Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ವಿವಿ ಸಂಧ್ಯಾ ಕಾಲೇಜಿನಲ್ಲಿ...

ಮಂಗಳೂರು ವಿವಿ ಸಂಧ್ಯಾ ಕಾಲೇಜಿನಲ್ಲಿ ವಿದ್ಯಾಭ್ಯಾಸಕ್ಕೆ ಅವಕಾಶ

ವಾರ್ತಾಭಾರತಿವಾರ್ತಾಭಾರತಿ2 Jun 2019 6:15 PM IST
share

ಮಂಗಳೂರು, ಜೂ.2: ನಗರದ ಹೃದಯ ಭಾಗವಾಗಿರುವ ಹಂಪನಕಟ್ಟೆಯಲ್ಲಿ 2016-17ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಾರಂಭಿಸಲ್ಪಟ್ಟ ಮಂಗಳೂರು ವಿಶ್ವ ವಿದ್ಯಾನಿಲಯ ಸಂಧ್ಯಾ ಕಾಲೇಜು ಕೌಟುಂಬಿಕ ಜವಾಬ್ದಾರಿ, ಆರ್ಥಿಕ ಸಂಕಷ್ಟಗಳಂತಹ ಅನಿವಾರ್ಯ ಕಾರಣಗಳಿಂದ ವಿದ್ಯಾಭ್ಯಾಸವನ್ನು ಪದವಿ ಹಂತದಲ್ಲಿಯೇ ಮೊಟಕುಗೊಳಿಸಿ ಉನ್ನತ ವಿದ್ಯಾಭ್ಯಾಸದ ಕನಸು ಕಾಣುತ್ತಿರುವವ ವಿದ್ಯಾಕಾಂಕ್ಷಿಗಳಿಗೆ ಭರವಸೆಯ ಆಶಾಕಿರಣವಾಗಿದೆ.

ಹಗಲು ಹೊತ್ತು ಉದ್ಯೋಗ, ವ್ಯಾಪಾರ ಅಥವಾ ಇತರ ವ್ಯಾಸಂಗ ಮಾಡಿಕೊಂಡು ಸಂಜೆಯ ವೇಳೆ ಪದವಿ ವಿದ್ಯಾಭ್ಯಾಸವನ್ನು ಈ ಕಾಲೇಜಿನಲ್ಲಿ ಸರಕಾರಿ ಶುಲ್ಕು ಪಾವತಿಸಿ ಮುಂದುವರಿಸಬಹುದಾಗಿದೆ. ಪ್ರಸ್ತುತ ಕಾಲೇಜಿನಲ್ಲಿ ಪದವಿ ಹಂತದಲ್ಲಿ ಬಿ.ಎ., ಬಿ.ಕಾಂ ಹಾಗೂ ಬಿ.ಸಿ.ಎ ವಿಭಾಗ ಗಳಿದ್ದು, ಸ್ನಾತಕೋತ್ತರ ಪದವಿ ಹಂತದಲ್ಲಿ ಎಂಬಿಎ (ಐಬಿ), ಎಂಕಾಂ, ಕೊಂಕಣಿ, ಇಂಗ್ಲಿಷ್ ಹಾಗೂ ತುಳು ಸ್ನಾತಕೋತ್ತರ ವಿಭಾಗಗಳು ಹಾಗೂ ಫ್ರೆಂಚ್ ಹಾಗೂ ಜರ್ಮನ್ ಭಾಷೆಗಳಲ್ಲಿ ಸರ್ಟಿಫಿಕೇಟ್ ಕೋರ್ಸ್‌ಗಳು ಲಭ್ಯವಿದೆ.

ಪದವಿ ಹಂತದಲ್ಲಿ ಬಿಎ ವಿಭಾಗದಲ್ಲಿ ಅರ್ಥಶಾಸ್ತ್ರ, ಇತಿಹಾಸ ವಿಷಯಗಳೊಂದಿಗೆ ಪತ್ರಿಕೋದ್ಯಮ ವಿಷಯವನ್ನು ಅಧ್ಯಯನ ಮಾಡಬಹುದಾಗಿದೆ. ಬಿಎ ವಿಭಾಗದ ಅಧ್ಯಯನವು ರಾಜ್ಯ ಮತ್ತು ಕೇಂದ್ರ ಸರಕಾರಗಳ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಉತ್ತಮ ಆಯ್ಕೆಯಾಗಿರುತ್ತದೆ. ಪತ್ರಿಕೋದ್ಯಮ ವಿಷಯದ ಅಧ್ಯಯನವು ಇಂದಿನ ಸಮಯದಲ್ಲಿ ಅತಿ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಮಾಧ್ಯಮ ಕ್ಷೇತ್ರದಲ್ಲಿರುವ ವಿವಿಧ ಉದ್ಯೋಗದ ಅವಕಾಶಗಳನ್ನು ಬಾಚಿಕೊಳ್ಳಲು ಸಹಕಾರಿಯಾಗಿರುತ್ತದೆ. ಮಂಗಳೂರು ವಿಶ್ವ ವಿದ್ಯಾನಿಲಯದ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಧ್ಯಾ ಕಾಲೇಜುಗಳಲ್ಲಿ ವಿವಿ ಸಂಧ್ಯಾ ಕಾಲೇಜಿನಲ್ಲಿ ಮಾತ್ರ ಪತ್ರಿಕೋದ್ಯಮ ವಿಷಯವು ಸುಸಜ್ಜಿತವಾದ ಮಾಧ್ಯಮ ಪ್ರಯೋಗಾಲಯದೊಂದಿಗೆ ಲಭ್ಯವಿರುತ್ತದೆ.

ಸಿಎ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೂ ಹಾಗೂ ಇತರೆ ಉದ್ಯೋಗ ಮಾಡಿಕೊಂಡಿರುವ ವಿದ್ಯಾರ್ಥಿಗಳಿಗೂ ಬಿಎ ಮತ್ತು ಬಿಸಿಎ ಕೋರ್ಸ್‌ಗಳು ಉಪಯುಕ್ತವಾಗಿವೆ. ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ತರಗತಿಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದು ವಿವಿಧ ಕೋರ್ಸ್‌ಗಳಿಗೆ ಸೀಟುಗಳು ಲಭ್ಯವಿದೆ. ಆಸಕ್ತರು ಪ್ರಾಂಶುಪಾಲ ಡಾ.ರಾಮಕೃಷ್ಣ ಬಿ.ಎಂ. (9448427705) ಅವರನ್ನು ಸಂಪರ್ಕಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X