಿಗೆ ತನ್ನ ಮಾರುಕಟ್ಟೆಗಳಲ್ಲಿ ನ್ಯಾಯಸಮ್ಮತ ಮತ್ತು ಯುಕ್ತ ಪ್ರವೇಶವನ್ನೊದಗಿಸುವುದಾಗಿ ಭಾರತವು ಭರವಸೆ ನೀಡಿಲ್ಲ,ಹೀಗಾಗಿ ಫಲಾನುಭವಿ ಅಭಿವೃದ್ಧಿಶೀಲ ರಾಷ್ಟ್ರ ಎಂಬ ಅದರ ಮಾನ್ಯತೆಯನ್ನು 2019,ಜೂನ್ 5ರಿಂದ ಅಂತ್ಯಗೊಳಿಸಲು ತಾನು ನಿರ್ಧರಿಸಿದ್ದೇನೆ ಎಂದು ಟ್ರಂಪ್ ಶುಕ್ರವಾರ ಹೇಳಿದ್ದರು. ಈ ಕ್ರಮವು ದೇಶದ ಉದ್ಯಮಗಳಿಗೆ ಹಾನಿಯನ್ನುಂಟು ಮಾಡಬಹುದಾದ್ದರಿಂದ ನಿರ್ಧಾರವನ್ನು ಹಿಂದೆಗೆದುಕೊಳ್ಳುವಂತೆ ಅಮೆರಿಕದ ಹಲವಾರು ಹಿರಿಯ ಸಂಸತ್ ಸದಸ್ಯರು ಮಾಡಿಕೊಂಡಿದ್ದ ಮನವಿಗಳನ್ನು ಅವರು ಕಿವಿಗೆ ಹಾಕಿಕೊಂಡಿಲ್ಲ.

ಟ್ರಂಪ್ ನಿರ್ಧಾರದಿಂದಾಗಿ ಅಮೆರಿಕದ ಉದ್ಯಮಗಳು ಪ್ರತಿವರ್ಷ 300 ಮಿ.ಡಾ.ಗೂ ಅಧಿಕ ಸುಂಕದ ಹೊರೆಯನ್ನು ಭರಿಸಬೇಕಾಗುತ್ತದೆ. ಜಿಎಸ್‌ಪಿ ಸೌಲಭ್ಯವಿಲ್ಲದೆ ಅಮೆರಿಕದ ಸಣ್ಣ ಉದ್ಯಮಗಳು ಹೊಸ ತೆರಿಗೆಯನ್ನು ಎದುರಿಸಬೇಕಾಗುತ್ತದೆ ಮತ್ತು ಇದು ಉದ್ಯೋಗ ನಷ್ಟ,ಹೂಡಿಕೆಗಳ ಹಿಂದೆಗೆತ ಮತ್ತು ಗ್ರಾಹಕರಿಗೆ ಬೆಲೆಏರಿಕೆಯ ಬಿಸಿಗೆ ಕಾರಣವಾಗುತ್ತದೆ. ಅಮೆರಿಕದ ರಫ್ತುಗಳಿಗೆ ತನ್ನ ಮಾರುಕಟೆಯಲ್ಲಿ ಪ್ರವೇಶ ಕಲ್ಪಿಸಲು ಮಾತುಕತೆಗೆ ಭಾರತವು ಸಿದ್ಧವಿದ್ದರೂ ಟ್ರಂಪ್ ಸರಕಾರವು ಈ ಕ್ರಮವನ್ನು ತೆಗೆದುಕೊಂಡಿದೆ. ಈ ನಿರ್ಧಾರದಿಂದ ಯಾರಿಗೂ ಲಾಭವಿಲ್ಲ. ಅಮೆರಿಕದ ಆಮದುದಾರರು ಹೆಚ್ಚಿನ ಬೆಲೆಯನ್ನು ತೆರುತ್ತಾರೆ ಮತ್ತು ರಫ್ತುದಾರರ ಪಾಲಿಗೆ ಭಾರತದಲ್ಲಿ ಮಾರುಕಟ್ಟೆ ಪ್ರವೇಶ ನಿರ್ಬಂಧಗಳು ಮುಂದುವರಿಯುತ್ತವೆ ಎಂದು ಜಿಎಸ್‌ಪಿ ಪರ ಕೂಟದ ಕಾರ್ಯಕಾರಿ ನಿರ್ದೇಶಕ ಡ್ಯಾನ್ ಆ್ಯಂಥನಿ ಅವರು ಹೇಳಿದ್ದಾರೆ.

ಜಿಎಸ್‌ಪಿ ಯೋಜನೆಯಡಿ ಅಮೆರಿಕದ ಕಾಂಗ್ರೆಸ್ ನಿಗದಿಗೊಳಿಸಿರುವ ಅರ್ಹತಾ ಮಾನದಂಡಗಳನ್ನು ಫಲಾನುಭವಿ ದೇಶಗಳು ಪೂರೈಸಿದರೆ ವಾಹನ ಬಿಡಿಭಾಗಗಳು ಮತ್ತು ಜವಳಿ ಸೇರಿದಂತೆ ಸುಮಾರು 2,000 ಸರಕುಗಳನ್ನು ಸುಂಕಮುಕ್ತವಾಗಿ ಅಮೆರಿಕದ ಮಾರುಕಟ್ಟೆಯನ್ನು ತಲುಪಿಸಬಹುದಾಗಿದೆ.

ಭಾರತವು 2017ರಲ್ಲಿ 5.7 ಶತಕೋಟಿ ವೌಲ್ಯದ ಸರಕುಗಳನ್ನು ಅಮೆರಿಕಕ್ಕೆ ಸುಂಕಮುಕ್ತವಾಗಿ ರಫ್ತು ಮಾಡುವ ಮೂಲಕ ಯೋಜನೆಯಡಿ ಅತ್ಯಂತ ದೊಡ್ಡ ಫಲಾನುಭವಿ ರಾಷ್ಟ್ರವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X